HomeUncategorizedಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಾವು ತನ್ನ ಎರಡನೇ ಗ್ರಾಮವನ್ನು ನಿರ್ಮಿಸಿರುವುದು ಹೊಸ ಉಪಗ್ರಹ ಚಿತ್ರಗಳ ಮೂಲಕ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಗ್ರಾಮದಲ್ಲಿ ಕನಿಷ್ಠ 60 ಕಟ್ಟಡಗಳನ್ನು ಚೀನಾ ನಿರ್ಮಿಸಿದೆ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2019 ರಲ್ಲಿ ತೆಗೆಯಲಾದ ಉಪಗ್ರಹ ಚಿತ್ರಗಳಲ್ಲಿ ಈ ಹೊಸ ಗ್ರಾಮ ಇರಲಿಲ್ಲ. ಆದರೆ ಒಂದು ವರ್ಷದ ನಂತರ ತೆಗೆಯಲಾದ ಉಪಗ್ರಹದ ಚಿತ್ರದಲ್ಲಿ ಇದನ್ನು ಕಾಣಬಹುದಾಗಿದೆ. ಈ ಹೊಸ ಗ್ರಾಮವು ಚೀನಾ ಈ ಹಿಂದೆ ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಿದ್ದ ಗ್ರಾಮಕ್ಕಿಂತ 93 ಕಿಮೀ ದೂರದಲ್ಲಿದೆ. ಚೀನಾ ಭಾರತದ ಭೂಭಾಗದೊಳಗೆ ಒಂದು ದೊಡ್ಡ ಗ್ರಾಮವನ್ನೇ ನಿರ್ಮಿಸಿದೆ ಎಂದು ಕಳೆದ ಜನವರಿಯಲ್ಲಿ ವರದಿಯಾಗಿತ್ತು. ಈ ವರದಿಯನ್ನು ಕೆಲವು ದಿನಗಳ ಹಿಂದೆ ಅಮೆರಿಕಾ ಭದ್ರತಾ ಆಯೋಗ ಕೂಡಾ ದೃಢಪಡಿಸಿತ್ತು.

ಚೀನಾ ನಿರ್ಮಿಸಿರುವ ಎರಡನೇ ಗ್ರಾಮವು ಭಾರತದೊಳಗೆ ‘ವಾಸ್ತವ ನಿಂಯಂತ್ರಣ ರೇಖೆ’ (LAC) ಮತ್ತು ಅಂತರಾಷ್ಟ್ರೀಯ ಗಡಿರೇಖೆಯ ನಡುವಿನ ಪ್ರದೇಶದ ಸುಮಾರು 6 ಕಿಲೋಮೀಟರ್ ದೂರದಲ್ಲಿದೆ. ಈ ಪ್ರದೇಶವನ್ನು ಭಾರತವು ಹಿಂದಿನಿಂದಲೂ ತನ್ನ ಸ್ವಂತ ಪ್ರದೇಶವೆಂದು ಹೇಳಿಕೊಂಡಿದೆ. ಈ ಚಿತ್ರಗಳು ಯಾವ ಪ್ರದೇಶದಲ್ಲಿವೆ ಎಂದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ಪ್ರಸ್ತುತ ಸ್ಥಳವು ಚೀನಾದ ಭೂಪ್ರದೇಶದ ವಾಸ್ತವ ನಿಯಂತ್ರಣ ರೇಖೆಯ ಉತ್ತರದಲ್ಲಿದೆ ಎಂದು ಭಾರತೀಯ ಸೇನೆ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಸೇನೆಯ ಈ ಹೇಳಿಕೆಯು ಭಾರತೀಯ ಭೂಪ್ರದೇಶದಲ್ಲಿ ಗ್ರಾಮವನ್ನು ನಿರ್ಮಿಸುವ ಬಗ್ಗೆ ನಿರಾಕರಿಸುತ್ತಿಲ್ಲ ಎಂದು ಎನ್‌ಡಿಟಿವಿ ಹೇಳಿದ್ದು, ಗ್ರಾಮವು ಚೀನಾ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶದೊಳಗೆ ಇದೆ ಎಂದು ವರದಿ ತಿಳಿಸಿದೆ.

ಚೀನಾ ನಿರ್ಮಿಸಿರುವ ಹೊಸ ಗ್ರಾಮವು, ವಿಶ್ವದ ಎರಡು ಪ್ರಮುಖ ಉಪಗ್ರಹ ಚಿತ್ರಣ ಪೂರೈಕೆದಾರರಾದ ಮ್ಯಾಕ್ಸರ್ ಟೆಕ್ನಾಲಜೀಸ್ ಮತ್ತು ಪ್ಲಾನೆಟ್ ಲ್ಯಾಬ್‌ಗಳ ಚಿತ್ರಗಳ ಮೂಲಕ ದೃಢೀಕರಿಸಲಾಗಿದೆ. ಅರುಣಾಚಲ ಪ್ರದೇಶದ ಶಿ-ಯೋಮಿ ಜಿಲ್ಲೆಯ ಈ ಚಿತ್ರಗಳು ಕೇವಲ ಡಜನ್‌ಗಟ್ಟಲೆ ಕಟ್ಟಡಗಳನ್ನು ಮಾತ್ರ ತೋರಿಸುವುದಲ್ಲದೆ, ಛಾವಣಿಯ ಮೇಲ್ಭಾಗದಲ್ಲಿ ಚಿತ್ರಿಸಲಾಗಿರುವ ಚೀನಾದ ಧ್ವಜವನ್ನು ಹೊಂದಿರುವ ರಚನೆಯನ್ನೂ ತೋರಿಸುತ್ತದೆ. ಈ ಚಿತ್ರವು ಸ್ಪಷ್ಟವಾಗಿ ಕಾಣುತ್ತಿದ್ದು, ದೈತ್ಯ ಧ್ವಜವು ಈ ಪ್ರದೇಶವು ಚೀನಾಗೆ ಸೇರಿದ್ದು ಎಂದು ಪ್ರತಿಪಾದಿಸುವಂತಿದೆ.

ಭಾರತ ಸರ್ಕಾರದ ಆನ್‌ಲೈನ್ ನಕ್ಷೆ ಸೇವೆಯಾದ ಭಾರತ್‌ಮ್ಯಾಪ್ಸ್‌ನಲ್ಲಿ ಹೊಸ ಗ್ರಾಮದ ನಿಖರವಾದ ಸ್ಥಳವನ್ನು ಸ್ಪಷ್ಟವಾಗಿ ನೋಡಬಹುದಾಗಿದೆ. ಭಾರತದ ಡಿಜಿಟಲ್ ನಕ್ಷೆ, ಭಾರತದ ಸರ್ವೇಯರ್ ಜನರಲ್‌ನಿಂದ ಈ ಸ್ಥಳವು ಭಾರತದೊಳಗೆ ಇದೆ ಎಂದು ಖಚಿತಪಡಿಸುತ್ತದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ: ಪಾಕಿಸ್ತಾನದ ಹಾದಿಯಲ್ಲಿ ಚೀನಾ!“ಭಾರತೀಯ ಸಮೀಕ್ಷೆಯ ಅಧಿಕೃತ ವೆಬ್‌ಸೈಟ್‌ನಿಂದ ಪಡೆದ GIS [ಭೌಗೋಳಿಕ ಮಾಹಿತಿ ವ್ಯವಸ್ಥೆ] ದತ್ತಾಂಶವನ್ನು ಆಧರಿಸಿ, ಈ ಹಳ್ಳಿಯ ಸ್ಥಳವು ನಿಜವಾಗಿಯೂ ಭಾರತೀಯ ಪ್ರಾದೇಶಿಕ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ಮಾಹಿತಿಯನ್ನು ಒದಗಿಸುವ ಯುರೋಪ್ ಮೂಲದ ಫೋರ್ಸ್ ಅನಾಲಿಸಿಸ್‌ನ ಮುಖ್ಯ ಮಿಲಿಟರಿ ವಿಶ್ಲೇಷಕ ಸಿಮ್ ಟಾಕ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಭಾರತೀಯ ತಜ್ಞರು ಇದನ್ನು ಖಚಿತಪಡಿಸಿದ್ದು, “ಭಾರತ್‌ಮ್ಯಾಪ್‌ನಲ್ಲಿ ಈ ಪ್ರದೇಶವು ಅಂತರರಾಷ್ಟ್ರೀಯ ಗಡಿಯಿಂದ 7 ಕಿಲೋಮೀಟರ್‌ಗಳ ಒಳಗೆ ಇದೆ ಎಂದು ತೋರಿಸುತ್ತದೆ. ಭಾರತದ ಸರ್ವೇ ಜನರಲ್ ವ್ಯಾಖ್ಯಾನಿಸಿದಂತೆ, ಅವರ ಅಧಿಕಾರ ವ್ಯಾಪ್ತಿಯಲ್ಲಿ ಭಾರತದ ಗಡಿಗಳನ್ನು ಎಲ್ಲಾ ಅಧಿಕೃತ ನಕ್ಷೆಗಳಲ್ಲಿ ಚಿತ್ರಿಸಲಾಗಿದೆ” ಎಂದು ಉಪಗ್ರಹ-ಇಮೇಜಿಂಗ್ ತಂತ್ರಜ್ಞಾನದಲ್ಲಿ ದಶಕಗಳ ಅನುಭವ ಹೊಂದಿರುವ ಅರೂಪ್ ದಾಸ್‌ಗುಪ್ತ ಹೇಳಿದ್ದಾರೆ.

ಇಷ್ಟೇ ಅಲ್ಲದೆ ಈ ಗ್ರಾಮದ ಛಾಯಾಚಿತ್ರವನ್ನು ಈ ವರ್ಷದ ಜುಲೈನಲ್ಲಿ ಚೀನಾದ ಸರ್ಕಾರಿ ಪತ್ರಿಕಾ ಸಂಸ್ಥೆಯಾದ ಕ್ಸಿನ್ಹುವಾ ನ್ಯೂಸ್ ಏಜೆನ್ಸಿ ಪ್ರಕಟಿಸಿದೆ. ಚೀನಾದ ಅಧ್ಯಕ್ಷ ಕ್ಸಿ ಕ್ಸಿನ್‌ಪಿಂಗ್ ಅವರು ಅದೇ ಪ್ರದೇಶಕ್ಕೆ ಭೇಟಿ ನೀಡಿ ಅರುಣಾಚಲದ ಗಡಿಯಲ್ಲಿ ಹೊಸ, ಆಯಕಟ್ಟಿನ ಪ್ರಮುಖ ರೈಲು ಮಾರ್ಗವನ್ನು ಪರಿಶೀಲಿಸಿದ್ದರು. ಹೊಸದಾಗಿ ನಿರ್ಮಿಸಲಾದ ಚೈನೀಸ್ ಗ್ರಾಮವು ವಿಮಾನ ನಿಲ್ದಾಣದ ದಕ್ಷಿಣಕ್ಕೆ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ.

“ಭಾರತದ ಹಿಮಾಲಯದ ಗಡಿಭಾಗವನ್ನು ಚೀನಾ ಹೇಗೆ ಕಚ್ಚಿ ತಿನ್ನುತ್ತಿದೆ ಎಂಬುದನ್ನು ಹೊಸ ಗ್ರಾಮ ತೋರಿಸುತ್ತದೆ. ಹೊಳೆಯುತ್ತಿರುವ ಹೊಸ ಹಳ್ಳಿಯ ಚಿತ್ರಗಳು ಚೀನಾದ ಕೃತಕ ಸ್ವಭಾವವನ್ನು ಸ್ಪಷ್ಟವಾಗಿ ತೋರಿಸುತ್ತವೆ. ಸಾಂಪ್ರದಾಯಿಕವಾಗಿ ಯಾರೂ ಚೈನೀಸ್ ಮಾತನಾಡದ ಪ್ರದೇಶದಲ್ಲಿ ನೆಲೆಗೊಂಡಿರುವ ಹಳ್ಳಿಗೆ ಚೀನಾವು ಚೀನೀ ಹೆಸರನ್ನು ಸಹ ಇಟ್ಟಿದೆ” ಎಂದು ಭಾರತ-ಚೀನಾದ ಪ್ರಮುಖ ಕಾರ್ಯತಂತ್ರದ ವಿಶ್ಲೇಷಕರಲ್ಲಿ ಒಬ್ಬರಾದ ಬ್ರಹ್ಮ ಚೆಲ್ಲಾನೆ ಹೇಳಿದ್ದಾರೆ.

ಇದನ್ನೂ ಓದಿ: ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...