Homeಮುಖಪುಟಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

- Advertisement -
- Advertisement -

ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ… ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?


ನಿನ್ನೆಯಿಂದ ಎಲ್ಲಾ ಮಾಧ್ಯಮಗಳು ಗಾಲ್ವಾನ್ ಪ್ರಾಂತ್ಯದಿಂದ ಚೀನಾ ಸೈನಿಕರು ಹಿಂದೆ ಸರಿಯುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳಾದ ಅಜಿತ್ ದೋವಲ್ ಹಾಗು ವಾಂಗ್ ಯೀ ಟೆಲಿಫೋನ್ ಮಾತುಕತೆ ನಡೆಸಿದ ನಂತರ ಈ ಬೆಳವಣಿಗೆಯಾಗಿವೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಎರಡು ಹೆಜ್ಜೆ ಮುಂದಿಟ್ಟಿದ್ದ ಚೀನಾ ಒಂದು ಹೆಜ್ಜೆ ಹಿಂದೆ ಸರಿದರೆ, ಅದು ಹಿನ್ನೆಡೆಯೋ? ಮುನ್ನೆಡೆಯೋ? ಎಂದು ಅವಲೋಕಿಸಬೇಕಾಗಿದೆ.

ಆದರೆ ಎರಡು ದೇಶಗಳ ಸರ್ಕಾರಗಳು ಈವರೆಗೆ ಯಾವ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ. ಬದಲಿಗೆ ಭಾರತೀಯ ಮಾಧ್ಯಮಗಳು ಸೇನೆಯಲ್ಲಿನ ಅನಾಮಿಕ ಸರ್ಕಾರಿ “ಮೂಲಗಳನ್ನು” ಆಧರಿಸಿ ವರದಿ ಮಾಡಿವೆ. ಎಲ್ಲಾ ಮಾಧ್ಯಮಗಳಲ್ಲೂ ಈ ಸುದ್ದಿ ಏಕಕಾಲದಲ್ಲಿ ಪ್ರಕಟವಾಗಿರುವುದು ನೋಡಿದರೆ ಕೇಂದ್ರ ಸರ್ಕಾರ ಮತ್ತು ಸೇನೆಯು ಈ ಮೂಲಗಳಿಗೆ ಅನಾಮಿಕವಾಗಿ ಹೇಳಿಕೆ ನೀಡಲು ಅಧಿಕೃತ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಆದರೆ ಅಧಿಕೃತವಾದ ಹೇಳಿಕೆ ಏಕಿಲ್ಲ ಎಂಬ ಪ್ರಶ್ನೆ ಸಹಜವಾಗಿ ಹುಟ್ಟುತ್ತದೆ.

ಆದ್ದರಿಂದಲೇ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅಜಯ್ ಶುಕ್ಲಾ ಅವರು ಈ ಸುದ್ದಿಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ :

ಈ ಸುದ್ದಿಯು ನಿಜವೇ ಆಗಿದ್ದಲ್ಲಿ ನಾನು
ಅ) ಸರ್ಕಾರದ ಅಧಿಕೃತ ಹೇಳಿಕೆಯನ್ನು ನೋಡಬಯಸುತ್ತೇನೆ. ಅನಾಮಿಕ ಮೂಲದ ಸುದ್ದಿಯನ್ನಲ್ಲ.
ಆ) ಚೀನಿಯರು ಹಿಂದಿರುಗುತ್ತಿರುವುದನ್ನು ಧೃಡಪಡಿಸುವ ಉಪಗ್ರಹ ಚಿತ್ರ ಹಾಗು
ಇ ) ಭಾರತೀಯ ಸೈನಿಕರು ಹಿಂದೆ ಸರಿದಿದ್ದು ಎಲ್ಲಿಗೆ ಎಂಬ ಪ್ರಶ್ನೆಗಳಿಗೆ ಉತ್ತರ ಬಯಸುತ್ತೇನೆ ಎಂದು ಕರ್ನಲ್ ಕೇಳಿದ್ದಾರೆ.

ಇದರ ಜೊತೆಗೆ ದೇಶ ಭಕ್ತಿಗೂ ಮೋದಿ ಭಕ್ತಿಗೂ ವ್ಯತ್ಯಾಸ ಗೊತ್ತಿರುವವರಿಗೂ ಹಾಗು ತಮ್ಮ ಬುದ್ಧಿಯನ್ನು ಮತ್ತು ಕಾಮನ್ ಸೆನ್ಸನ್ನು ಇತರರಿಗೆ ಒಪ್ಪಿಸದವರಿಗೂ ಇನ್ನು ಕೆಲವು ಪ್ರಶ್ನೆಗಳು ಮೂಡುವುದು ಸಹಜ.

ಅನಾಮಿಕ ಮೂಲದ ಹೇಳಿಕೆಯ ಪ್ರಕಾರ ಭಾರತ ಸೇನೆಯು ಕೂಡಾ ಗಾಲ್ವಾನ್ ಘರ್ಷಣೆ ನಡೆದ PP 14 ಪ್ರದೇಶದಿಂದ 1.8 ಕಿ.ಮೀ ಯಷ್ಟು ಹಿಂದೆ ಸರಿದಿದೆ.

ಇದರ ಅರ್ಥವೇನು?

ಈವರೆಗೆ ಮೋದಿ ಸರ್ಕಾರವು ಗಾಲ್ವಾನ್ ಘರ್ಷಣೆ ನಡೆದ ಪ್ರದೇಶವು ( PP 14 ) ವಿವಾದಾತೀತವಾಗಿ ಭಾರತ ಪ್ರದೇಶವಾಗಿದೆಯೆಂದು, ಚೀನಾ ಭಾರತದ ಸರಹದ್ದಿನೊಳಗೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಅಲ್ಲಿ ಘರ್ಷಣೆಯುಂಟಾಯಿತೆಂದು ಹೇಳಿಕೊಂಡು ಬಂದಿದೆ.

ಹಾಗಿದ್ದಲ್ಲಿ PP 14 ಪ್ರದೇಶದಿಂದ 1.8 ಕಿಮಿ ಭಾರತ ಮತ್ತು ಚೀನಾ ಎರಡು ಹಿಂದೆ ಸರಿದಿದೆ ಎಂದರೆ ಭಾರತವು ಕೂಡಾ ವಿವಾದೀತವಾಗಿ ತನ್ನ ಸುಪರ್ದಿನಲ್ಲಿದ್ದ ಪ್ರದೇಶವನ್ನು ಬಿಟ್ಟು ಹಿಂದೆ ಸರಿದಿದೆ ಎಂದಾಗಲಿಲ್ಲವೇ?

ಹಾಗಿದ್ದ ಮೇಲೆ ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

ಗಾಲ್ವಾನ್ ಪ್ರದೇಶಕ್ಕಿಂತ ಇನ್ನು ತೀವ್ರವಾದ ಗಡಿ ವಿವಾದವಿರುವ ಪ್ರದೇಶ ಪಾಂಗಾಂಗ್ ಸರೋವರ ಪ್ರದೇಶ.

ಅಲ್ಲಿ ಸರೋವರದ ಪೂರ್ವಭಾಗದ ಚೀನಾದ ಕಡೆ ಇರುವ ಫಿಂಗರ್ 8 ಎಂಬಲ್ಲಿಯವರೆಗೆ ಭಾರತ ತನ್ನ ಪ್ರದೇಶವೆಂದು ವಾದಿಸಿದರೆ, ಸರೋವರದ ಪಶ್ಚಿಮಕ್ಕೆ ಭಾರತದ ಕಡೆ ಇರುವ ಫಿಂಗರ್ 4 ರ ವರೆಗೆ ತನ್ನ ಪ್ರದೇಶವೆಂದು ಚೀನಾ ವಾದಿಸುತ್ತದೆ.

ಫಿಂಗರ್ 4 ಹಾಗೂ ಫಿಂಗರ್ 8 ರ ನಡುವೆ 8 ಕಿಮಿ ವ್ಯಾಪ್ತಿಯ ಪ್ರದೇಶವಿದ್ದು ಚೀನಾವು ಫಿಂಗರ್ 4 ರಿಂದ ಒಂದು ಕಿಮಿ ದೂರ ಮಾತ್ರ ಹಿಂದೆ ಸರಿದಿದೆ ಎಂದು ಭಾರತೀಯ ‌ಸೇನಾ ಮೂಲವು ತಿಳಿಸುತ್ತದೆ .

ಅಂದರೆ ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ…..

ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?

ಒಂದು ದೀರ್ಘಕಾಲೀನ ಶಾಂತಿ ಮಾತುಕತೆಯ ಭಾಗವಾಗಿ ಈ ಬಗೆಯ ತಾತ್ಕಾಲಿಕ ಹಿಂದೆ ಸರಿಕೆಯಲ್ಲಿ ತಪ್ಪಿಲ್ಲ.

ಅದರಲ್ಲೂ ಭಾರತ ಮತ್ತು ಚೀನಾ ನಡುವೆ ಗಡಿ ಭಾಗಗಳು ನಿಖರವಾಗಿ ಗುರುತುಪಡಿಸಿಲ್ಲವಾದ್ದರಿಂದ ಇಂಥಾ ರಾಜತಾಂತ್ರಿಕ-ಸೈನಿಕ ಕ್ರಮಗಳಿಗೆ ಸರ್ಕಾರ ಮುಂದಾಗಬೇಕಾಗುತ್ತದೆ.

ಆದರೆ ಸತ್ಯಕ್ಕೆ ತದ್ವಿರುದ್ಧವಾದ ಹೇಳಿಕೆಯನ್ನು ಕೊಟ್ಟು ಜನರಲ್ಲಿ ರಾಜಕೀಯ ದುರುದ್ದೇಶಗಳಿಗೆ ಹುಸಿ ಗೆಲುವಿನ ಉನ್ಮಾದವನ್ನು ಸೃಷ್ಟಿಸುವುದು ತಪ್ಪು. ಅಷ್ಟೇ…

ಎಲ್ಲಕ್ಕಿಂತ ಹೆಚ್ಚಾಗಿ ಈ ಗಾಲ್ವಾನ್ ಮತ್ತು ಹಿಂದಿನ ದೋಕ್ಲಾಮ್ ಘರ್ಷಣೆಗಳಿಂದ ಮೋದಿ ಸರ್ಕಾರ ಸಾಕಷ್ಟು ಪಾಠಗಳನ್ನು ಕಲಿಯಬೇಕಿದೆ.

ಈ ಭೂಭಾಗದಲ್ಲಿ ಅಮೇರಿಕ ಸಾಮ್ರಾಟನ ಸಾಮಂತನಾಗಿ ಕೆಲಸ ಮಾಡುವುದು ಅಮೇರಿಕಾದ ಹಿತಾಸಕ್ತಿಗಳಿಗೆ ಪೂರಕವೇ ಹೊರತು ಭಾರತದ ಹಿತಾಸಕ್ತಿಗೆ ಮಾರಕವೆಂಬುದನ್ನು ಈಗಲಾದರೂ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಅಲ್ಲವೇ?; ಜಸ್ಟ್ ಆಸ್ಕಿಂಗ್


ಓದಿ: ಅರುಣಾಚಲದ ಮೇಲೆ ಚೀನಾ ಕಣ್ಣು?; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...