Homeಮುಖಪುಟಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

- Advertisement -
- Advertisement -

ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ… ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?


ನಿನ್ನೆಯಿಂದ ಎಲ್ಲಾ ಮಾಧ್ಯಮಗಳು ಗಾಲ್ವಾನ್ ಪ್ರಾಂತ್ಯದಿಂದ ಚೀನಾ ಸೈನಿಕರು ಹಿಂದೆ ಸರಿಯುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳಾದ ಅಜಿತ್ ದೋವಲ್ ಹಾಗು ವಾಂಗ್ ಯೀ ಟೆಲಿಫೋನ್ ಮಾತುಕತೆ ನಡೆಸಿದ ನಂತರ ಈ ಬೆಳವಣಿಗೆಯಾಗಿವೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಎರಡು ಹೆಜ್ಜೆ ಮುಂದಿಟ್ಟಿದ್ದ ಚೀನಾ ಒಂದು ಹೆಜ್ಜೆ ಹಿಂದೆ ಸರಿದರೆ, ಅದು ಹಿನ್ನೆಡೆಯೋ? ಮುನ್ನೆಡೆಯೋ? ಎಂದು ಅವಲೋಕಿಸಬೇಕಾಗಿದೆ.

ಆದರೆ ಎರಡು ದೇಶಗಳ ಸರ್ಕಾರಗಳು ಈವರೆಗೆ ಯಾವ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ. ಬದಲಿಗೆ ಭಾರತೀಯ ಮಾಧ್ಯಮಗಳು ಸೇನೆಯಲ್ಲಿನ ಅನಾಮಿಕ ಸರ್ಕಾರಿ “ಮೂಲಗಳನ್ನು” ಆಧರಿಸಿ ವರದಿ ಮಾಡಿವೆ. ಎಲ್ಲಾ ಮಾಧ್ಯಮಗಳಲ್ಲೂ ಈ ಸುದ್ದಿ ಏಕಕಾಲದಲ್ಲಿ ಪ್ರಕಟವಾಗಿರುವುದು ನೋಡಿದರೆ ಕೇಂದ್ರ ಸರ್ಕಾರ ಮತ್ತು ಸೇನೆಯು ಈ ಮೂಲಗಳಿಗೆ ಅನಾಮಿಕವಾಗಿ ಹೇಳಿಕೆ ನೀಡಲು ಅಧಿಕೃತ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಆದರೆ ಅಧಿಕೃತವಾದ ಹೇಳಿಕೆ ಏಕಿಲ್ಲ ಎಂಬ ಪ್ರಶ್ನೆ ಸಹಜವಾಗಿ ಹುಟ್ಟುತ್ತದೆ.

ಆದ್ದರಿಂದಲೇ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅಜಯ್ ಶುಕ್ಲಾ ಅವರು ಈ ಸುದ್ದಿಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ :

ಈ ಸುದ್ದಿಯು ನಿಜವೇ ಆಗಿದ್ದಲ್ಲಿ ನಾನು
ಅ) ಸರ್ಕಾರದ ಅಧಿಕೃತ ಹೇಳಿಕೆಯನ್ನು ನೋಡಬಯಸುತ್ತೇನೆ. ಅನಾಮಿಕ ಮೂಲದ ಸುದ್ದಿಯನ್ನಲ್ಲ.
ಆ) ಚೀನಿಯರು ಹಿಂದಿರುಗುತ್ತಿರುವುದನ್ನು ಧೃಡಪಡಿಸುವ ಉಪಗ್ರಹ ಚಿತ್ರ ಹಾಗು
ಇ ) ಭಾರತೀಯ ಸೈನಿಕರು ಹಿಂದೆ ಸರಿದಿದ್ದು ಎಲ್ಲಿಗೆ ಎಂಬ ಪ್ರಶ್ನೆಗಳಿಗೆ ಉತ್ತರ ಬಯಸುತ್ತೇನೆ ಎಂದು ಕರ್ನಲ್ ಕೇಳಿದ್ದಾರೆ.

ಇದರ ಜೊತೆಗೆ ದೇಶ ಭಕ್ತಿಗೂ ಮೋದಿ ಭಕ್ತಿಗೂ ವ್ಯತ್ಯಾಸ ಗೊತ್ತಿರುವವರಿಗೂ ಹಾಗು ತಮ್ಮ ಬುದ್ಧಿಯನ್ನು ಮತ್ತು ಕಾಮನ್ ಸೆನ್ಸನ್ನು ಇತರರಿಗೆ ಒಪ್ಪಿಸದವರಿಗೂ ಇನ್ನು ಕೆಲವು ಪ್ರಶ್ನೆಗಳು ಮೂಡುವುದು ಸಹಜ.

ಅನಾಮಿಕ ಮೂಲದ ಹೇಳಿಕೆಯ ಪ್ರಕಾರ ಭಾರತ ಸೇನೆಯು ಕೂಡಾ ಗಾಲ್ವಾನ್ ಘರ್ಷಣೆ ನಡೆದ PP 14 ಪ್ರದೇಶದಿಂದ 1.8 ಕಿ.ಮೀ ಯಷ್ಟು ಹಿಂದೆ ಸರಿದಿದೆ.

ಇದರ ಅರ್ಥವೇನು?

ಈವರೆಗೆ ಮೋದಿ ಸರ್ಕಾರವು ಗಾಲ್ವಾನ್ ಘರ್ಷಣೆ ನಡೆದ ಪ್ರದೇಶವು ( PP 14 ) ವಿವಾದಾತೀತವಾಗಿ ಭಾರತ ಪ್ರದೇಶವಾಗಿದೆಯೆಂದು, ಚೀನಾ ಭಾರತದ ಸರಹದ್ದಿನೊಳಗೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಅಲ್ಲಿ ಘರ್ಷಣೆಯುಂಟಾಯಿತೆಂದು ಹೇಳಿಕೊಂಡು ಬಂದಿದೆ.

ಹಾಗಿದ್ದಲ್ಲಿ PP 14 ಪ್ರದೇಶದಿಂದ 1.8 ಕಿಮಿ ಭಾರತ ಮತ್ತು ಚೀನಾ ಎರಡು ಹಿಂದೆ ಸರಿದಿದೆ ಎಂದರೆ ಭಾರತವು ಕೂಡಾ ವಿವಾದೀತವಾಗಿ ತನ್ನ ಸುಪರ್ದಿನಲ್ಲಿದ್ದ ಪ್ರದೇಶವನ್ನು ಬಿಟ್ಟು ಹಿಂದೆ ಸರಿದಿದೆ ಎಂದಾಗಲಿಲ್ಲವೇ?

ಹಾಗಿದ್ದ ಮೇಲೆ ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

ಗಾಲ್ವಾನ್ ಪ್ರದೇಶಕ್ಕಿಂತ ಇನ್ನು ತೀವ್ರವಾದ ಗಡಿ ವಿವಾದವಿರುವ ಪ್ರದೇಶ ಪಾಂಗಾಂಗ್ ಸರೋವರ ಪ್ರದೇಶ.

ಅಲ್ಲಿ ಸರೋವರದ ಪೂರ್ವಭಾಗದ ಚೀನಾದ ಕಡೆ ಇರುವ ಫಿಂಗರ್ 8 ಎಂಬಲ್ಲಿಯವರೆಗೆ ಭಾರತ ತನ್ನ ಪ್ರದೇಶವೆಂದು ವಾದಿಸಿದರೆ, ಸರೋವರದ ಪಶ್ಚಿಮಕ್ಕೆ ಭಾರತದ ಕಡೆ ಇರುವ ಫಿಂಗರ್ 4 ರ ವರೆಗೆ ತನ್ನ ಪ್ರದೇಶವೆಂದು ಚೀನಾ ವಾದಿಸುತ್ತದೆ.

ಫಿಂಗರ್ 4 ಹಾಗೂ ಫಿಂಗರ್ 8 ರ ನಡುವೆ 8 ಕಿಮಿ ವ್ಯಾಪ್ತಿಯ ಪ್ರದೇಶವಿದ್ದು ಚೀನಾವು ಫಿಂಗರ್ 4 ರಿಂದ ಒಂದು ಕಿಮಿ ದೂರ ಮಾತ್ರ ಹಿಂದೆ ಸರಿದಿದೆ ಎಂದು ಭಾರತೀಯ ‌ಸೇನಾ ಮೂಲವು ತಿಳಿಸುತ್ತದೆ .

ಅಂದರೆ ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ…..

ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?

ಒಂದು ದೀರ್ಘಕಾಲೀನ ಶಾಂತಿ ಮಾತುಕತೆಯ ಭಾಗವಾಗಿ ಈ ಬಗೆಯ ತಾತ್ಕಾಲಿಕ ಹಿಂದೆ ಸರಿಕೆಯಲ್ಲಿ ತಪ್ಪಿಲ್ಲ.

ಅದರಲ್ಲೂ ಭಾರತ ಮತ್ತು ಚೀನಾ ನಡುವೆ ಗಡಿ ಭಾಗಗಳು ನಿಖರವಾಗಿ ಗುರುತುಪಡಿಸಿಲ್ಲವಾದ್ದರಿಂದ ಇಂಥಾ ರಾಜತಾಂತ್ರಿಕ-ಸೈನಿಕ ಕ್ರಮಗಳಿಗೆ ಸರ್ಕಾರ ಮುಂದಾಗಬೇಕಾಗುತ್ತದೆ.

ಆದರೆ ಸತ್ಯಕ್ಕೆ ತದ್ವಿರುದ್ಧವಾದ ಹೇಳಿಕೆಯನ್ನು ಕೊಟ್ಟು ಜನರಲ್ಲಿ ರಾಜಕೀಯ ದುರುದ್ದೇಶಗಳಿಗೆ ಹುಸಿ ಗೆಲುವಿನ ಉನ್ಮಾದವನ್ನು ಸೃಷ್ಟಿಸುವುದು ತಪ್ಪು. ಅಷ್ಟೇ…

ಎಲ್ಲಕ್ಕಿಂತ ಹೆಚ್ಚಾಗಿ ಈ ಗಾಲ್ವಾನ್ ಮತ್ತು ಹಿಂದಿನ ದೋಕ್ಲಾಮ್ ಘರ್ಷಣೆಗಳಿಂದ ಮೋದಿ ಸರ್ಕಾರ ಸಾಕಷ್ಟು ಪಾಠಗಳನ್ನು ಕಲಿಯಬೇಕಿದೆ.

ಈ ಭೂಭಾಗದಲ್ಲಿ ಅಮೇರಿಕ ಸಾಮ್ರಾಟನ ಸಾಮಂತನಾಗಿ ಕೆಲಸ ಮಾಡುವುದು ಅಮೇರಿಕಾದ ಹಿತಾಸಕ್ತಿಗಳಿಗೆ ಪೂರಕವೇ ಹೊರತು ಭಾರತದ ಹಿತಾಸಕ್ತಿಗೆ ಮಾರಕವೆಂಬುದನ್ನು ಈಗಲಾದರೂ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಅಲ್ಲವೇ?; ಜಸ್ಟ್ ಆಸ್ಕಿಂಗ್


ಓದಿ: ಅರುಣಾಚಲದ ಮೇಲೆ ಚೀನಾ ಕಣ್ಣು?; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...