Homeಮುಖಪುಟಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

- Advertisement -
- Advertisement -

ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ… ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?


ನಿನ್ನೆಯಿಂದ ಎಲ್ಲಾ ಮಾಧ್ಯಮಗಳು ಗಾಲ್ವಾನ್ ಪ್ರಾಂತ್ಯದಿಂದ ಚೀನಾ ಸೈನಿಕರು ಹಿಂದೆ ಸರಿಯುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳಾದ ಅಜಿತ್ ದೋವಲ್ ಹಾಗು ವಾಂಗ್ ಯೀ ಟೆಲಿಫೋನ್ ಮಾತುಕತೆ ನಡೆಸಿದ ನಂತರ ಈ ಬೆಳವಣಿಗೆಯಾಗಿವೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಎರಡು ಹೆಜ್ಜೆ ಮುಂದಿಟ್ಟಿದ್ದ ಚೀನಾ ಒಂದು ಹೆಜ್ಜೆ ಹಿಂದೆ ಸರಿದರೆ, ಅದು ಹಿನ್ನೆಡೆಯೋ? ಮುನ್ನೆಡೆಯೋ? ಎಂದು ಅವಲೋಕಿಸಬೇಕಾಗಿದೆ.

ಆದರೆ ಎರಡು ದೇಶಗಳ ಸರ್ಕಾರಗಳು ಈವರೆಗೆ ಯಾವ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ. ಬದಲಿಗೆ ಭಾರತೀಯ ಮಾಧ್ಯಮಗಳು ಸೇನೆಯಲ್ಲಿನ ಅನಾಮಿಕ ಸರ್ಕಾರಿ “ಮೂಲಗಳನ್ನು” ಆಧರಿಸಿ ವರದಿ ಮಾಡಿವೆ. ಎಲ್ಲಾ ಮಾಧ್ಯಮಗಳಲ್ಲೂ ಈ ಸುದ್ದಿ ಏಕಕಾಲದಲ್ಲಿ ಪ್ರಕಟವಾಗಿರುವುದು ನೋಡಿದರೆ ಕೇಂದ್ರ ಸರ್ಕಾರ ಮತ್ತು ಸೇನೆಯು ಈ ಮೂಲಗಳಿಗೆ ಅನಾಮಿಕವಾಗಿ ಹೇಳಿಕೆ ನೀಡಲು ಅಧಿಕೃತ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಆದರೆ ಅಧಿಕೃತವಾದ ಹೇಳಿಕೆ ಏಕಿಲ್ಲ ಎಂಬ ಪ್ರಶ್ನೆ ಸಹಜವಾಗಿ ಹುಟ್ಟುತ್ತದೆ.

ಆದ್ದರಿಂದಲೇ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅಜಯ್ ಶುಕ್ಲಾ ಅವರು ಈ ಸುದ್ದಿಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ :

ಈ ಸುದ್ದಿಯು ನಿಜವೇ ಆಗಿದ್ದಲ್ಲಿ ನಾನು
ಅ) ಸರ್ಕಾರದ ಅಧಿಕೃತ ಹೇಳಿಕೆಯನ್ನು ನೋಡಬಯಸುತ್ತೇನೆ. ಅನಾಮಿಕ ಮೂಲದ ಸುದ್ದಿಯನ್ನಲ್ಲ.
ಆ) ಚೀನಿಯರು ಹಿಂದಿರುಗುತ್ತಿರುವುದನ್ನು ಧೃಡಪಡಿಸುವ ಉಪಗ್ರಹ ಚಿತ್ರ ಹಾಗು
ಇ ) ಭಾರತೀಯ ಸೈನಿಕರು ಹಿಂದೆ ಸರಿದಿದ್ದು ಎಲ್ಲಿಗೆ ಎಂಬ ಪ್ರಶ್ನೆಗಳಿಗೆ ಉತ್ತರ ಬಯಸುತ್ತೇನೆ ಎಂದು ಕರ್ನಲ್ ಕೇಳಿದ್ದಾರೆ.

ಇದರ ಜೊತೆಗೆ ದೇಶ ಭಕ್ತಿಗೂ ಮೋದಿ ಭಕ್ತಿಗೂ ವ್ಯತ್ಯಾಸ ಗೊತ್ತಿರುವವರಿಗೂ ಹಾಗು ತಮ್ಮ ಬುದ್ಧಿಯನ್ನು ಮತ್ತು ಕಾಮನ್ ಸೆನ್ಸನ್ನು ಇತರರಿಗೆ ಒಪ್ಪಿಸದವರಿಗೂ ಇನ್ನು ಕೆಲವು ಪ್ರಶ್ನೆಗಳು ಮೂಡುವುದು ಸಹಜ.

ಅನಾಮಿಕ ಮೂಲದ ಹೇಳಿಕೆಯ ಪ್ರಕಾರ ಭಾರತ ಸೇನೆಯು ಕೂಡಾ ಗಾಲ್ವಾನ್ ಘರ್ಷಣೆ ನಡೆದ PP 14 ಪ್ರದೇಶದಿಂದ 1.8 ಕಿ.ಮೀ ಯಷ್ಟು ಹಿಂದೆ ಸರಿದಿದೆ.

ಇದರ ಅರ್ಥವೇನು?

ಈವರೆಗೆ ಮೋದಿ ಸರ್ಕಾರವು ಗಾಲ್ವಾನ್ ಘರ್ಷಣೆ ನಡೆದ ಪ್ರದೇಶವು ( PP 14 ) ವಿವಾದಾತೀತವಾಗಿ ಭಾರತ ಪ್ರದೇಶವಾಗಿದೆಯೆಂದು, ಚೀನಾ ಭಾರತದ ಸರಹದ್ದಿನೊಳಗೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಅಲ್ಲಿ ಘರ್ಷಣೆಯುಂಟಾಯಿತೆಂದು ಹೇಳಿಕೊಂಡು ಬಂದಿದೆ.

ಹಾಗಿದ್ದಲ್ಲಿ PP 14 ಪ್ರದೇಶದಿಂದ 1.8 ಕಿಮಿ ಭಾರತ ಮತ್ತು ಚೀನಾ ಎರಡು ಹಿಂದೆ ಸರಿದಿದೆ ಎಂದರೆ ಭಾರತವು ಕೂಡಾ ವಿವಾದೀತವಾಗಿ ತನ್ನ ಸುಪರ್ದಿನಲ್ಲಿದ್ದ ಪ್ರದೇಶವನ್ನು ಬಿಟ್ಟು ಹಿಂದೆ ಸರಿದಿದೆ ಎಂದಾಗಲಿಲ್ಲವೇ?

ಹಾಗಿದ್ದ ಮೇಲೆ ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

ಗಾಲ್ವಾನ್ ಪ್ರದೇಶಕ್ಕಿಂತ ಇನ್ನು ತೀವ್ರವಾದ ಗಡಿ ವಿವಾದವಿರುವ ಪ್ರದೇಶ ಪಾಂಗಾಂಗ್ ಸರೋವರ ಪ್ರದೇಶ.

ಅಲ್ಲಿ ಸರೋವರದ ಪೂರ್ವಭಾಗದ ಚೀನಾದ ಕಡೆ ಇರುವ ಫಿಂಗರ್ 8 ಎಂಬಲ್ಲಿಯವರೆಗೆ ಭಾರತ ತನ್ನ ಪ್ರದೇಶವೆಂದು ವಾದಿಸಿದರೆ, ಸರೋವರದ ಪಶ್ಚಿಮಕ್ಕೆ ಭಾರತದ ಕಡೆ ಇರುವ ಫಿಂಗರ್ 4 ರ ವರೆಗೆ ತನ್ನ ಪ್ರದೇಶವೆಂದು ಚೀನಾ ವಾದಿಸುತ್ತದೆ.

ಫಿಂಗರ್ 4 ಹಾಗೂ ಫಿಂಗರ್ 8 ರ ನಡುವೆ 8 ಕಿಮಿ ವ್ಯಾಪ್ತಿಯ ಪ್ರದೇಶವಿದ್ದು ಚೀನಾವು ಫಿಂಗರ್ 4 ರಿಂದ ಒಂದು ಕಿಮಿ ದೂರ ಮಾತ್ರ ಹಿಂದೆ ಸರಿದಿದೆ ಎಂದು ಭಾರತೀಯ ‌ಸೇನಾ ಮೂಲವು ತಿಳಿಸುತ್ತದೆ .

ಅಂದರೆ ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ…..

ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?

ಒಂದು ದೀರ್ಘಕಾಲೀನ ಶಾಂತಿ ಮಾತುಕತೆಯ ಭಾಗವಾಗಿ ಈ ಬಗೆಯ ತಾತ್ಕಾಲಿಕ ಹಿಂದೆ ಸರಿಕೆಯಲ್ಲಿ ತಪ್ಪಿಲ್ಲ.

ಅದರಲ್ಲೂ ಭಾರತ ಮತ್ತು ಚೀನಾ ನಡುವೆ ಗಡಿ ಭಾಗಗಳು ನಿಖರವಾಗಿ ಗುರುತುಪಡಿಸಿಲ್ಲವಾದ್ದರಿಂದ ಇಂಥಾ ರಾಜತಾಂತ್ರಿಕ-ಸೈನಿಕ ಕ್ರಮಗಳಿಗೆ ಸರ್ಕಾರ ಮುಂದಾಗಬೇಕಾಗುತ್ತದೆ.

ಆದರೆ ಸತ್ಯಕ್ಕೆ ತದ್ವಿರುದ್ಧವಾದ ಹೇಳಿಕೆಯನ್ನು ಕೊಟ್ಟು ಜನರಲ್ಲಿ ರಾಜಕೀಯ ದುರುದ್ದೇಶಗಳಿಗೆ ಹುಸಿ ಗೆಲುವಿನ ಉನ್ಮಾದವನ್ನು ಸೃಷ್ಟಿಸುವುದು ತಪ್ಪು. ಅಷ್ಟೇ…

ಎಲ್ಲಕ್ಕಿಂತ ಹೆಚ್ಚಾಗಿ ಈ ಗಾಲ್ವಾನ್ ಮತ್ತು ಹಿಂದಿನ ದೋಕ್ಲಾಮ್ ಘರ್ಷಣೆಗಳಿಂದ ಮೋದಿ ಸರ್ಕಾರ ಸಾಕಷ್ಟು ಪಾಠಗಳನ್ನು ಕಲಿಯಬೇಕಿದೆ.

ಈ ಭೂಭಾಗದಲ್ಲಿ ಅಮೇರಿಕ ಸಾಮ್ರಾಟನ ಸಾಮಂತನಾಗಿ ಕೆಲಸ ಮಾಡುವುದು ಅಮೇರಿಕಾದ ಹಿತಾಸಕ್ತಿಗಳಿಗೆ ಪೂರಕವೇ ಹೊರತು ಭಾರತದ ಹಿತಾಸಕ್ತಿಗೆ ಮಾರಕವೆಂಬುದನ್ನು ಈಗಲಾದರೂ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಅಲ್ಲವೇ?; ಜಸ್ಟ್ ಆಸ್ಕಿಂಗ್


ಓದಿ: ಅರುಣಾಚಲದ ಮೇಲೆ ಚೀನಾ ಕಣ್ಣು?; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....