Homeಅಂತರಾಷ್ಟ್ರೀಯಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

- Advertisement -
- Advertisement -

ಚೀನಾ ಸರ್ಕಾರವು ತನ್ನ ಮಹತ್ವದ ನೀತಿ ಬದಲಾವಣೆಯೊಂದರಲ್ಲಿ, ತನ್ನ ದೀರ್ಘಾವಧಿಯ ಎರಡು ಮಕ್ಕಳ ನೀತಿಯಲ್ಲಿ ಬದಲಾವಣೆ ಮಾಡಿದೆ. ಇದರೊಂದಿಗೆ ಚೀನಾದ ದಂಪತಿಗಳಿಗೆ ಮೂರು ಮಕ್ಕಳನ್ನು ಹೊಂದಲು ಅವಕಾಶ ಮಾಡಿಕೊಟ್ಟಿದೆ. ಕ್ಸಿ ಜಿನ್‌ಪಿಂಗ್ ನೇತೃತ್ವದ ಚೀನಾ ಕಮ್ಯುನಿಸ್ಟ್ ಪಕ್ಷದ ಪೊಲಿಟ್‌ಬ್ಯುರೊ ಈ ನಿರ್ಧಾರ ಕೈಗೊಂಡಿದೆ.

“ದಂಪತಿಗಳು ಮೂರು ಮಕ್ಕಳನ್ನು ಹೊಂದಬಹುದು” ಎಂದು ರಾಜ್ಯ ಮಾಧ್ಯಮ ಕ್ಸಿನ್ಹುವಾ ಸೋಮವಾರ ವರದಿ ಮಾಡಿದೆ.

ಜನನ ಪ್ರಮಾಣದಲ್ಲಿ ಆತಂಕಕಾರಿ ಕುಸಿತ ಮತ್ತು ಐವತ್ತಕ್ಕಿಂತ ಹೆಚ್ಚಿನ ವಯಸ್ಸಿನ ಜನಸಂಖ್ಯೆಯ ಹೆಚ್ಚಳದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾದ ಫಲವತ್ತತೆ ದರವು ಪ್ರಸ್ತುತ 1.3 ರಷ್ಟಿದೆ. ಮುದುಕರ ಜನಸಂಖ್ಯೆ ಹೆಚ್ಚುತ್ತಿರುವ ಕಾರಣಕ್ಕೆ 2015 ರಲ್ಲಿ ಚೀನಾ ಸರ್ಕಾರವು ತನ್ನ ಜನಸಂಖ್ಯಾ ನೀತಿಯನ್ನು ಒಂದು ಮಗುವಿನಿಂದ ಎರಡು ಮಗುವಾಗಿ ಬದಲಾಯಿಸಿತ್ತು.

ಇದನ್ನೂ ಓದಿ: ಕಪ್ಪು ಫಂಗಸ್‌‌ ಬಗ್ಗೆ ಕೇಂದ್ರಕ್ಕೆ 3 ಪ್ರಶ್ನೆಗಳನ್ನು ಕೇಳಿದ ರಾಹುಲ್ ಗಾಂಧಿ

“ಈ ನೀತಿ ಹಳೆಯದಾಗಿದೆ. ಚೀನಾಕ್ಕೆ ಬೇಕಾಗಿರುವುದು ಮತ್ತೊಂದು ರಾಜ್ಯ ನೀತಿಯಲ್ಲ, ಬದಲಿಗೆ ಉತ್ತಮವಾದ ಸಮಾಜವಾಗಿದೆ” ಎಂದು ಕ್ಯಾಲಿಫೋರ್ನಿಯಾ ಇರ್ವಿನ್ ವಿಶ್ವವಿದ್ಯಾಲಯದ ಪ್ರೊಫೆಸರ್ ವಾಂಗ್ ಫೆಂಗ್ ಹೇಳಿದ್ದಾರೆ.

ಚೀನಾದ ಈ ಹೊಸ ನೀತಿಯ ಬಗ್ಗೆ ಕೆಲವರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. “ಈ ನೀತಿಯಿಂದ ಅಧಿಕಾರಿಗಳು ನಿರೀಕ್ಷಿಸಿದಷ್ಟು ಸಾಧನೆ ಇರದೆ ಇರಬಹುದು. ಈ ದಿನಗಳಲ್ಲಿ ಮಗುವನ್ನು ಬೆಳೆಸುವುದು ತುಂಬಾ ದುಬಾರಿಯಾಗಿದ್ದು, ಚೀನಾದಲ್ಲಿ ವಸತಿ ಅಗ್ಗವಾಗಿಲ್ಲ” ಎಂದು ಗುವಾಂಗ್‌‌ಸೂದಲ್ಲಿನ ಸ್ವತಂತ್ರ ಜನಸಂಖ್ಯಾಶಾಸ್ತ್ರಜ್ಞ ಹಿ ಯಾಫು ಹೇಳಿದ್ದಾರೆ.

ಆದಾಗ್ಯೂ, ಹಾಂಗ್ ಕಾಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಪ್ರೊಫೆಸರ್ ಸ್ಟುವರ್ಟ್ ಗೀಟೆಲ್-ಬ್ಯಾಟನ್ ಈ ಕ್ರಮವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಯೋಗಿ ಸರ್ಕಾರದ ವಿರುದ್ಧ ಜನಾಕ್ರೋಶ: ಕೋವಿಡ್ ಬಿಕ್ಕಟ್ಟಿನಲ್ಲಿ ಮುಂದಿನ ಚುನಾವಣೆಯ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...