HomeUncategorizedಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಾವು ತನ್ನ ಎರಡನೇ ಗ್ರಾಮವನ್ನು ನಿರ್ಮಿಸಿರುವುದು ಹೊಸ ಉಪಗ್ರಹ ಚಿತ್ರಗಳ ಮೂಲಕ ತಿಳಿದು ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಗ್ರಾಮದಲ್ಲಿ ಕನಿಷ್ಠ 60 ಕಟ್ಟಡಗಳನ್ನು ಚೀನಾ ನಿರ್ಮಿಸಿದೆ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2019 ರಲ್ಲಿ ತೆಗೆಯಲಾದ ಉಪಗ್ರಹ ಚಿತ್ರಗಳಲ್ಲಿ ಈ ಹೊಸ ಗ್ರಾಮ ಇರಲಿಲ್ಲ. ಆದರೆ ಒಂದು ವರ್ಷದ ನಂತರ ತೆಗೆಯಲಾದ ಉಪಗ್ರಹದ ಚಿತ್ರದಲ್ಲಿ ಇದನ್ನು ಕಾಣಬಹುದಾಗಿದೆ. ಈ ಹೊಸ ಗ್ರಾಮವು ಚೀನಾ ಈ ಹಿಂದೆ ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಿದ್ದ ಗ್ರಾಮಕ್ಕಿಂತ 93 ಕಿಮೀ ದೂರದಲ್ಲಿದೆ. ಚೀನಾ ಭಾರತದ ಭೂಭಾಗದೊಳಗೆ ಒಂದು ದೊಡ್ಡ ಗ್ರಾಮವನ್ನೇ ನಿರ್ಮಿಸಿದೆ ಎಂದು ಕಳೆದ ಜನವರಿಯಲ್ಲಿ ವರದಿಯಾಗಿತ್ತು. ಈ ವರದಿಯನ್ನು ಕೆಲವು ದಿನಗಳ ಹಿಂದೆ ಅಮೆರಿಕಾ ಭದ್ರತಾ ಆಯೋಗ ಕೂಡಾ ದೃಢಪಡಿಸಿತ್ತು.

ಚೀನಾ ನಿರ್ಮಿಸಿರುವ ಎರಡನೇ ಗ್ರಾಮವು ಭಾರತದೊಳಗೆ ‘ವಾಸ್ತವ ನಿಂಯಂತ್ರಣ ರೇಖೆ’ (LAC) ಮತ್ತು ಅಂತರಾಷ್ಟ್ರೀಯ ಗಡಿರೇಖೆಯ ನಡುವಿನ ಪ್ರದೇಶದ ಸುಮಾರು 6 ಕಿಲೋಮೀಟರ್ ದೂರದಲ್ಲಿದೆ. ಈ ಪ್ರದೇಶವನ್ನು ಭಾರತವು ಹಿಂದಿನಿಂದಲೂ ತನ್ನ ಸ್ವಂತ ಪ್ರದೇಶವೆಂದು ಹೇಳಿಕೊಂಡಿದೆ. ಈ ಚಿತ್ರಗಳು ಯಾವ ಪ್ರದೇಶದಲ್ಲಿವೆ ಎಂದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ಪ್ರಸ್ತುತ ಸ್ಥಳವು ಚೀನಾದ ಭೂಪ್ರದೇಶದ ವಾಸ್ತವ ನಿಯಂತ್ರಣ ರೇಖೆಯ ಉತ್ತರದಲ್ಲಿದೆ ಎಂದು ಭಾರತೀಯ ಸೇನೆ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಸೇನೆಯ ಈ ಹೇಳಿಕೆಯು ಭಾರತೀಯ ಭೂಪ್ರದೇಶದಲ್ಲಿ ಗ್ರಾಮವನ್ನು ನಿರ್ಮಿಸುವ ಬಗ್ಗೆ ನಿರಾಕರಿಸುತ್ತಿಲ್ಲ ಎಂದು ಎನ್‌ಡಿಟಿವಿ ಹೇಳಿದ್ದು, ಗ್ರಾಮವು ಚೀನಾ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶದೊಳಗೆ ಇದೆ ಎಂದು ವರದಿ ತಿಳಿಸಿದೆ.

ಚೀನಾ ನಿರ್ಮಿಸಿರುವ ಹೊಸ ಗ್ರಾಮವು, ವಿಶ್ವದ ಎರಡು ಪ್ರಮುಖ ಉಪಗ್ರಹ ಚಿತ್ರಣ ಪೂರೈಕೆದಾರರಾದ ಮ್ಯಾಕ್ಸರ್ ಟೆಕ್ನಾಲಜೀಸ್ ಮತ್ತು ಪ್ಲಾನೆಟ್ ಲ್ಯಾಬ್‌ಗಳ ಚಿತ್ರಗಳ ಮೂಲಕ ದೃಢೀಕರಿಸಲಾಗಿದೆ. ಅರುಣಾಚಲ ಪ್ರದೇಶದ ಶಿ-ಯೋಮಿ ಜಿಲ್ಲೆಯ ಈ ಚಿತ್ರಗಳು ಕೇವಲ ಡಜನ್‌ಗಟ್ಟಲೆ ಕಟ್ಟಡಗಳನ್ನು ಮಾತ್ರ ತೋರಿಸುವುದಲ್ಲದೆ, ಛಾವಣಿಯ ಮೇಲ್ಭಾಗದಲ್ಲಿ ಚಿತ್ರಿಸಲಾಗಿರುವ ಚೀನಾದ ಧ್ವಜವನ್ನು ಹೊಂದಿರುವ ರಚನೆಯನ್ನೂ ತೋರಿಸುತ್ತದೆ. ಈ ಚಿತ್ರವು ಸ್ಪಷ್ಟವಾಗಿ ಕಾಣುತ್ತಿದ್ದು, ದೈತ್ಯ ಧ್ವಜವು ಈ ಪ್ರದೇಶವು ಚೀನಾಗೆ ಸೇರಿದ್ದು ಎಂದು ಪ್ರತಿಪಾದಿಸುವಂತಿದೆ.

ಭಾರತ ಸರ್ಕಾರದ ಆನ್‌ಲೈನ್ ನಕ್ಷೆ ಸೇವೆಯಾದ ಭಾರತ್‌ಮ್ಯಾಪ್ಸ್‌ನಲ್ಲಿ ಹೊಸ ಗ್ರಾಮದ ನಿಖರವಾದ ಸ್ಥಳವನ್ನು ಸ್ಪಷ್ಟವಾಗಿ ನೋಡಬಹುದಾಗಿದೆ. ಭಾರತದ ಡಿಜಿಟಲ್ ನಕ್ಷೆ, ಭಾರತದ ಸರ್ವೇಯರ್ ಜನರಲ್‌ನಿಂದ ಈ ಸ್ಥಳವು ಭಾರತದೊಳಗೆ ಇದೆ ಎಂದು ಖಚಿತಪಡಿಸುತ್ತದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ: ಪಾಕಿಸ್ತಾನದ ಹಾದಿಯಲ್ಲಿ ಚೀನಾ!“ಭಾರತೀಯ ಸಮೀಕ್ಷೆಯ ಅಧಿಕೃತ ವೆಬ್‌ಸೈಟ್‌ನಿಂದ ಪಡೆದ GIS [ಭೌಗೋಳಿಕ ಮಾಹಿತಿ ವ್ಯವಸ್ಥೆ] ದತ್ತಾಂಶವನ್ನು ಆಧರಿಸಿ, ಈ ಹಳ್ಳಿಯ ಸ್ಥಳವು ನಿಜವಾಗಿಯೂ ಭಾರತೀಯ ಪ್ರಾದೇಶಿಕ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ” ಎಂದು ಮಾಹಿತಿಯನ್ನು ಒದಗಿಸುವ ಯುರೋಪ್ ಮೂಲದ ಫೋರ್ಸ್ ಅನಾಲಿಸಿಸ್‌ನ ಮುಖ್ಯ ಮಿಲಿಟರಿ ವಿಶ್ಲೇಷಕ ಸಿಮ್ ಟಾಕ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಭಾರತೀಯ ತಜ್ಞರು ಇದನ್ನು ಖಚಿತಪಡಿಸಿದ್ದು, “ಭಾರತ್‌ಮ್ಯಾಪ್‌ನಲ್ಲಿ ಈ ಪ್ರದೇಶವು ಅಂತರರಾಷ್ಟ್ರೀಯ ಗಡಿಯಿಂದ 7 ಕಿಲೋಮೀಟರ್‌ಗಳ ಒಳಗೆ ಇದೆ ಎಂದು ತೋರಿಸುತ್ತದೆ. ಭಾರತದ ಸರ್ವೇ ಜನರಲ್ ವ್ಯಾಖ್ಯಾನಿಸಿದಂತೆ, ಅವರ ಅಧಿಕಾರ ವ್ಯಾಪ್ತಿಯಲ್ಲಿ ಭಾರತದ ಗಡಿಗಳನ್ನು ಎಲ್ಲಾ ಅಧಿಕೃತ ನಕ್ಷೆಗಳಲ್ಲಿ ಚಿತ್ರಿಸಲಾಗಿದೆ” ಎಂದು ಉಪಗ್ರಹ-ಇಮೇಜಿಂಗ್ ತಂತ್ರಜ್ಞಾನದಲ್ಲಿ ದಶಕಗಳ ಅನುಭವ ಹೊಂದಿರುವ ಅರೂಪ್ ದಾಸ್‌ಗುಪ್ತ ಹೇಳಿದ್ದಾರೆ.

ಇಷ್ಟೇ ಅಲ್ಲದೆ ಈ ಗ್ರಾಮದ ಛಾಯಾಚಿತ್ರವನ್ನು ಈ ವರ್ಷದ ಜುಲೈನಲ್ಲಿ ಚೀನಾದ ಸರ್ಕಾರಿ ಪತ್ರಿಕಾ ಸಂಸ್ಥೆಯಾದ ಕ್ಸಿನ್ಹುವಾ ನ್ಯೂಸ್ ಏಜೆನ್ಸಿ ಪ್ರಕಟಿಸಿದೆ. ಚೀನಾದ ಅಧ್ಯಕ್ಷ ಕ್ಸಿ ಕ್ಸಿನ್‌ಪಿಂಗ್ ಅವರು ಅದೇ ಪ್ರದೇಶಕ್ಕೆ ಭೇಟಿ ನೀಡಿ ಅರುಣಾಚಲದ ಗಡಿಯಲ್ಲಿ ಹೊಸ, ಆಯಕಟ್ಟಿನ ಪ್ರಮುಖ ರೈಲು ಮಾರ್ಗವನ್ನು ಪರಿಶೀಲಿಸಿದ್ದರು. ಹೊಸದಾಗಿ ನಿರ್ಮಿಸಲಾದ ಚೈನೀಸ್ ಗ್ರಾಮವು ವಿಮಾನ ನಿಲ್ದಾಣದ ದಕ್ಷಿಣಕ್ಕೆ ಸುಮಾರು 33 ಕಿಲೋಮೀಟರ್ ದೂರದಲ್ಲಿದೆ.

“ಭಾರತದ ಹಿಮಾಲಯದ ಗಡಿಭಾಗವನ್ನು ಚೀನಾ ಹೇಗೆ ಕಚ್ಚಿ ತಿನ್ನುತ್ತಿದೆ ಎಂಬುದನ್ನು ಹೊಸ ಗ್ರಾಮ ತೋರಿಸುತ್ತದೆ. ಹೊಳೆಯುತ್ತಿರುವ ಹೊಸ ಹಳ್ಳಿಯ ಚಿತ್ರಗಳು ಚೀನಾದ ಕೃತಕ ಸ್ವಭಾವವನ್ನು ಸ್ಪಷ್ಟವಾಗಿ ತೋರಿಸುತ್ತವೆ. ಸಾಂಪ್ರದಾಯಿಕವಾಗಿ ಯಾರೂ ಚೈನೀಸ್ ಮಾತನಾಡದ ಪ್ರದೇಶದಲ್ಲಿ ನೆಲೆಗೊಂಡಿರುವ ಹಳ್ಳಿಗೆ ಚೀನಾವು ಚೀನೀ ಹೆಸರನ್ನು ಸಹ ಇಟ್ಟಿದೆ” ಎಂದು ಭಾರತ-ಚೀನಾದ ಪ್ರಮುಖ ಕಾರ್ಯತಂತ್ರದ ವಿಶ್ಲೇಷಕರಲ್ಲಿ ಒಬ್ಬರಾದ ಬ್ರಹ್ಮ ಚೆಲ್ಲಾನೆ ಹೇಳಿದ್ದಾರೆ.

ಇದನ್ನೂ ಓದಿ: ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...