Homeಮುಖಪುಟಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ...

ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

- Advertisement -
- Advertisement -

ಚೀನಾದ ಸಂಸ್ಥೆಗಳಿಂದ ಹಣ ಸ್ವೀಕರಿಸುವುದೆಂದರೆ ಉಯ್ಯಾಲೆಯಲ್ಲಿ ಜಾಗ ಹಂಚಿಕೊಳ್ಳುವಷ್ಟೇ ಸಹಜ ಮತ್ತು ಸ್ವೀಕಾರಾರ್ಹ ಎನಿಸಿದ್ದ ಕಾಲವಿತ್ತು. ಹಾಗಿದ್ದರೂ ಬಿಜೆಪಿಯು ಗಾಲ್ವಾನ್ ಪ್ರಮಾದದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಧಾವಂತದಲ್ಲಿ ಒಂದು ಆಡುಮಾತನ್ನು ಮರೆತುಬಿಟ್ಟಿದೆ. ಅದೆಂದರೆ ನೀವು ಬೇರೆಯವರ ಕಡೆಗೆ ಬೆರಳು ತೋರಿಸಿದಾಗ ಮೂರು ಬೆರಳುಗಳು ನಿಮ್ಮನ್ನು ತೋರಿಸುತ್ತವೆ. ಈ ಪ್ರಕರಣದಲ್ಲಿ ಕನಿಷ್ಟ ಎರಡು ಬೆರಳುಗಳು ಬಿಜೆಪಿಯ ಆಂತರಿಕ ವ್ಯವಸ್ಥೆಯತ್ತ ತೋರಿಸುತ್ತಿವೆ.

ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಮಗನ ವಿದೇಶಾಂಗ ಧೋರಣೆಯ ಚಿಂತನಾ ಚಾವಡಿಯಾದ “ದಿ ಒಬ್ಸರ್ವರ್ ರಿಸರ್ಚ್ ಫೌಂಡೇಶನ್” (ಓಆರ್‌ಎಫ್) 2016ರಲ್ಲಿ ಕೋಲ್ಕತ್ತಾದ ಸೇರಿದಂತೆ ಚೀನಾದ ಉಪರಾಯಭಾರ ಕಚೇರಿಗಳಿಂದ (ಕಾನ್ಸ್ಯೂಲೇಟ್) ಹಣಕಾಸು ಪಡೆದಿದೆ. ಅಲ್ಲದೇ ಓಆರ್‌ಎಫ್‌ಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಣಕಾಸು ಬೆಂಬಲವೂ ಇದೆ.

ಆರೆಸ್ಸೆಸ್‌ಗೆ ಹತ್ತಿರವಾಗಿರುವ ಇನ್ನೊಂದು ಚಿಂತನಾ ಚಾವಡಿಯಾಗಿರುವ ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ತನ್ನ ವೆಬ್‌ಸೈಟಿನಲ್ಲಿ, ತಾನು ವಿದೇಶಾಂಗ ಮತ್ತು ಕಾರ್ಯವ್ಯೂಹಾತ್ಮಕ ಧೋರಣೆಯ ವಿಷಯದಲ್ಲಿ ಒಂಬತ್ತು ಚೀನಿ ಸಂಸ್ಥೆಗಳೊಂದಿಗೆ ವೃತ್ತಿಪರ ಸಂಬಂಧ ಹೊಂದಿರುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ (ವಿಐಎಫ್)ನ ಸ್ಥಾಪಕ ನಿರ್ದೇಶಕರಾಗಿದ್ದು, ಅದು ಬಿಜೆಪಿ ಮತ್ತು ಆರೆಸ್ಸೆಸ್ ಜೊತೆ ನಿಕಟ ನಂಟು ಹೊಂದಿದೆ. ಈ ಎರಡೂ ಸಂಸ್ಥೆಗಳು ಈ ಮಾಹಿತಿಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹೇಳಿಕೊಂಡಿವೆ.

ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ನಲ್ಲಿ ಅಜಿತ್ ದೋವಲ್. (ಬಲದಿಂದ ಮೊದಲನೆಯವರು)

ಒಂದು ವೇಳೆ ಬಿಜೆಪಿಯು 2005-06ರಷ್ಟು ಹಿಂದೆ ಪಡೆದ ಹಣವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು ಚೀನಾ ನಂಟು ಹೊಂದಿದೆ ಎಂದು ಆರೋಪಿಸಿ ನಗಣ್ಯ ವಿಷಯವನ್ನು ಒಂದು ದೊಡ್ಡ ರಾಷ್ಟ್ರೀಯ ಭದ್ರತಾ ವಿಷಯವನ್ನಾಗಿ ಮಾಡಲು ಹೊರಡದಿದ್ದರೆ, ಈ ಎರಡೂ ಸಂಸ್ಥೆಗೆ ದೇಣಿಗೆ ನೀಡಿದ ದಾನಿಗಳ ಗುರುತು ಪರಿಚಯ ಯಾರ ಗಮನವನ್ನೂ ಸೆಳೆಯುತ್ತಿರಲಿಲ್ಲ. ವಿಶ್ವದಾದ್ಯಂತ ಸಂಸ್ಥೆಗಳು ವಿದೇಶಿ ದೇಣಿಗೆ ಪಡೆಯುವುದು ಸಾಮಾನ್ಯವಾಗಿದೆ.

ವಿದೇಶಾಂಗ ಸಚಿವರ ಮಗ ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಕಳೆದ ವರ್ಷ ಯುಎಸ್‌ಎಗೆ ಸಂಬಂಧಿಸಿದ ವಿಷಯಗಳ ನಿರ್ದೇಶಕರಾದರು. ಚೀನಾ ದೇಶಕ್ಕೆ ಭಾರತದ ಮಾಜಿ ರಾಯಭಾರಿಯೂ ಆಗಿರುವ ವಿದೇಶಾಂಗ ಸಚಿವರು ಓಆರ್‌ಎಫ್‌ಗೆ ನಿಯಮಿತವಾಗಿ ಭೇಟಿ ನೀಡಿ, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಉಪನ್ಯಾಸಗಳನ್ನು ನೀಡುತ್ತಾರೆ.

ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಮಾತನಾಡುತ್ತಿರುವುದು

ಜೈಶಂಕರ್ ಅವರ ಓಆರ್‌ಎಫ್‌ನ ವೆಬ್‌ಸೈಟಿನಲ್ಲಿ ವಿದೇಶಿ ದಾನಿಗಳ ಪಟ್ಟಿಯನ್ನು ನೀಡಲಾಗಿದ್ದು, ಅವರಿಂದ ಪಡೆದ ಹಣದ ಮೊತ್ತವನ್ನೂ ನಮೂದಿಸಲಾಗಿದೆ. ಅದರಂತೆ, ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

ಸಂಸ್ಥೆಯು ಕೊಲ್ಕತ್ತಾದ “ಕಾನ್ಸ್ಯೂಲೇಟ್ ಜನರಲ್ ಆಫ್ ರಿಪಬ್ಲಿಕ್ ಆಫ್ ಚೈನಾ”ದಿಂದ ಎಪ್ರಿಲ್ 29, 2016ರಂದು 7.7 ಲಕ್ಷ ರೂ., ಅದೇ ವರ್ಷ ನವಂಬರ್ 4ರಂದು 11.55 ಲಕ್ಷ ರೂ. ಮತ್ತೊಮ್ಮೆ ಡಿಸೆಂಬರ್ 1, 2017ರಂದು 50 ಲಕ್ಷ ರೂ. ದೇಣಿಗೆ ಪಡೆದಿದೆ.

ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ತಾನು ಸಂಬಂಧ ಹೊಂದಿರುವ ಚೀನಾದ ಸಂಸ್ಥೆಗಳ ಪಟ್ಟಿ ನೀಡಿದೆ. ಅವುಗಳೆಂದರೆ, ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿಕ್ ಸ್ಟಡೀಸ್; ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್  ಸ್ಟಡೀಸ್; ಬೀಜಿಂಗ್‌ನ ಸೆಂಟರ್ ಫಾರ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಪೆಕಿಂಗ್ ಯುನಿವರ್ಸಿಟಿ; ಕುನ್‌ಮಿಂಗ್‌ನ ಯುನಾನ್ ಯುನಿವರ್ಸಿಟಿ ಆಫ್ ಫೈನಾನ್ಸ್ ಎಂಡ್ ಇಕನಾಮಿಕ್ಸ್‌ನ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಇಂಡಿಯನ್ ಓಶನ್ ಸ್ಟಡೀಸ್; ಬೀಜಿಂಗ್‌ನ ಚೈನೀಸ್ ಅಕಾಡೆಮಿ ಆಫ್ ಸೋಷಿಯಲ್ ಸಾಯನ್ಸಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿ; ಚೆಂಗ್ಡೂವಿನ ಸೆಂಟರ್ ಫಾರ್ ಸೌತ್ ಏಷ್ಯಾ ಎಂಡ್ ವೆಸ್ಟ್ ಚೈನಾ ಕೊಅಪರೇಷನ್ ಎಂಡ್ ಡೆವಲಪ್‌ಮೆಂಟ್ ಯುನಿವರ್ಸಿಟಿ; ಚೆಂಗ್ಡೂವಿನ ಸಿಚುವಾನ್ ಯುನಿವರ್ಸಿಟಿಯ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಸಿಲ್ಕ್ ರೋಡ್ ಥಿಂಕ್ ಟ್ಯಾಂಕ್ ನೆಟ್‌ವರ್ಕ್ ಡೆವಲಪ್‌ಮೆಂಟ್ ರಿಸರ್ಚ್ ಕೌನ್ಸಿಲ್; ಮತ್ತು ಶೆನ್‌ಝೆನ್‌ನ ಸೆಂಟರ್ ಫಾರ್ ಇಂಡಿಯನ್ ಸ್ಟಡೀಸ್.

ಭಾರತದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಒಆರ್‌ಎಫ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೀನಾದ ಪ್ರತಿನಿಧಿಗಳು ಭಾಗವಹಿಸಿರುವುದು

ರಕ್ಷಣಾ ವಲಯದ ಮೂಲಗಳ ಪ್ರಕಾರ ಈ ಎರಡು ಚಿಂತನಾ ಚಾವಡಿಗಳ ಸದಸ್ಯರಿಗೆ ಆಡಳಿತದ ನಾರ್ಥ್ ಬ್ಲಾಕ್ ಮತ್ತು ಸೌತ್ ಬ್ಲಾಕ್ (ಹಣಕಾಸು ಮತ್ತು ವಿದೇಶಾಂಗ ಸಚಿವಾಲಯಗಳು)ಗಳಿಗೆ ಸಾಕಷ್ಟು ಮುಕ್ತವಾದ ಪ್ರವೇಶವಿದೆ.

ಎರಡೂ ಸಂಸ್ಥೆಗಳನ್ನು ಇ- ಮೈಲ್ ಮತ್ತು ಟ್ವಿಟ್ಟರ್ ಮೂಲಕ ಸಂಪರ್ಕಿಸಿದಾಗ ಯಾವುದೇ ವಿವರಣೆ ಬಂದಿಲ್ಲವಾದರೂ, ಈ ವರದಿಯು ಈ ದೇಣಿಗೆಗಳು ಕಾನೂನುಬದ್ಧವಲ್ಲ ಎಂದು ಸೂಚಿಸುತ್ತಿಲ್ಲ.

ಆದರೆ, ತನ್ನ ವಿದೇಶಾಂಗ ಸಚಿವರು ಮತ್ತು ಸರಕಾರದ ಭದ್ರತಾ ಸಲಹೆಗಾರರು ಭಾಗಿಯಾಗಿರುವ ಮತ್ತು ತನಗೆ ನಿಕಟವಾಗಿರುವ ಸಂಸ್ಥೆಗಳು ಚೀನಾದ ಸರಕಾರ ಮತ್ತು ಸಂಸ್ಥೆಗಳಿಂದ ದೇಣಿಗೆ ಪಡೆದಿರುವಾಗ, ಒಂದೂವರೆ ದಶಕದ ಹಿಂದೆ ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯನ್ನು  ಹಿಡಿದುಕೊಂಡು ರಾಷ್ಟ್ರೀಯ ಭದ್ರತಾ ಪ್ರಶ್ನೆಯನ್ನು ಎತ್ತಿರುವ ಬಿಜೆಪಿ ನಡೆಯು ತನ್ನ ಬಟ್ಟಲಿನಲ್ಲಿ ಹೆಗ್ಗಣ ಇಟ್ಟುಕೊಂಡು, ಕಾಂಗ್ರೆಸ್ ಬಟ್ಟಲಿನಲ್ಲಿ ನೊಣವನ್ನು ತೋರಿಸಿದಂತಾಗಿದೆ.

ಕೃಪೆ: ಟೆಲಿಗ್ರಾಫ್‌ಇಂಡಿಯಾ

ಅನುವಾದ: ನಿಖಲ್ ಕೋಲ್ಪೆ


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...