Homeಮುಖಪುಟಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

- Advertisement -
- Advertisement -

ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ… ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?


ನಿನ್ನೆಯಿಂದ ಎಲ್ಲಾ ಮಾಧ್ಯಮಗಳು ಗಾಲ್ವಾನ್ ಪ್ರಾಂತ್ಯದಿಂದ ಚೀನಾ ಸೈನಿಕರು ಹಿಂದೆ ಸರಿಯುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳಾದ ಅಜಿತ್ ದೋವಲ್ ಹಾಗು ವಾಂಗ್ ಯೀ ಟೆಲಿಫೋನ್ ಮಾತುಕತೆ ನಡೆಸಿದ ನಂತರ ಈ ಬೆಳವಣಿಗೆಯಾಗಿವೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಎರಡು ಹೆಜ್ಜೆ ಮುಂದಿಟ್ಟಿದ್ದ ಚೀನಾ ಒಂದು ಹೆಜ್ಜೆ ಹಿಂದೆ ಸರಿದರೆ, ಅದು ಹಿನ್ನೆಡೆಯೋ? ಮುನ್ನೆಡೆಯೋ? ಎಂದು ಅವಲೋಕಿಸಬೇಕಾಗಿದೆ.

ಆದರೆ ಎರಡು ದೇಶಗಳ ಸರ್ಕಾರಗಳು ಈವರೆಗೆ ಯಾವ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ. ಬದಲಿಗೆ ಭಾರತೀಯ ಮಾಧ್ಯಮಗಳು ಸೇನೆಯಲ್ಲಿನ ಅನಾಮಿಕ ಸರ್ಕಾರಿ “ಮೂಲಗಳನ್ನು” ಆಧರಿಸಿ ವರದಿ ಮಾಡಿವೆ. ಎಲ್ಲಾ ಮಾಧ್ಯಮಗಳಲ್ಲೂ ಈ ಸುದ್ದಿ ಏಕಕಾಲದಲ್ಲಿ ಪ್ರಕಟವಾಗಿರುವುದು ನೋಡಿದರೆ ಕೇಂದ್ರ ಸರ್ಕಾರ ಮತ್ತು ಸೇನೆಯು ಈ ಮೂಲಗಳಿಗೆ ಅನಾಮಿಕವಾಗಿ ಹೇಳಿಕೆ ನೀಡಲು ಅಧಿಕೃತ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಆದರೆ ಅಧಿಕೃತವಾದ ಹೇಳಿಕೆ ಏಕಿಲ್ಲ ಎಂಬ ಪ್ರಶ್ನೆ ಸಹಜವಾಗಿ ಹುಟ್ಟುತ್ತದೆ.

ಆದ್ದರಿಂದಲೇ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅಜಯ್ ಶುಕ್ಲಾ ಅವರು ಈ ಸುದ್ದಿಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ :

ಈ ಸುದ್ದಿಯು ನಿಜವೇ ಆಗಿದ್ದಲ್ಲಿ ನಾನು
ಅ) ಸರ್ಕಾರದ ಅಧಿಕೃತ ಹೇಳಿಕೆಯನ್ನು ನೋಡಬಯಸುತ್ತೇನೆ. ಅನಾಮಿಕ ಮೂಲದ ಸುದ್ದಿಯನ್ನಲ್ಲ.
ಆ) ಚೀನಿಯರು ಹಿಂದಿರುಗುತ್ತಿರುವುದನ್ನು ಧೃಡಪಡಿಸುವ ಉಪಗ್ರಹ ಚಿತ್ರ ಹಾಗು
ಇ ) ಭಾರತೀಯ ಸೈನಿಕರು ಹಿಂದೆ ಸರಿದಿದ್ದು ಎಲ್ಲಿಗೆ ಎಂಬ ಪ್ರಶ್ನೆಗಳಿಗೆ ಉತ್ತರ ಬಯಸುತ್ತೇನೆ ಎಂದು ಕರ್ನಲ್ ಕೇಳಿದ್ದಾರೆ.

ಇದರ ಜೊತೆಗೆ ದೇಶ ಭಕ್ತಿಗೂ ಮೋದಿ ಭಕ್ತಿಗೂ ವ್ಯತ್ಯಾಸ ಗೊತ್ತಿರುವವರಿಗೂ ಹಾಗು ತಮ್ಮ ಬುದ್ಧಿಯನ್ನು ಮತ್ತು ಕಾಮನ್ ಸೆನ್ಸನ್ನು ಇತರರಿಗೆ ಒಪ್ಪಿಸದವರಿಗೂ ಇನ್ನು ಕೆಲವು ಪ್ರಶ್ನೆಗಳು ಮೂಡುವುದು ಸಹಜ.

ಅನಾಮಿಕ ಮೂಲದ ಹೇಳಿಕೆಯ ಪ್ರಕಾರ ಭಾರತ ಸೇನೆಯು ಕೂಡಾ ಗಾಲ್ವಾನ್ ಘರ್ಷಣೆ ನಡೆದ PP 14 ಪ್ರದೇಶದಿಂದ 1.8 ಕಿ.ಮೀ ಯಷ್ಟು ಹಿಂದೆ ಸರಿದಿದೆ.

ಇದರ ಅರ್ಥವೇನು?

ಈವರೆಗೆ ಮೋದಿ ಸರ್ಕಾರವು ಗಾಲ್ವಾನ್ ಘರ್ಷಣೆ ನಡೆದ ಪ್ರದೇಶವು ( PP 14 ) ವಿವಾದಾತೀತವಾಗಿ ಭಾರತ ಪ್ರದೇಶವಾಗಿದೆಯೆಂದು, ಚೀನಾ ಭಾರತದ ಸರಹದ್ದಿನೊಳಗೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಅಲ್ಲಿ ಘರ್ಷಣೆಯುಂಟಾಯಿತೆಂದು ಹೇಳಿಕೊಂಡು ಬಂದಿದೆ.

ಹಾಗಿದ್ದಲ್ಲಿ PP 14 ಪ್ರದೇಶದಿಂದ 1.8 ಕಿಮಿ ಭಾರತ ಮತ್ತು ಚೀನಾ ಎರಡು ಹಿಂದೆ ಸರಿದಿದೆ ಎಂದರೆ ಭಾರತವು ಕೂಡಾ ವಿವಾದೀತವಾಗಿ ತನ್ನ ಸುಪರ್ದಿನಲ್ಲಿದ್ದ ಪ್ರದೇಶವನ್ನು ಬಿಟ್ಟು ಹಿಂದೆ ಸರಿದಿದೆ ಎಂದಾಗಲಿಲ್ಲವೇ?

ಹಾಗಿದ್ದ ಮೇಲೆ ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

ಗಾಲ್ವಾನ್ ಪ್ರದೇಶಕ್ಕಿಂತ ಇನ್ನು ತೀವ್ರವಾದ ಗಡಿ ವಿವಾದವಿರುವ ಪ್ರದೇಶ ಪಾಂಗಾಂಗ್ ಸರೋವರ ಪ್ರದೇಶ.

ಅಲ್ಲಿ ಸರೋವರದ ಪೂರ್ವಭಾಗದ ಚೀನಾದ ಕಡೆ ಇರುವ ಫಿಂಗರ್ 8 ಎಂಬಲ್ಲಿಯವರೆಗೆ ಭಾರತ ತನ್ನ ಪ್ರದೇಶವೆಂದು ವಾದಿಸಿದರೆ, ಸರೋವರದ ಪಶ್ಚಿಮಕ್ಕೆ ಭಾರತದ ಕಡೆ ಇರುವ ಫಿಂಗರ್ 4 ರ ವರೆಗೆ ತನ್ನ ಪ್ರದೇಶವೆಂದು ಚೀನಾ ವಾದಿಸುತ್ತದೆ.

ಫಿಂಗರ್ 4 ಹಾಗೂ ಫಿಂಗರ್ 8 ರ ನಡುವೆ 8 ಕಿಮಿ ವ್ಯಾಪ್ತಿಯ ಪ್ರದೇಶವಿದ್ದು ಚೀನಾವು ಫಿಂಗರ್ 4 ರಿಂದ ಒಂದು ಕಿಮಿ ದೂರ ಮಾತ್ರ ಹಿಂದೆ ಸರಿದಿದೆ ಎಂದು ಭಾರತೀಯ ‌ಸೇನಾ ಮೂಲವು ತಿಳಿಸುತ್ತದೆ .

ಅಂದರೆ ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ…..

ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?

ಒಂದು ದೀರ್ಘಕಾಲೀನ ಶಾಂತಿ ಮಾತುಕತೆಯ ಭಾಗವಾಗಿ ಈ ಬಗೆಯ ತಾತ್ಕಾಲಿಕ ಹಿಂದೆ ಸರಿಕೆಯಲ್ಲಿ ತಪ್ಪಿಲ್ಲ.

ಅದರಲ್ಲೂ ಭಾರತ ಮತ್ತು ಚೀನಾ ನಡುವೆ ಗಡಿ ಭಾಗಗಳು ನಿಖರವಾಗಿ ಗುರುತುಪಡಿಸಿಲ್ಲವಾದ್ದರಿಂದ ಇಂಥಾ ರಾಜತಾಂತ್ರಿಕ-ಸೈನಿಕ ಕ್ರಮಗಳಿಗೆ ಸರ್ಕಾರ ಮುಂದಾಗಬೇಕಾಗುತ್ತದೆ.

ಆದರೆ ಸತ್ಯಕ್ಕೆ ತದ್ವಿರುದ್ಧವಾದ ಹೇಳಿಕೆಯನ್ನು ಕೊಟ್ಟು ಜನರಲ್ಲಿ ರಾಜಕೀಯ ದುರುದ್ದೇಶಗಳಿಗೆ ಹುಸಿ ಗೆಲುವಿನ ಉನ್ಮಾದವನ್ನು ಸೃಷ್ಟಿಸುವುದು ತಪ್ಪು. ಅಷ್ಟೇ…

ಎಲ್ಲಕ್ಕಿಂತ ಹೆಚ್ಚಾಗಿ ಈ ಗಾಲ್ವಾನ್ ಮತ್ತು ಹಿಂದಿನ ದೋಕ್ಲಾಮ್ ಘರ್ಷಣೆಗಳಿಂದ ಮೋದಿ ಸರ್ಕಾರ ಸಾಕಷ್ಟು ಪಾಠಗಳನ್ನು ಕಲಿಯಬೇಕಿದೆ.

ಈ ಭೂಭಾಗದಲ್ಲಿ ಅಮೇರಿಕ ಸಾಮ್ರಾಟನ ಸಾಮಂತನಾಗಿ ಕೆಲಸ ಮಾಡುವುದು ಅಮೇರಿಕಾದ ಹಿತಾಸಕ್ತಿಗಳಿಗೆ ಪೂರಕವೇ ಹೊರತು ಭಾರತದ ಹಿತಾಸಕ್ತಿಗೆ ಮಾರಕವೆಂಬುದನ್ನು ಈಗಲಾದರೂ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಅಲ್ಲವೇ?; ಜಸ್ಟ್ ಆಸ್ಕಿಂಗ್


ಓದಿ: ಅರುಣಾಚಲದ ಮೇಲೆ ಚೀನಾ ಕಣ್ಣು?; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...