Homeಮುಖಪುಟಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

- Advertisement -
- Advertisement -

ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ… ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?


ನಿನ್ನೆಯಿಂದ ಎಲ್ಲಾ ಮಾಧ್ಯಮಗಳು ಗಾಲ್ವಾನ್ ಪ್ರಾಂತ್ಯದಿಂದ ಚೀನಾ ಸೈನಿಕರು ಹಿಂದೆ ಸರಿಯುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳಾದ ಅಜಿತ್ ದೋವಲ್ ಹಾಗು ವಾಂಗ್ ಯೀ ಟೆಲಿಫೋನ್ ಮಾತುಕತೆ ನಡೆಸಿದ ನಂತರ ಈ ಬೆಳವಣಿಗೆಯಾಗಿವೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಎರಡು ಹೆಜ್ಜೆ ಮುಂದಿಟ್ಟಿದ್ದ ಚೀನಾ ಒಂದು ಹೆಜ್ಜೆ ಹಿಂದೆ ಸರಿದರೆ, ಅದು ಹಿನ್ನೆಡೆಯೋ? ಮುನ್ನೆಡೆಯೋ? ಎಂದು ಅವಲೋಕಿಸಬೇಕಾಗಿದೆ.

ಆದರೆ ಎರಡು ದೇಶಗಳ ಸರ್ಕಾರಗಳು ಈವರೆಗೆ ಯಾವ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ. ಬದಲಿಗೆ ಭಾರತೀಯ ಮಾಧ್ಯಮಗಳು ಸೇನೆಯಲ್ಲಿನ ಅನಾಮಿಕ ಸರ್ಕಾರಿ “ಮೂಲಗಳನ್ನು” ಆಧರಿಸಿ ವರದಿ ಮಾಡಿವೆ. ಎಲ್ಲಾ ಮಾಧ್ಯಮಗಳಲ್ಲೂ ಈ ಸುದ್ದಿ ಏಕಕಾಲದಲ್ಲಿ ಪ್ರಕಟವಾಗಿರುವುದು ನೋಡಿದರೆ ಕೇಂದ್ರ ಸರ್ಕಾರ ಮತ್ತು ಸೇನೆಯು ಈ ಮೂಲಗಳಿಗೆ ಅನಾಮಿಕವಾಗಿ ಹೇಳಿಕೆ ನೀಡಲು ಅಧಿಕೃತ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಆದರೆ ಅಧಿಕೃತವಾದ ಹೇಳಿಕೆ ಏಕಿಲ್ಲ ಎಂಬ ಪ್ರಶ್ನೆ ಸಹಜವಾಗಿ ಹುಟ್ಟುತ್ತದೆ.

ಆದ್ದರಿಂದಲೇ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅಜಯ್ ಶುಕ್ಲಾ ಅವರು ಈ ಸುದ್ದಿಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ :

ಈ ಸುದ್ದಿಯು ನಿಜವೇ ಆಗಿದ್ದಲ್ಲಿ ನಾನು
ಅ) ಸರ್ಕಾರದ ಅಧಿಕೃತ ಹೇಳಿಕೆಯನ್ನು ನೋಡಬಯಸುತ್ತೇನೆ. ಅನಾಮಿಕ ಮೂಲದ ಸುದ್ದಿಯನ್ನಲ್ಲ.
ಆ) ಚೀನಿಯರು ಹಿಂದಿರುಗುತ್ತಿರುವುದನ್ನು ಧೃಡಪಡಿಸುವ ಉಪಗ್ರಹ ಚಿತ್ರ ಹಾಗು
ಇ ) ಭಾರತೀಯ ಸೈನಿಕರು ಹಿಂದೆ ಸರಿದಿದ್ದು ಎಲ್ಲಿಗೆ ಎಂಬ ಪ್ರಶ್ನೆಗಳಿಗೆ ಉತ್ತರ ಬಯಸುತ್ತೇನೆ ಎಂದು ಕರ್ನಲ್ ಕೇಳಿದ್ದಾರೆ.

ಇದರ ಜೊತೆಗೆ ದೇಶ ಭಕ್ತಿಗೂ ಮೋದಿ ಭಕ್ತಿಗೂ ವ್ಯತ್ಯಾಸ ಗೊತ್ತಿರುವವರಿಗೂ ಹಾಗು ತಮ್ಮ ಬುದ್ಧಿಯನ್ನು ಮತ್ತು ಕಾಮನ್ ಸೆನ್ಸನ್ನು ಇತರರಿಗೆ ಒಪ್ಪಿಸದವರಿಗೂ ಇನ್ನು ಕೆಲವು ಪ್ರಶ್ನೆಗಳು ಮೂಡುವುದು ಸಹಜ.

ಅನಾಮಿಕ ಮೂಲದ ಹೇಳಿಕೆಯ ಪ್ರಕಾರ ಭಾರತ ಸೇನೆಯು ಕೂಡಾ ಗಾಲ್ವಾನ್ ಘರ್ಷಣೆ ನಡೆದ PP 14 ಪ್ರದೇಶದಿಂದ 1.8 ಕಿ.ಮೀ ಯಷ್ಟು ಹಿಂದೆ ಸರಿದಿದೆ.

ಇದರ ಅರ್ಥವೇನು?

ಈವರೆಗೆ ಮೋದಿ ಸರ್ಕಾರವು ಗಾಲ್ವಾನ್ ಘರ್ಷಣೆ ನಡೆದ ಪ್ರದೇಶವು ( PP 14 ) ವಿವಾದಾತೀತವಾಗಿ ಭಾರತ ಪ್ರದೇಶವಾಗಿದೆಯೆಂದು, ಚೀನಾ ಭಾರತದ ಸರಹದ್ದಿನೊಳಗೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಅಲ್ಲಿ ಘರ್ಷಣೆಯುಂಟಾಯಿತೆಂದು ಹೇಳಿಕೊಂಡು ಬಂದಿದೆ.

ಹಾಗಿದ್ದಲ್ಲಿ PP 14 ಪ್ರದೇಶದಿಂದ 1.8 ಕಿಮಿ ಭಾರತ ಮತ್ತು ಚೀನಾ ಎರಡು ಹಿಂದೆ ಸರಿದಿದೆ ಎಂದರೆ ಭಾರತವು ಕೂಡಾ ವಿವಾದೀತವಾಗಿ ತನ್ನ ಸುಪರ್ದಿನಲ್ಲಿದ್ದ ಪ್ರದೇಶವನ್ನು ಬಿಟ್ಟು ಹಿಂದೆ ಸರಿದಿದೆ ಎಂದಾಗಲಿಲ್ಲವೇ?

ಹಾಗಿದ್ದ ಮೇಲೆ ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

ಗಾಲ್ವಾನ್ ಪ್ರದೇಶಕ್ಕಿಂತ ಇನ್ನು ತೀವ್ರವಾದ ಗಡಿ ವಿವಾದವಿರುವ ಪ್ರದೇಶ ಪಾಂಗಾಂಗ್ ಸರೋವರ ಪ್ರದೇಶ.

ಅಲ್ಲಿ ಸರೋವರದ ಪೂರ್ವಭಾಗದ ಚೀನಾದ ಕಡೆ ಇರುವ ಫಿಂಗರ್ 8 ಎಂಬಲ್ಲಿಯವರೆಗೆ ಭಾರತ ತನ್ನ ಪ್ರದೇಶವೆಂದು ವಾದಿಸಿದರೆ, ಸರೋವರದ ಪಶ್ಚಿಮಕ್ಕೆ ಭಾರತದ ಕಡೆ ಇರುವ ಫಿಂಗರ್ 4 ರ ವರೆಗೆ ತನ್ನ ಪ್ರದೇಶವೆಂದು ಚೀನಾ ವಾದಿಸುತ್ತದೆ.

ಫಿಂಗರ್ 4 ಹಾಗೂ ಫಿಂಗರ್ 8 ರ ನಡುವೆ 8 ಕಿಮಿ ವ್ಯಾಪ್ತಿಯ ಪ್ರದೇಶವಿದ್ದು ಚೀನಾವು ಫಿಂಗರ್ 4 ರಿಂದ ಒಂದು ಕಿಮಿ ದೂರ ಮಾತ್ರ ಹಿಂದೆ ಸರಿದಿದೆ ಎಂದು ಭಾರತೀಯ ‌ಸೇನಾ ಮೂಲವು ತಿಳಿಸುತ್ತದೆ .

ಅಂದರೆ ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ…..

ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?

ಒಂದು ದೀರ್ಘಕಾಲೀನ ಶಾಂತಿ ಮಾತುಕತೆಯ ಭಾಗವಾಗಿ ಈ ಬಗೆಯ ತಾತ್ಕಾಲಿಕ ಹಿಂದೆ ಸರಿಕೆಯಲ್ಲಿ ತಪ್ಪಿಲ್ಲ.

ಅದರಲ್ಲೂ ಭಾರತ ಮತ್ತು ಚೀನಾ ನಡುವೆ ಗಡಿ ಭಾಗಗಳು ನಿಖರವಾಗಿ ಗುರುತುಪಡಿಸಿಲ್ಲವಾದ್ದರಿಂದ ಇಂಥಾ ರಾಜತಾಂತ್ರಿಕ-ಸೈನಿಕ ಕ್ರಮಗಳಿಗೆ ಸರ್ಕಾರ ಮುಂದಾಗಬೇಕಾಗುತ್ತದೆ.

ಆದರೆ ಸತ್ಯಕ್ಕೆ ತದ್ವಿರುದ್ಧವಾದ ಹೇಳಿಕೆಯನ್ನು ಕೊಟ್ಟು ಜನರಲ್ಲಿ ರಾಜಕೀಯ ದುರುದ್ದೇಶಗಳಿಗೆ ಹುಸಿ ಗೆಲುವಿನ ಉನ್ಮಾದವನ್ನು ಸೃಷ್ಟಿಸುವುದು ತಪ್ಪು. ಅಷ್ಟೇ…

ಎಲ್ಲಕ್ಕಿಂತ ಹೆಚ್ಚಾಗಿ ಈ ಗಾಲ್ವಾನ್ ಮತ್ತು ಹಿಂದಿನ ದೋಕ್ಲಾಮ್ ಘರ್ಷಣೆಗಳಿಂದ ಮೋದಿ ಸರ್ಕಾರ ಸಾಕಷ್ಟು ಪಾಠಗಳನ್ನು ಕಲಿಯಬೇಕಿದೆ.

ಈ ಭೂಭಾಗದಲ್ಲಿ ಅಮೇರಿಕ ಸಾಮ್ರಾಟನ ಸಾಮಂತನಾಗಿ ಕೆಲಸ ಮಾಡುವುದು ಅಮೇರಿಕಾದ ಹಿತಾಸಕ್ತಿಗಳಿಗೆ ಪೂರಕವೇ ಹೊರತು ಭಾರತದ ಹಿತಾಸಕ್ತಿಗೆ ಮಾರಕವೆಂಬುದನ್ನು ಈಗಲಾದರೂ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಅಲ್ಲವೇ?; ಜಸ್ಟ್ ಆಸ್ಕಿಂಗ್


ಓದಿ: ಅರುಣಾಚಲದ ಮೇಲೆ ಚೀನಾ ಕಣ್ಣು?; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...