HomeUncategorizedಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಾವು ತನ್ನ ಎರಡನೇ ಗ್ರಾಮವನ್ನು ನಿರ್ಮಿಸಿರುವುದು ಹೊಸ ಉಪಗ್ರಹ ಚಿತ್ರಗಳ ಮೂಲಕ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಗ್ರಾಮದಲ್ಲಿ ಕನಿಷ್ಠ 60 ಕಟ್ಟಡಗಳನ್ನು ಚೀನಾ ನಿರ್ಮಿಸಿದೆ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2019 ರಲ್ಲಿ ತೆಗೆಯಲಾದ ಉಪಗ್ರಹ ಚಿತ್ರಗಳಲ್ಲಿ ಈ ಹೊಸ ಗ್ರಾಮ ಇರಲಿಲ್ಲ. ಆದರೆ ಒಂದು ವರ್ಷದ ನಂತರ ತೆಗೆಯಲಾದ ಉಪಗ್ರಹದ ಚಿತ್ರದಲ್ಲಿ ಇದನ್ನು ಕಾಣಬಹುದಾಗಿದೆ. ಈ ಹೊಸ ಗ್ರಾಮವು ಚೀನಾ ಈ ಹಿಂದೆ ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಿದ್ದ ಗ್ರಾಮಕ್ಕಿಂತ 93 ಕಿಮೀ ದೂರದಲ್ಲಿದೆ. ಚೀನಾ ಭಾರತದ ಭೂಭಾಗದೊಳಗೆ ಒಂದು ದೊಡ್ಡ ಗ್ರಾಮವನ್ನೇ ನಿರ್ಮಿಸಿದೆ ಎಂದು ಕಳೆದ ಜನವರಿಯಲ್ಲಿ ವರದಿಯಾಗಿತ್ತು. ಈ ವರದಿಯನ್ನು ಕೆಲವು ದಿನಗಳ ಹಿಂದೆ ಅಮೆರಿಕಾ ಭದ್ರತಾ ಆಯೋಗ ಕೂಡಾ ದೃಢಪಡಿಸಿತ್ತು.

ಚೀನಾ ನಿರ್ಮಿಸಿರುವ ಎರಡನೇ ಗ್ರಾಮವು ಭಾರತದೊಳಗೆ ‘ವಾಸ್ತವ ನಿಂಯಂತ್ರಣ ರೇಖೆ’ (LAC) ಮತ್ತು ಅಂತರಾಷ್ಟ್ರೀಯ ಗಡಿರೇಖೆಯ ನಡುವಿನ ಪ್ರದೇಶದ ಸುಮಾರು 6 ಕಿಲೋಮೀಟರ್ ದೂರದಲ್ಲಿದೆ. ಈ ಪ್ರದೇಶವನ್ನು ಭಾರತವು ಹಿಂದಿನಿಂದಲೂ ತನ್ನ ಸ್ವಂತ ಪ್ರದೇಶವೆಂದು ಹೇಳಿಕೊಂಡಿದೆ. ಈ ಚಿತ್ರಗಳು ಯಾವ ಪ್ರದೇಶದಲ್ಲಿವೆ ಎಂದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ಪ್ರಸ್ತುತ ಸ್ಥಳವು ಚೀನಾದ ಭೂಪ್ರದೇಶದ ವಾಸ್ತವ ನಿಯಂತ್ರಣ ರೇಖೆಯ ಉತ್ತರದಲ್ಲಿದೆ ಎಂದು ಭಾರತೀಯ ಸೇನೆ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಸೇನೆಯ ಈ ಹೇಳಿಕೆಯು ಭಾರತೀಯ ಭೂಪ್ರದೇಶದಲ್ಲಿ ಗ್ರಾಮವನ್ನು ನಿರ್ಮಿಸುವ ಬಗ್ಗೆ ನಿರಾಕರಿಸುತ್ತಿಲ್ಲ ಎಂದು ಎನ್‌ಡಿಟಿವಿ ಹೇಳಿದ್ದು, ಗ್ರಾಮವು ಚೀನಾ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶದೊಳಗೆ ಇದೆ ಎಂದು ವರದಿ ತಿಳಿಸಿದೆ.

ಚೀನಾ ನಿರ್ಮಿಸಿರುವ ಹೊಸ ಗ್ರಾಮವು, ವಿಶ್ವದ ಎರಡು ಪ್ರಮುಖ ಉಪಗ್ರಹ ಚಿತ್ರಣ ಪೂರೈಕೆದಾರರಾದ ಮ್ಯಾಕ್ಸರ್ ಟೆಕ್ನಾಲಜೀಸ್ ಮತ್ತು ಪ್ಲಾನೆಟ್ ಲ್ಯಾಬ್‌ಗಳ ಚಿತ್ರಗಳ ಮೂಲಕ ದೃಢೀಕರಿಸಲಾಗಿದೆ. ಅರುಣಾಚಲ ಪ್ರದೇಶದ ಶಿ-ಯೋಮಿ ಜಿಲ್ಲೆಯ ಈ ಚಿತ್ರಗಳು ಕೇವಲ ಡಜನ್‌ಗಟ್ಟಲೆ ಕಟ್ಟಡಗಳನ್ನು ಮಾತ್ರ ತೋರಿಸುವುದಲ್ಲದೆ, ಛಾವಣಿಯ ಮೇಲ್ಭಾಗದಲ್ಲಿ ಚಿತ್ರಿಸಲಾಗಿರುವ ಚೀನಾದ ಧ್ವಜವನ್ನು ಹೊಂದಿರುವ ರಚನೆಯನ್ನೂ ತೋರಿಸುತ್ತದೆ. ಈ ಚಿತ್ರವು ಸ್ಪಷ್ಟವಾಗಿ ಕಾಣುತ್ತಿದ್ದು, ದೈತ್ಯ ಧ್ವಜವು ಈ ಪ್ರದೇಶವು ಚೀನಾಗೆ ಸೇರಿದ್ದು ಎಂದು ಪ್ರತಿಪಾದಿಸುವಂತಿದೆ.

ಭಾರತ ಸರ್ಕಾರದ ಆನ್‌ಲೈನ್ ನಕ್ಷೆ ಸೇವೆಯಾದ ಭಾರತ್‌ಮ್ಯಾಪ್ಸ್‌ನಲ್ಲಿ ಹೊಸ ಗ್ರಾಮದ ನಿಖರವಾದ ಸ್ಥಳವನ್ನು ಸ್ಪಷ್ಟವಾಗಿ ನೋಡಬಹುದಾಗಿದೆ. ಭಾರತದ ಡಿಜಿಟಲ್ ನಕ್ಷೆ, ಭಾರತದ ಸರ್ವೇಯರ್ ಜನರಲ್‌ನಿಂದ ಈ ಸ್ಥಳವು ಭಾರತದೊಳಗೆ ಇದೆ ಎಂದು ಖಚಿತಪಡಿಸುತ್ತದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ: ಪಾಕಿಸ್ತಾನದ ಹಾದಿಯಲ್ಲಿ ಚೀನಾ!“ಭಾರತೀಯ ಸಮೀಕ್ಷೆಯ ಅಧಿಕೃತ ವೆಬ್‌ಸೈಟ್‌ನಿಂದ ಪಡೆದ GIS [ಭೌಗೋಳಿಕ ಮಾಹಿತಿ ವ್ಯವಸ್ಥೆ] ದತ್ತಾಂಶವನ್ನು ಆಧರಿಸಿ, ಈ ಹಳ್ಳಿಯ ಸ್ಥಳವು ನಿಜವಾಗಿಯೂ ಭಾರತೀಯ ಪ್ರಾದೇಶಿಕ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ಮಾಹಿತಿಯನ್ನು ಒದಗಿಸುವ ಯುರೋಪ್ ಮೂಲದ ಫೋರ್ಸ್ ಅನಾಲಿಸಿಸ್‌ನ ಮುಖ್ಯ ಮಿಲಿಟರಿ ವಿಶ್ಲೇಷಕ ಸಿಮ್ ಟಾಕ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಭಾರತೀಯ ತಜ್ಞರು ಇದನ್ನು ಖಚಿತಪಡಿಸಿದ್ದು, “ಭಾರತ್‌ಮ್ಯಾಪ್‌ನಲ್ಲಿ ಈ ಪ್ರದೇಶವು ಅಂತರರಾಷ್ಟ್ರೀಯ ಗಡಿಯಿಂದ 7 ಕಿಲೋಮೀಟರ್‌ಗಳ ಒಳಗೆ ಇದೆ ಎಂದು ತೋರಿಸುತ್ತದೆ. ಭಾರತದ ಸರ್ವೇ ಜನರಲ್ ವ್ಯಾಖ್ಯಾನಿಸಿದಂತೆ, ಅವರ ಅಧಿಕಾರ ವ್ಯಾಪ್ತಿಯಲ್ಲಿ ಭಾರತದ ಗಡಿಗಳನ್ನು ಎಲ್ಲಾ ಅಧಿಕೃತ ನಕ್ಷೆಗಳಲ್ಲಿ ಚಿತ್ರಿಸಲಾಗಿದೆ” ಎಂದು ಉಪಗ್ರಹ-ಇಮೇಜಿಂಗ್ ತಂತ್ರಜ್ಞಾನದಲ್ಲಿ ದಶಕಗಳ ಅನುಭವ ಹೊಂದಿರುವ ಅರೂಪ್ ದಾಸ್‌ಗುಪ್ತ ಹೇಳಿದ್ದಾರೆ.

ಇಷ್ಟೇ ಅಲ್ಲದೆ ಈ ಗ್ರಾಮದ ಛಾಯಾಚಿತ್ರವನ್ನು ಈ ವರ್ಷದ ಜುಲೈನಲ್ಲಿ ಚೀನಾದ ಸರ್ಕಾರಿ ಪತ್ರಿಕಾ ಸಂಸ್ಥೆಯಾದ ಕ್ಸಿನ್ಹುವಾ ನ್ಯೂಸ್ ಏಜೆನ್ಸಿ ಪ್ರಕಟಿಸಿದೆ. ಚೀನಾದ ಅಧ್ಯಕ್ಷ ಕ್ಸಿ ಕ್ಸಿನ್‌ಪಿಂಗ್ ಅವರು ಅದೇ ಪ್ರದೇಶಕ್ಕೆ ಭೇಟಿ ನೀಡಿ ಅರುಣಾಚಲದ ಗಡಿಯಲ್ಲಿ ಹೊಸ, ಆಯಕಟ್ಟಿನ ಪ್ರಮುಖ ರೈಲು ಮಾರ್ಗವನ್ನು ಪರಿಶೀಲಿಸಿದ್ದರು. ಹೊಸದಾಗಿ ನಿರ್ಮಿಸಲಾದ ಚೈನೀಸ್ ಗ್ರಾಮವು ವಿಮಾನ ನಿಲ್ದಾಣದ ದಕ್ಷಿಣಕ್ಕೆ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ.

“ಭಾರತದ ಹಿಮಾಲಯದ ಗಡಿಭಾಗವನ್ನು ಚೀನಾ ಹೇಗೆ ಕಚ್ಚಿ ತಿನ್ನುತ್ತಿದೆ ಎಂಬುದನ್ನು ಹೊಸ ಗ್ರಾಮ ತೋರಿಸುತ್ತದೆ. ಹೊಳೆಯುತ್ತಿರುವ ಹೊಸ ಹಳ್ಳಿಯ ಚಿತ್ರಗಳು ಚೀನಾದ ಕೃತಕ ಸ್ವಭಾವವನ್ನು ಸ್ಪಷ್ಟವಾಗಿ ತೋರಿಸುತ್ತವೆ. ಸಾಂಪ್ರದಾಯಿಕವಾಗಿ ಯಾರೂ ಚೈನೀಸ್ ಮಾತನಾಡದ ಪ್ರದೇಶದಲ್ಲಿ ನೆಲೆಗೊಂಡಿರುವ ಹಳ್ಳಿಗೆ ಚೀನಾವು ಚೀನೀ ಹೆಸರನ್ನು ಸಹ ಇಟ್ಟಿದೆ” ಎಂದು ಭಾರತ-ಚೀನಾದ ಪ್ರಮುಖ ಕಾರ್ಯತಂತ್ರದ ವಿಶ್ಲೇಷಕರಲ್ಲಿ ಒಬ್ಬರಾದ ಬ್ರಹ್ಮ ಚೆಲ್ಲಾನೆ ಹೇಳಿದ್ದಾರೆ.

ಇದನ್ನೂ ಓದಿ: ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...