Homeಮುಖಪುಟಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ...

ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

- Advertisement -
- Advertisement -

ಚೀನಾದ ಸಂಸ್ಥೆಗಳಿಂದ ಹಣ ಸ್ವೀಕರಿಸುವುದೆಂದರೆ ಉಯ್ಯಾಲೆಯಲ್ಲಿ ಜಾಗ ಹಂಚಿಕೊಳ್ಳುವಷ್ಟೇ ಸಹಜ ಮತ್ತು ಸ್ವೀಕಾರಾರ್ಹ ಎನಿಸಿದ್ದ ಕಾಲವಿತ್ತು. ಹಾಗಿದ್ದರೂ ಬಿಜೆಪಿಯು ಗಾಲ್ವಾನ್ ಪ್ರಮಾದದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಧಾವಂತದಲ್ಲಿ ಒಂದು ಆಡುಮಾತನ್ನು ಮರೆತುಬಿಟ್ಟಿದೆ. ಅದೆಂದರೆ ನೀವು ಬೇರೆಯವರ ಕಡೆಗೆ ಬೆರಳು ತೋರಿಸಿದಾಗ ಮೂರು ಬೆರಳುಗಳು ನಿಮ್ಮನ್ನು ತೋರಿಸುತ್ತವೆ. ಈ ಪ್ರಕರಣದಲ್ಲಿ ಕನಿಷ್ಟ ಎರಡು ಬೆರಳುಗಳು ಬಿಜೆಪಿಯ ಆಂತರಿಕ ವ್ಯವಸ್ಥೆಯತ್ತ ತೋರಿಸುತ್ತಿವೆ.

ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಮಗನ ವಿದೇಶಾಂಗ ಧೋರಣೆಯ ಚಿಂತನಾ ಚಾವಡಿಯಾದ “ದಿ ಒಬ್ಸರ್ವರ್ ರಿಸರ್ಚ್ ಫೌಂಡೇಶನ್” (ಓಆರ್‌ಎಫ್) 2016ರಲ್ಲಿ ಕೋಲ್ಕತ್ತಾದ ಸೇರಿದಂತೆ ಚೀನಾದ ಉಪರಾಯಭಾರ ಕಚೇರಿಗಳಿಂದ (ಕಾನ್ಸ್ಯೂಲೇಟ್) ಹಣಕಾಸು ಪಡೆದಿದೆ. ಅಲ್ಲದೇ ಓಆರ್‌ಎಫ್‌ಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಣಕಾಸು ಬೆಂಬಲವೂ ಇದೆ.

ಆರೆಸ್ಸೆಸ್‌ಗೆ ಹತ್ತಿರವಾಗಿರುವ ಇನ್ನೊಂದು ಚಿಂತನಾ ಚಾವಡಿಯಾಗಿರುವ ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ತನ್ನ ವೆಬ್‌ಸೈಟಿನಲ್ಲಿ, ತಾನು ವಿದೇಶಾಂಗ ಮತ್ತು ಕಾರ್ಯವ್ಯೂಹಾತ್ಮಕ ಧೋರಣೆಯ ವಿಷಯದಲ್ಲಿ ಒಂಬತ್ತು ಚೀನಿ ಸಂಸ್ಥೆಗಳೊಂದಿಗೆ ವೃತ್ತಿಪರ ಸಂಬಂಧ ಹೊಂದಿರುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ (ವಿಐಎಫ್)ನ ಸ್ಥಾಪಕ ನಿರ್ದೇಶಕರಾಗಿದ್ದು, ಅದು ಬಿಜೆಪಿ ಮತ್ತು ಆರೆಸ್ಸೆಸ್ ಜೊತೆ ನಿಕಟ ನಂಟು ಹೊಂದಿದೆ. ಈ ಎರಡೂ ಸಂಸ್ಥೆಗಳು ಈ ಮಾಹಿತಿಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹೇಳಿಕೊಂಡಿವೆ.

ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ನಲ್ಲಿ ಅಜಿತ್ ದೋವಲ್. (ಬಲದಿಂದ ಮೊದಲನೆಯವರು)

ಒಂದು ವೇಳೆ ಬಿಜೆಪಿಯು 2005-06ರಷ್ಟು ಹಿಂದೆ ಪಡೆದ ಹಣವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು ಚೀನಾ ನಂಟು ಹೊಂದಿದೆ ಎಂದು ಆರೋಪಿಸಿ ನಗಣ್ಯ ವಿಷಯವನ್ನು ಒಂದು ದೊಡ್ಡ ರಾಷ್ಟ್ರೀಯ ಭದ್ರತಾ ವಿಷಯವನ್ನಾಗಿ ಮಾಡಲು ಹೊರಡದಿದ್ದರೆ, ಈ ಎರಡೂ ಸಂಸ್ಥೆಗೆ ದೇಣಿಗೆ ನೀಡಿದ ದಾನಿಗಳ ಗುರುತು ಪರಿಚಯ ಯಾರ ಗಮನವನ್ನೂ ಸೆಳೆಯುತ್ತಿರಲಿಲ್ಲ. ವಿಶ್ವದಾದ್ಯಂತ ಸಂಸ್ಥೆಗಳು ವಿದೇಶಿ ದೇಣಿಗೆ ಪಡೆಯುವುದು ಸಾಮಾನ್ಯವಾಗಿದೆ.

ವಿದೇಶಾಂಗ ಸಚಿವರ ಮಗ ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಕಳೆದ ವರ್ಷ ಯುಎಸ್‌ಎಗೆ ಸಂಬಂಧಿಸಿದ ವಿಷಯಗಳ ನಿರ್ದೇಶಕರಾದರು. ಚೀನಾ ದೇಶಕ್ಕೆ ಭಾರತದ ಮಾಜಿ ರಾಯಭಾರಿಯೂ ಆಗಿರುವ ವಿದೇಶಾಂಗ ಸಚಿವರು ಓಆರ್‌ಎಫ್‌ಗೆ ನಿಯಮಿತವಾಗಿ ಭೇಟಿ ನೀಡಿ, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಉಪನ್ಯಾಸಗಳನ್ನು ನೀಡುತ್ತಾರೆ.

ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಮಾತನಾಡುತ್ತಿರುವುದು

ಜೈಶಂಕರ್ ಅವರ ಓಆರ್‌ಎಫ್‌ನ ವೆಬ್‌ಸೈಟಿನಲ್ಲಿ ವಿದೇಶಿ ದಾನಿಗಳ ಪಟ್ಟಿಯನ್ನು ನೀಡಲಾಗಿದ್ದು, ಅವರಿಂದ ಪಡೆದ ಹಣದ ಮೊತ್ತವನ್ನೂ ನಮೂದಿಸಲಾಗಿದೆ. ಅದರಂತೆ, ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

ಸಂಸ್ಥೆಯು ಕೊಲ್ಕತ್ತಾದ “ಕಾನ್ಸ್ಯೂಲೇಟ್ ಜನರಲ್ ಆಫ್ ರಿಪಬ್ಲಿಕ್ ಆಫ್ ಚೈನಾ”ದಿಂದ ಎಪ್ರಿಲ್ 29, 2016ರಂದು 7.7 ಲಕ್ಷ ರೂ., ಅದೇ ವರ್ಷ ನವಂಬರ್ 4ರಂದು 11.55 ಲಕ್ಷ ರೂ. ಮತ್ತೊಮ್ಮೆ ಡಿಸೆಂಬರ್ 1, 2017ರಂದು 50 ಲಕ್ಷ ರೂ. ದೇಣಿಗೆ ಪಡೆದಿದೆ.

ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ತಾನು ಸಂಬಂಧ ಹೊಂದಿರುವ ಚೀನಾದ ಸಂಸ್ಥೆಗಳ ಪಟ್ಟಿ ನೀಡಿದೆ. ಅವುಗಳೆಂದರೆ, ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿಕ್ ಸ್ಟಡೀಸ್; ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್  ಸ್ಟಡೀಸ್; ಬೀಜಿಂಗ್‌ನ ಸೆಂಟರ್ ಫಾರ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಪೆಕಿಂಗ್ ಯುನಿವರ್ಸಿಟಿ; ಕುನ್‌ಮಿಂಗ್‌ನ ಯುನಾನ್ ಯುನಿವರ್ಸಿಟಿ ಆಫ್ ಫೈನಾನ್ಸ್ ಎಂಡ್ ಇಕನಾಮಿಕ್ಸ್‌ನ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಇಂಡಿಯನ್ ಓಶನ್ ಸ್ಟಡೀಸ್; ಬೀಜಿಂಗ್‌ನ ಚೈನೀಸ್ ಅಕಾಡೆಮಿ ಆಫ್ ಸೋಷಿಯಲ್ ಸಾಯನ್ಸಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿ; ಚೆಂಗ್ಡೂವಿನ ಸೆಂಟರ್ ಫಾರ್ ಸೌತ್ ಏಷ್ಯಾ ಎಂಡ್ ವೆಸ್ಟ್ ಚೈನಾ ಕೊಅಪರೇಷನ್ ಎಂಡ್ ಡೆವಲಪ್‌ಮೆಂಟ್ ಯುನಿವರ್ಸಿಟಿ; ಚೆಂಗ್ಡೂವಿನ ಸಿಚುವಾನ್ ಯುನಿವರ್ಸಿಟಿಯ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಸಿಲ್ಕ್ ರೋಡ್ ಥಿಂಕ್ ಟ್ಯಾಂಕ್ ನೆಟ್‌ವರ್ಕ್ ಡೆವಲಪ್‌ಮೆಂಟ್ ರಿಸರ್ಚ್ ಕೌನ್ಸಿಲ್; ಮತ್ತು ಶೆನ್‌ಝೆನ್‌ನ ಸೆಂಟರ್ ಫಾರ್ ಇಂಡಿಯನ್ ಸ್ಟಡೀಸ್.

ಭಾರತದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಒಆರ್‌ಎಫ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೀನಾದ ಪ್ರತಿನಿಧಿಗಳು ಭಾಗವಹಿಸಿರುವುದು

ರಕ್ಷಣಾ ವಲಯದ ಮೂಲಗಳ ಪ್ರಕಾರ ಈ ಎರಡು ಚಿಂತನಾ ಚಾವಡಿಗಳ ಸದಸ್ಯರಿಗೆ ಆಡಳಿತದ ನಾರ್ಥ್ ಬ್ಲಾಕ್ ಮತ್ತು ಸೌತ್ ಬ್ಲಾಕ್ (ಹಣಕಾಸು ಮತ್ತು ವಿದೇಶಾಂಗ ಸಚಿವಾಲಯಗಳು)ಗಳಿಗೆ ಸಾಕಷ್ಟು ಮುಕ್ತವಾದ ಪ್ರವೇಶವಿದೆ.

ಎರಡೂ ಸಂಸ್ಥೆಗಳನ್ನು ಇ- ಮೈಲ್ ಮತ್ತು ಟ್ವಿಟ್ಟರ್ ಮೂಲಕ ಸಂಪರ್ಕಿಸಿದಾಗ ಯಾವುದೇ ವಿವರಣೆ ಬಂದಿಲ್ಲವಾದರೂ, ಈ ವರದಿಯು ಈ ದೇಣಿಗೆಗಳು ಕಾನೂನುಬದ್ಧವಲ್ಲ ಎಂದು ಸೂಚಿಸುತ್ತಿಲ್ಲ.

ಆದರೆ, ತನ್ನ ವಿದೇಶಾಂಗ ಸಚಿವರು ಮತ್ತು ಸರಕಾರದ ಭದ್ರತಾ ಸಲಹೆಗಾರರು ಭಾಗಿಯಾಗಿರುವ ಮತ್ತು ತನಗೆ ನಿಕಟವಾಗಿರುವ ಸಂಸ್ಥೆಗಳು ಚೀನಾದ ಸರಕಾರ ಮತ್ತು ಸಂಸ್ಥೆಗಳಿಂದ ದೇಣಿಗೆ ಪಡೆದಿರುವಾಗ, ಒಂದೂವರೆ ದಶಕದ ಹಿಂದೆ ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯನ್ನು  ಹಿಡಿದುಕೊಂಡು ರಾಷ್ಟ್ರೀಯ ಭದ್ರತಾ ಪ್ರಶ್ನೆಯನ್ನು ಎತ್ತಿರುವ ಬಿಜೆಪಿ ನಡೆಯು ತನ್ನ ಬಟ್ಟಲಿನಲ್ಲಿ ಹೆಗ್ಗಣ ಇಟ್ಟುಕೊಂಡು, ಕಾಂಗ್ರೆಸ್ ಬಟ್ಟಲಿನಲ್ಲಿ ನೊಣವನ್ನು ತೋರಿಸಿದಂತಾಗಿದೆ.

ಕೃಪೆ: ಟೆಲಿಗ್ರಾಫ್‌ಇಂಡಿಯಾ

ಅನುವಾದ: ನಿಖಲ್ ಕೋಲ್ಪೆ


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...