HomeUncategorizedಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಾವು ತನ್ನ ಎರಡನೇ ಗ್ರಾಮವನ್ನು ನಿರ್ಮಿಸಿರುವುದು ಹೊಸ ಉಪಗ್ರಹ ಚಿತ್ರಗಳ ಮೂಲಕ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಗ್ರಾಮದಲ್ಲಿ ಕನಿಷ್ಠ 60 ಕಟ್ಟಡಗಳನ್ನು ಚೀನಾ ನಿರ್ಮಿಸಿದೆ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2019 ರಲ್ಲಿ ತೆಗೆಯಲಾದ ಉಪಗ್ರಹ ಚಿತ್ರಗಳಲ್ಲಿ ಈ ಹೊಸ ಗ್ರಾಮ ಇರಲಿಲ್ಲ. ಆದರೆ ಒಂದು ವರ್ಷದ ನಂತರ ತೆಗೆಯಲಾದ ಉಪಗ್ರಹದ ಚಿತ್ರದಲ್ಲಿ ಇದನ್ನು ಕಾಣಬಹುದಾಗಿದೆ. ಈ ಹೊಸ ಗ್ರಾಮವು ಚೀನಾ ಈ ಹಿಂದೆ ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಿದ್ದ ಗ್ರಾಮಕ್ಕಿಂತ 93 ಕಿಮೀ ದೂರದಲ್ಲಿದೆ. ಚೀನಾ ಭಾರತದ ಭೂಭಾಗದೊಳಗೆ ಒಂದು ದೊಡ್ಡ ಗ್ರಾಮವನ್ನೇ ನಿರ್ಮಿಸಿದೆ ಎಂದು ಕಳೆದ ಜನವರಿಯಲ್ಲಿ ವರದಿಯಾಗಿತ್ತು. ಈ ವರದಿಯನ್ನು ಕೆಲವು ದಿನಗಳ ಹಿಂದೆ ಅಮೆರಿಕಾ ಭದ್ರತಾ ಆಯೋಗ ಕೂಡಾ ದೃಢಪಡಿಸಿತ್ತು.

ಚೀನಾ ನಿರ್ಮಿಸಿರುವ ಎರಡನೇ ಗ್ರಾಮವು ಭಾರತದೊಳಗೆ ‘ವಾಸ್ತವ ನಿಂಯಂತ್ರಣ ರೇಖೆ’ (LAC) ಮತ್ತು ಅಂತರಾಷ್ಟ್ರೀಯ ಗಡಿರೇಖೆಯ ನಡುವಿನ ಪ್ರದೇಶದ ಸುಮಾರು 6 ಕಿಲೋಮೀಟರ್ ದೂರದಲ್ಲಿದೆ. ಈ ಪ್ರದೇಶವನ್ನು ಭಾರತವು ಹಿಂದಿನಿಂದಲೂ ತನ್ನ ಸ್ವಂತ ಪ್ರದೇಶವೆಂದು ಹೇಳಿಕೊಂಡಿದೆ. ಈ ಚಿತ್ರಗಳು ಯಾವ ಪ್ರದೇಶದಲ್ಲಿವೆ ಎಂದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ಪ್ರಸ್ತುತ ಸ್ಥಳವು ಚೀನಾದ ಭೂಪ್ರದೇಶದ ವಾಸ್ತವ ನಿಯಂತ್ರಣ ರೇಖೆಯ ಉತ್ತರದಲ್ಲಿದೆ ಎಂದು ಭಾರತೀಯ ಸೇನೆ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಸೇನೆಯ ಈ ಹೇಳಿಕೆಯು ಭಾರತೀಯ ಭೂಪ್ರದೇಶದಲ್ಲಿ ಗ್ರಾಮವನ್ನು ನಿರ್ಮಿಸುವ ಬಗ್ಗೆ ನಿರಾಕರಿಸುತ್ತಿಲ್ಲ ಎಂದು ಎನ್‌ಡಿಟಿವಿ ಹೇಳಿದ್ದು, ಗ್ರಾಮವು ಚೀನಾ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶದೊಳಗೆ ಇದೆ ಎಂದು ವರದಿ ತಿಳಿಸಿದೆ.

ಚೀನಾ ನಿರ್ಮಿಸಿರುವ ಹೊಸ ಗ್ರಾಮವು, ವಿಶ್ವದ ಎರಡು ಪ್ರಮುಖ ಉಪಗ್ರಹ ಚಿತ್ರಣ ಪೂರೈಕೆದಾರರಾದ ಮ್ಯಾಕ್ಸರ್ ಟೆಕ್ನಾಲಜೀಸ್ ಮತ್ತು ಪ್ಲಾನೆಟ್ ಲ್ಯಾಬ್‌ಗಳ ಚಿತ್ರಗಳ ಮೂಲಕ ದೃಢೀಕರಿಸಲಾಗಿದೆ. ಅರುಣಾಚಲ ಪ್ರದೇಶದ ಶಿ-ಯೋಮಿ ಜಿಲ್ಲೆಯ ಈ ಚಿತ್ರಗಳು ಕೇವಲ ಡಜನ್‌ಗಟ್ಟಲೆ ಕಟ್ಟಡಗಳನ್ನು ಮಾತ್ರ ತೋರಿಸುವುದಲ್ಲದೆ, ಛಾವಣಿಯ ಮೇಲ್ಭಾಗದಲ್ಲಿ ಚಿತ್ರಿಸಲಾಗಿರುವ ಚೀನಾದ ಧ್ವಜವನ್ನು ಹೊಂದಿರುವ ರಚನೆಯನ್ನೂ ತೋರಿಸುತ್ತದೆ. ಈ ಚಿತ್ರವು ಸ್ಪಷ್ಟವಾಗಿ ಕಾಣುತ್ತಿದ್ದು, ದೈತ್ಯ ಧ್ವಜವು ಈ ಪ್ರದೇಶವು ಚೀನಾಗೆ ಸೇರಿದ್ದು ಎಂದು ಪ್ರತಿಪಾದಿಸುವಂತಿದೆ.

ಭಾರತ ಸರ್ಕಾರದ ಆನ್‌ಲೈನ್ ನಕ್ಷೆ ಸೇವೆಯಾದ ಭಾರತ್‌ಮ್ಯಾಪ್ಸ್‌ನಲ್ಲಿ ಹೊಸ ಗ್ರಾಮದ ನಿಖರವಾದ ಸ್ಥಳವನ್ನು ಸ್ಪಷ್ಟವಾಗಿ ನೋಡಬಹುದಾಗಿದೆ. ಭಾರತದ ಡಿಜಿಟಲ್ ನಕ್ಷೆ, ಭಾರತದ ಸರ್ವೇಯರ್ ಜನರಲ್‌ನಿಂದ ಈ ಸ್ಥಳವು ಭಾರತದೊಳಗೆ ಇದೆ ಎಂದು ಖಚಿತಪಡಿಸುತ್ತದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ: ಪಾಕಿಸ್ತಾನದ ಹಾದಿಯಲ್ಲಿ ಚೀನಾ!“ಭಾರತೀಯ ಸಮೀಕ್ಷೆಯ ಅಧಿಕೃತ ವೆಬ್‌ಸೈಟ್‌ನಿಂದ ಪಡೆದ GIS [ಭೌಗೋಳಿಕ ಮಾಹಿತಿ ವ್ಯವಸ್ಥೆ] ದತ್ತಾಂಶವನ್ನು ಆಧರಿಸಿ, ಈ ಹಳ್ಳಿಯ ಸ್ಥಳವು ನಿಜವಾಗಿಯೂ ಭಾರತೀಯ ಪ್ರಾದೇಶಿಕ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ಮಾಹಿತಿಯನ್ನು ಒದಗಿಸುವ ಯುರೋಪ್ ಮೂಲದ ಫೋರ್ಸ್ ಅನಾಲಿಸಿಸ್‌ನ ಮುಖ್ಯ ಮಿಲಿಟರಿ ವಿಶ್ಲೇಷಕ ಸಿಮ್ ಟಾಕ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಭಾರತೀಯ ತಜ್ಞರು ಇದನ್ನು ಖಚಿತಪಡಿಸಿದ್ದು, “ಭಾರತ್‌ಮ್ಯಾಪ್‌ನಲ್ಲಿ ಈ ಪ್ರದೇಶವು ಅಂತರರಾಷ್ಟ್ರೀಯ ಗಡಿಯಿಂದ 7 ಕಿಲೋಮೀಟರ್‌ಗಳ ಒಳಗೆ ಇದೆ ಎಂದು ತೋರಿಸುತ್ತದೆ. ಭಾರತದ ಸರ್ವೇ ಜನರಲ್ ವ್ಯಾಖ್ಯಾನಿಸಿದಂತೆ, ಅವರ ಅಧಿಕಾರ ವ್ಯಾಪ್ತಿಯಲ್ಲಿ ಭಾರತದ ಗಡಿಗಳನ್ನು ಎಲ್ಲಾ ಅಧಿಕೃತ ನಕ್ಷೆಗಳಲ್ಲಿ ಚಿತ್ರಿಸಲಾಗಿದೆ” ಎಂದು ಉಪಗ್ರಹ-ಇಮೇಜಿಂಗ್ ತಂತ್ರಜ್ಞಾನದಲ್ಲಿ ದಶಕಗಳ ಅನುಭವ ಹೊಂದಿರುವ ಅರೂಪ್ ದಾಸ್‌ಗುಪ್ತ ಹೇಳಿದ್ದಾರೆ.

ಇಷ್ಟೇ ಅಲ್ಲದೆ ಈ ಗ್ರಾಮದ ಛಾಯಾಚಿತ್ರವನ್ನು ಈ ವರ್ಷದ ಜುಲೈನಲ್ಲಿ ಚೀನಾದ ಸರ್ಕಾರಿ ಪತ್ರಿಕಾ ಸಂಸ್ಥೆಯಾದ ಕ್ಸಿನ್ಹುವಾ ನ್ಯೂಸ್ ಏಜೆನ್ಸಿ ಪ್ರಕಟಿಸಿದೆ. ಚೀನಾದ ಅಧ್ಯಕ್ಷ ಕ್ಸಿ ಕ್ಸಿನ್‌ಪಿಂಗ್ ಅವರು ಅದೇ ಪ್ರದೇಶಕ್ಕೆ ಭೇಟಿ ನೀಡಿ ಅರುಣಾಚಲದ ಗಡಿಯಲ್ಲಿ ಹೊಸ, ಆಯಕಟ್ಟಿನ ಪ್ರಮುಖ ರೈಲು ಮಾರ್ಗವನ್ನು ಪರಿಶೀಲಿಸಿದ್ದರು. ಹೊಸದಾಗಿ ನಿರ್ಮಿಸಲಾದ ಚೈನೀಸ್ ಗ್ರಾಮವು ವಿಮಾನ ನಿಲ್ದಾಣದ ದಕ್ಷಿಣಕ್ಕೆ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ.

“ಭಾರತದ ಹಿಮಾಲಯದ ಗಡಿಭಾಗವನ್ನು ಚೀನಾ ಹೇಗೆ ಕಚ್ಚಿ ತಿನ್ನುತ್ತಿದೆ ಎಂಬುದನ್ನು ಹೊಸ ಗ್ರಾಮ ತೋರಿಸುತ್ತದೆ. ಹೊಳೆಯುತ್ತಿರುವ ಹೊಸ ಹಳ್ಳಿಯ ಚಿತ್ರಗಳು ಚೀನಾದ ಕೃತಕ ಸ್ವಭಾವವನ್ನು ಸ್ಪಷ್ಟವಾಗಿ ತೋರಿಸುತ್ತವೆ. ಸಾಂಪ್ರದಾಯಿಕವಾಗಿ ಯಾರೂ ಚೈನೀಸ್ ಮಾತನಾಡದ ಪ್ರದೇಶದಲ್ಲಿ ನೆಲೆಗೊಂಡಿರುವ ಹಳ್ಳಿಗೆ ಚೀನಾವು ಚೀನೀ ಹೆಸರನ್ನು ಸಹ ಇಟ್ಟಿದೆ” ಎಂದು ಭಾರತ-ಚೀನಾದ ಪ್ರಮುಖ ಕಾರ್ಯತಂತ್ರದ ವಿಶ್ಲೇಷಕರಲ್ಲಿ ಒಬ್ಬರಾದ ಬ್ರಹ್ಮ ಚೆಲ್ಲಾನೆ ಹೇಳಿದ್ದಾರೆ.

ಇದನ್ನೂ ಓದಿ: ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...