Homeಮುಖಪುಟಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ...

ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

- Advertisement -
- Advertisement -

ಚೀನಾದ ಸಂಸ್ಥೆಗಳಿಂದ ಹಣ ಸ್ವೀಕರಿಸುವುದೆಂದರೆ ಉಯ್ಯಾಲೆಯಲ್ಲಿ ಜಾಗ ಹಂಚಿಕೊಳ್ಳುವಷ್ಟೇ ಸಹಜ ಮತ್ತು ಸ್ವೀಕಾರಾರ್ಹ ಎನಿಸಿದ್ದ ಕಾಲವಿತ್ತು. ಹಾಗಿದ್ದರೂ ಬಿಜೆಪಿಯು ಗಾಲ್ವಾನ್ ಪ್ರಮಾದದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಧಾವಂತದಲ್ಲಿ ಒಂದು ಆಡುಮಾತನ್ನು ಮರೆತುಬಿಟ್ಟಿದೆ. ಅದೆಂದರೆ ನೀವು ಬೇರೆಯವರ ಕಡೆಗೆ ಬೆರಳು ತೋರಿಸಿದಾಗ ಮೂರು ಬೆರಳುಗಳು ನಿಮ್ಮನ್ನು ತೋರಿಸುತ್ತವೆ. ಈ ಪ್ರಕರಣದಲ್ಲಿ ಕನಿಷ್ಟ ಎರಡು ಬೆರಳುಗಳು ಬಿಜೆಪಿಯ ಆಂತರಿಕ ವ್ಯವಸ್ಥೆಯತ್ತ ತೋರಿಸುತ್ತಿವೆ.

ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಮಗನ ವಿದೇಶಾಂಗ ಧೋರಣೆಯ ಚಿಂತನಾ ಚಾವಡಿಯಾದ “ದಿ ಒಬ್ಸರ್ವರ್ ರಿಸರ್ಚ್ ಫೌಂಡೇಶನ್” (ಓಆರ್‌ಎಫ್) 2016ರಲ್ಲಿ ಕೋಲ್ಕತ್ತಾದ ಸೇರಿದಂತೆ ಚೀನಾದ ಉಪರಾಯಭಾರ ಕಚೇರಿಗಳಿಂದ (ಕಾನ್ಸ್ಯೂಲೇಟ್) ಹಣಕಾಸು ಪಡೆದಿದೆ. ಅಲ್ಲದೇ ಓಆರ್‌ಎಫ್‌ಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಣಕಾಸು ಬೆಂಬಲವೂ ಇದೆ.

ಆರೆಸ್ಸೆಸ್‌ಗೆ ಹತ್ತಿರವಾಗಿರುವ ಇನ್ನೊಂದು ಚಿಂತನಾ ಚಾವಡಿಯಾಗಿರುವ ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ತನ್ನ ವೆಬ್‌ಸೈಟಿನಲ್ಲಿ, ತಾನು ವಿದೇಶಾಂಗ ಮತ್ತು ಕಾರ್ಯವ್ಯೂಹಾತ್ಮಕ ಧೋರಣೆಯ ವಿಷಯದಲ್ಲಿ ಒಂಬತ್ತು ಚೀನಿ ಸಂಸ್ಥೆಗಳೊಂದಿಗೆ ವೃತ್ತಿಪರ ಸಂಬಂಧ ಹೊಂದಿರುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ (ವಿಐಎಫ್)ನ ಸ್ಥಾಪಕ ನಿರ್ದೇಶಕರಾಗಿದ್ದು, ಅದು ಬಿಜೆಪಿ ಮತ್ತು ಆರೆಸ್ಸೆಸ್ ಜೊತೆ ನಿಕಟ ನಂಟು ಹೊಂದಿದೆ. ಈ ಎರಡೂ ಸಂಸ್ಥೆಗಳು ಈ ಮಾಹಿತಿಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹೇಳಿಕೊಂಡಿವೆ.

ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ನಲ್ಲಿ ಅಜಿತ್ ದೋವಲ್. (ಬಲದಿಂದ ಮೊದಲನೆಯವರು)

ಒಂದು ವೇಳೆ ಬಿಜೆಪಿಯು 2005-06ರಷ್ಟು ಹಿಂದೆ ಪಡೆದ ಹಣವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು ಚೀನಾ ನಂಟು ಹೊಂದಿದೆ ಎಂದು ಆರೋಪಿಸಿ ನಗಣ್ಯ ವಿಷಯವನ್ನು ಒಂದು ದೊಡ್ಡ ರಾಷ್ಟ್ರೀಯ ಭದ್ರತಾ ವಿಷಯವನ್ನಾಗಿ ಮಾಡಲು ಹೊರಡದಿದ್ದರೆ, ಈ ಎರಡೂ ಸಂಸ್ಥೆಗೆ ದೇಣಿಗೆ ನೀಡಿದ ದಾನಿಗಳ ಗುರುತು ಪರಿಚಯ ಯಾರ ಗಮನವನ್ನೂ ಸೆಳೆಯುತ್ತಿರಲಿಲ್ಲ. ವಿಶ್ವದಾದ್ಯಂತ ಸಂಸ್ಥೆಗಳು ವಿದೇಶಿ ದೇಣಿಗೆ ಪಡೆಯುವುದು ಸಾಮಾನ್ಯವಾಗಿದೆ.

ವಿದೇಶಾಂಗ ಸಚಿವರ ಮಗ ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಕಳೆದ ವರ್ಷ ಯುಎಸ್‌ಎಗೆ ಸಂಬಂಧಿಸಿದ ವಿಷಯಗಳ ನಿರ್ದೇಶಕರಾದರು. ಚೀನಾ ದೇಶಕ್ಕೆ ಭಾರತದ ಮಾಜಿ ರಾಯಭಾರಿಯೂ ಆಗಿರುವ ವಿದೇಶಾಂಗ ಸಚಿವರು ಓಆರ್‌ಎಫ್‌ಗೆ ನಿಯಮಿತವಾಗಿ ಭೇಟಿ ನೀಡಿ, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಉಪನ್ಯಾಸಗಳನ್ನು ನೀಡುತ್ತಾರೆ.

ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಮಾತನಾಡುತ್ತಿರುವುದು

ಜೈಶಂಕರ್ ಅವರ ಓಆರ್‌ಎಫ್‌ನ ವೆಬ್‌ಸೈಟಿನಲ್ಲಿ ವಿದೇಶಿ ದಾನಿಗಳ ಪಟ್ಟಿಯನ್ನು ನೀಡಲಾಗಿದ್ದು, ಅವರಿಂದ ಪಡೆದ ಹಣದ ಮೊತ್ತವನ್ನೂ ನಮೂದಿಸಲಾಗಿದೆ. ಅದರಂತೆ, ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

ಸಂಸ್ಥೆಯು ಕೊಲ್ಕತ್ತಾದ “ಕಾನ್ಸ್ಯೂಲೇಟ್ ಜನರಲ್ ಆಫ್ ರಿಪಬ್ಲಿಕ್ ಆಫ್ ಚೈನಾ”ದಿಂದ ಎಪ್ರಿಲ್ 29, 2016ರಂದು 7.7 ಲಕ್ಷ ರೂ., ಅದೇ ವರ್ಷ ನವಂಬರ್ 4ರಂದು 11.55 ಲಕ್ಷ ರೂ. ಮತ್ತೊಮ್ಮೆ ಡಿಸೆಂಬರ್ 1, 2017ರಂದು 50 ಲಕ್ಷ ರೂ. ದೇಣಿಗೆ ಪಡೆದಿದೆ.

ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ತಾನು ಸಂಬಂಧ ಹೊಂದಿರುವ ಚೀನಾದ ಸಂಸ್ಥೆಗಳ ಪಟ್ಟಿ ನೀಡಿದೆ. ಅವುಗಳೆಂದರೆ, ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿಕ್ ಸ್ಟಡೀಸ್; ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್  ಸ್ಟಡೀಸ್; ಬೀಜಿಂಗ್‌ನ ಸೆಂಟರ್ ಫಾರ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಪೆಕಿಂಗ್ ಯುನಿವರ್ಸಿಟಿ; ಕುನ್‌ಮಿಂಗ್‌ನ ಯುನಾನ್ ಯುನಿವರ್ಸಿಟಿ ಆಫ್ ಫೈನಾನ್ಸ್ ಎಂಡ್ ಇಕನಾಮಿಕ್ಸ್‌ನ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಇಂಡಿಯನ್ ಓಶನ್ ಸ್ಟಡೀಸ್; ಬೀಜಿಂಗ್‌ನ ಚೈನೀಸ್ ಅಕಾಡೆಮಿ ಆಫ್ ಸೋಷಿಯಲ್ ಸಾಯನ್ಸಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿ; ಚೆಂಗ್ಡೂವಿನ ಸೆಂಟರ್ ಫಾರ್ ಸೌತ್ ಏಷ್ಯಾ ಎಂಡ್ ವೆಸ್ಟ್ ಚೈನಾ ಕೊಅಪರೇಷನ್ ಎಂಡ್ ಡೆವಲಪ್‌ಮೆಂಟ್ ಯುನಿವರ್ಸಿಟಿ; ಚೆಂಗ್ಡೂವಿನ ಸಿಚುವಾನ್ ಯುನಿವರ್ಸಿಟಿಯ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಸಿಲ್ಕ್ ರೋಡ್ ಥಿಂಕ್ ಟ್ಯಾಂಕ್ ನೆಟ್‌ವರ್ಕ್ ಡೆವಲಪ್‌ಮೆಂಟ್ ರಿಸರ್ಚ್ ಕೌನ್ಸಿಲ್; ಮತ್ತು ಶೆನ್‌ಝೆನ್‌ನ ಸೆಂಟರ್ ಫಾರ್ ಇಂಡಿಯನ್ ಸ್ಟಡೀಸ್.

ಭಾರತದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಒಆರ್‌ಎಫ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೀನಾದ ಪ್ರತಿನಿಧಿಗಳು ಭಾಗವಹಿಸಿರುವುದು

ರಕ್ಷಣಾ ವಲಯದ ಮೂಲಗಳ ಪ್ರಕಾರ ಈ ಎರಡು ಚಿಂತನಾ ಚಾವಡಿಗಳ ಸದಸ್ಯರಿಗೆ ಆಡಳಿತದ ನಾರ್ಥ್ ಬ್ಲಾಕ್ ಮತ್ತು ಸೌತ್ ಬ್ಲಾಕ್ (ಹಣಕಾಸು ಮತ್ತು ವಿದೇಶಾಂಗ ಸಚಿವಾಲಯಗಳು)ಗಳಿಗೆ ಸಾಕಷ್ಟು ಮುಕ್ತವಾದ ಪ್ರವೇಶವಿದೆ.

ಎರಡೂ ಸಂಸ್ಥೆಗಳನ್ನು ಇ- ಮೈಲ್ ಮತ್ತು ಟ್ವಿಟ್ಟರ್ ಮೂಲಕ ಸಂಪರ್ಕಿಸಿದಾಗ ಯಾವುದೇ ವಿವರಣೆ ಬಂದಿಲ್ಲವಾದರೂ, ಈ ವರದಿಯು ಈ ದೇಣಿಗೆಗಳು ಕಾನೂನುಬದ್ಧವಲ್ಲ ಎಂದು ಸೂಚಿಸುತ್ತಿಲ್ಲ.

ಆದರೆ, ತನ್ನ ವಿದೇಶಾಂಗ ಸಚಿವರು ಮತ್ತು ಸರಕಾರದ ಭದ್ರತಾ ಸಲಹೆಗಾರರು ಭಾಗಿಯಾಗಿರುವ ಮತ್ತು ತನಗೆ ನಿಕಟವಾಗಿರುವ ಸಂಸ್ಥೆಗಳು ಚೀನಾದ ಸರಕಾರ ಮತ್ತು ಸಂಸ್ಥೆಗಳಿಂದ ದೇಣಿಗೆ ಪಡೆದಿರುವಾಗ, ಒಂದೂವರೆ ದಶಕದ ಹಿಂದೆ ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯನ್ನು  ಹಿಡಿದುಕೊಂಡು ರಾಷ್ಟ್ರೀಯ ಭದ್ರತಾ ಪ್ರಶ್ನೆಯನ್ನು ಎತ್ತಿರುವ ಬಿಜೆಪಿ ನಡೆಯು ತನ್ನ ಬಟ್ಟಲಿನಲ್ಲಿ ಹೆಗ್ಗಣ ಇಟ್ಟುಕೊಂಡು, ಕಾಂಗ್ರೆಸ್ ಬಟ್ಟಲಿನಲ್ಲಿ ನೊಣವನ್ನು ತೋರಿಸಿದಂತಾಗಿದೆ.

ಕೃಪೆ: ಟೆಲಿಗ್ರಾಫ್‌ಇಂಡಿಯಾ

ಅನುವಾದ: ನಿಖಲ್ ಕೋಲ್ಪೆ


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...