HomeUncategorizedಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಾವು ತನ್ನ ಎರಡನೇ ಗ್ರಾಮವನ್ನು ನಿರ್ಮಿಸಿರುವುದು ಹೊಸ ಉಪಗ್ರಹ ಚಿತ್ರಗಳ ಮೂಲಕ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಗ್ರಾಮದಲ್ಲಿ ಕನಿಷ್ಠ 60 ಕಟ್ಟಡಗಳನ್ನು ಚೀನಾ ನಿರ್ಮಿಸಿದೆ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2019 ರಲ್ಲಿ ತೆಗೆಯಲಾದ ಉಪಗ್ರಹ ಚಿತ್ರಗಳಲ್ಲಿ ಈ ಹೊಸ ಗ್ರಾಮ ಇರಲಿಲ್ಲ. ಆದರೆ ಒಂದು ವರ್ಷದ ನಂತರ ತೆಗೆಯಲಾದ ಉಪಗ್ರಹದ ಚಿತ್ರದಲ್ಲಿ ಇದನ್ನು ಕಾಣಬಹುದಾಗಿದೆ. ಈ ಹೊಸ ಗ್ರಾಮವು ಚೀನಾ ಈ ಹಿಂದೆ ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಿದ್ದ ಗ್ರಾಮಕ್ಕಿಂತ 93 ಕಿಮೀ ದೂರದಲ್ಲಿದೆ. ಚೀನಾ ಭಾರತದ ಭೂಭಾಗದೊಳಗೆ ಒಂದು ದೊಡ್ಡ ಗ್ರಾಮವನ್ನೇ ನಿರ್ಮಿಸಿದೆ ಎಂದು ಕಳೆದ ಜನವರಿಯಲ್ಲಿ ವರದಿಯಾಗಿತ್ತು. ಈ ವರದಿಯನ್ನು ಕೆಲವು ದಿನಗಳ ಹಿಂದೆ ಅಮೆರಿಕಾ ಭದ್ರತಾ ಆಯೋಗ ಕೂಡಾ ದೃಢಪಡಿಸಿತ್ತು.

ಚೀನಾ ನಿರ್ಮಿಸಿರುವ ಎರಡನೇ ಗ್ರಾಮವು ಭಾರತದೊಳಗೆ ‘ವಾಸ್ತವ ನಿಂಯಂತ್ರಣ ರೇಖೆ’ (LAC) ಮತ್ತು ಅಂತರಾಷ್ಟ್ರೀಯ ಗಡಿರೇಖೆಯ ನಡುವಿನ ಪ್ರದೇಶದ ಸುಮಾರು 6 ಕಿಲೋಮೀಟರ್ ದೂರದಲ್ಲಿದೆ. ಈ ಪ್ರದೇಶವನ್ನು ಭಾರತವು ಹಿಂದಿನಿಂದಲೂ ತನ್ನ ಸ್ವಂತ ಪ್ರದೇಶವೆಂದು ಹೇಳಿಕೊಂಡಿದೆ. ಈ ಚಿತ್ರಗಳು ಯಾವ ಪ್ರದೇಶದಲ್ಲಿವೆ ಎಂದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ಪ್ರಸ್ತುತ ಸ್ಥಳವು ಚೀನಾದ ಭೂಪ್ರದೇಶದ ವಾಸ್ತವ ನಿಯಂತ್ರಣ ರೇಖೆಯ ಉತ್ತರದಲ್ಲಿದೆ ಎಂದು ಭಾರತೀಯ ಸೇನೆ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಸೇನೆಯ ಈ ಹೇಳಿಕೆಯು ಭಾರತೀಯ ಭೂಪ್ರದೇಶದಲ್ಲಿ ಗ್ರಾಮವನ್ನು ನಿರ್ಮಿಸುವ ಬಗ್ಗೆ ನಿರಾಕರಿಸುತ್ತಿಲ್ಲ ಎಂದು ಎನ್‌ಡಿಟಿವಿ ಹೇಳಿದ್ದು, ಗ್ರಾಮವು ಚೀನಾ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶದೊಳಗೆ ಇದೆ ಎಂದು ವರದಿ ತಿಳಿಸಿದೆ.

ಚೀನಾ ನಿರ್ಮಿಸಿರುವ ಹೊಸ ಗ್ರಾಮವು, ವಿಶ್ವದ ಎರಡು ಪ್ರಮುಖ ಉಪಗ್ರಹ ಚಿತ್ರಣ ಪೂರೈಕೆದಾರರಾದ ಮ್ಯಾಕ್ಸರ್ ಟೆಕ್ನಾಲಜೀಸ್ ಮತ್ತು ಪ್ಲಾನೆಟ್ ಲ್ಯಾಬ್‌ಗಳ ಚಿತ್ರಗಳ ಮೂಲಕ ದೃಢೀಕರಿಸಲಾಗಿದೆ. ಅರುಣಾಚಲ ಪ್ರದೇಶದ ಶಿ-ಯೋಮಿ ಜಿಲ್ಲೆಯ ಈ ಚಿತ್ರಗಳು ಕೇವಲ ಡಜನ್‌ಗಟ್ಟಲೆ ಕಟ್ಟಡಗಳನ್ನು ಮಾತ್ರ ತೋರಿಸುವುದಲ್ಲದೆ, ಛಾವಣಿಯ ಮೇಲ್ಭಾಗದಲ್ಲಿ ಚಿತ್ರಿಸಲಾಗಿರುವ ಚೀನಾದ ಧ್ವಜವನ್ನು ಹೊಂದಿರುವ ರಚನೆಯನ್ನೂ ತೋರಿಸುತ್ತದೆ. ಈ ಚಿತ್ರವು ಸ್ಪಷ್ಟವಾಗಿ ಕಾಣುತ್ತಿದ್ದು, ದೈತ್ಯ ಧ್ವಜವು ಈ ಪ್ರದೇಶವು ಚೀನಾಗೆ ಸೇರಿದ್ದು ಎಂದು ಪ್ರತಿಪಾದಿಸುವಂತಿದೆ.

ಭಾರತ ಸರ್ಕಾರದ ಆನ್‌ಲೈನ್ ನಕ್ಷೆ ಸೇವೆಯಾದ ಭಾರತ್‌ಮ್ಯಾಪ್ಸ್‌ನಲ್ಲಿ ಹೊಸ ಗ್ರಾಮದ ನಿಖರವಾದ ಸ್ಥಳವನ್ನು ಸ್ಪಷ್ಟವಾಗಿ ನೋಡಬಹುದಾಗಿದೆ. ಭಾರತದ ಡಿಜಿಟಲ್ ನಕ್ಷೆ, ಭಾರತದ ಸರ್ವೇಯರ್ ಜನರಲ್‌ನಿಂದ ಈ ಸ್ಥಳವು ಭಾರತದೊಳಗೆ ಇದೆ ಎಂದು ಖಚಿತಪಡಿಸುತ್ತದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ: ಪಾಕಿಸ್ತಾನದ ಹಾದಿಯಲ್ಲಿ ಚೀನಾ!“ಭಾರತೀಯ ಸಮೀಕ್ಷೆಯ ಅಧಿಕೃತ ವೆಬ್‌ಸೈಟ್‌ನಿಂದ ಪಡೆದ GIS [ಭೌಗೋಳಿಕ ಮಾಹಿತಿ ವ್ಯವಸ್ಥೆ] ದತ್ತಾಂಶವನ್ನು ಆಧರಿಸಿ, ಈ ಹಳ್ಳಿಯ ಸ್ಥಳವು ನಿಜವಾಗಿಯೂ ಭಾರತೀಯ ಪ್ರಾದೇಶಿಕ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ಮಾಹಿತಿಯನ್ನು ಒದಗಿಸುವ ಯುರೋಪ್ ಮೂಲದ ಫೋರ್ಸ್ ಅನಾಲಿಸಿಸ್‌ನ ಮುಖ್ಯ ಮಿಲಿಟರಿ ವಿಶ್ಲೇಷಕ ಸಿಮ್ ಟಾಕ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಭಾರತೀಯ ತಜ್ಞರು ಇದನ್ನು ಖಚಿತಪಡಿಸಿದ್ದು, “ಭಾರತ್‌ಮ್ಯಾಪ್‌ನಲ್ಲಿ ಈ ಪ್ರದೇಶವು ಅಂತರರಾಷ್ಟ್ರೀಯ ಗಡಿಯಿಂದ 7 ಕಿಲೋಮೀಟರ್‌ಗಳ ಒಳಗೆ ಇದೆ ಎಂದು ತೋರಿಸುತ್ತದೆ. ಭಾರತದ ಸರ್ವೇ ಜನರಲ್ ವ್ಯಾಖ್ಯಾನಿಸಿದಂತೆ, ಅವರ ಅಧಿಕಾರ ವ್ಯಾಪ್ತಿಯಲ್ಲಿ ಭಾರತದ ಗಡಿಗಳನ್ನು ಎಲ್ಲಾ ಅಧಿಕೃತ ನಕ್ಷೆಗಳಲ್ಲಿ ಚಿತ್ರಿಸಲಾಗಿದೆ” ಎಂದು ಉಪಗ್ರಹ-ಇಮೇಜಿಂಗ್ ತಂತ್ರಜ್ಞಾನದಲ್ಲಿ ದಶಕಗಳ ಅನುಭವ ಹೊಂದಿರುವ ಅರೂಪ್ ದಾಸ್‌ಗುಪ್ತ ಹೇಳಿದ್ದಾರೆ.

ಇಷ್ಟೇ ಅಲ್ಲದೆ ಈ ಗ್ರಾಮದ ಛಾಯಾಚಿತ್ರವನ್ನು ಈ ವರ್ಷದ ಜುಲೈನಲ್ಲಿ ಚೀನಾದ ಸರ್ಕಾರಿ ಪತ್ರಿಕಾ ಸಂಸ್ಥೆಯಾದ ಕ್ಸಿನ್ಹುವಾ ನ್ಯೂಸ್ ಏಜೆನ್ಸಿ ಪ್ರಕಟಿಸಿದೆ. ಚೀನಾದ ಅಧ್ಯಕ್ಷ ಕ್ಸಿ ಕ್ಸಿನ್‌ಪಿಂಗ್ ಅವರು ಅದೇ ಪ್ರದೇಶಕ್ಕೆ ಭೇಟಿ ನೀಡಿ ಅರುಣಾಚಲದ ಗಡಿಯಲ್ಲಿ ಹೊಸ, ಆಯಕಟ್ಟಿನ ಪ್ರಮುಖ ರೈಲು ಮಾರ್ಗವನ್ನು ಪರಿಶೀಲಿಸಿದ್ದರು. ಹೊಸದಾಗಿ ನಿರ್ಮಿಸಲಾದ ಚೈನೀಸ್ ಗ್ರಾಮವು ವಿಮಾನ ನಿಲ್ದಾಣದ ದಕ್ಷಿಣಕ್ಕೆ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ.

“ಭಾರತದ ಹಿಮಾಲಯದ ಗಡಿಭಾಗವನ್ನು ಚೀನಾ ಹೇಗೆ ಕಚ್ಚಿ ತಿನ್ನುತ್ತಿದೆ ಎಂಬುದನ್ನು ಹೊಸ ಗ್ರಾಮ ತೋರಿಸುತ್ತದೆ. ಹೊಳೆಯುತ್ತಿರುವ ಹೊಸ ಹಳ್ಳಿಯ ಚಿತ್ರಗಳು ಚೀನಾದ ಕೃತಕ ಸ್ವಭಾವವನ್ನು ಸ್ಪಷ್ಟವಾಗಿ ತೋರಿಸುತ್ತವೆ. ಸಾಂಪ್ರದಾಯಿಕವಾಗಿ ಯಾರೂ ಚೈನೀಸ್ ಮಾತನಾಡದ ಪ್ರದೇಶದಲ್ಲಿ ನೆಲೆಗೊಂಡಿರುವ ಹಳ್ಳಿಗೆ ಚೀನಾವು ಚೀನೀ ಹೆಸರನ್ನು ಸಹ ಇಟ್ಟಿದೆ” ಎಂದು ಭಾರತ-ಚೀನಾದ ಪ್ರಮುಖ ಕಾರ್ಯತಂತ್ರದ ವಿಶ್ಲೇಷಕರಲ್ಲಿ ಒಬ್ಬರಾದ ಬ್ರಹ್ಮ ಚೆಲ್ಲಾನೆ ಹೇಳಿದ್ದಾರೆ.

ಇದನ್ನೂ ಓದಿ: ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...