Homeಮುಖಪುಟಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

- Advertisement -
- Advertisement -

ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ… ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?


ನಿನ್ನೆಯಿಂದ ಎಲ್ಲಾ ಮಾಧ್ಯಮಗಳು ಗಾಲ್ವಾನ್ ಪ್ರಾಂತ್ಯದಿಂದ ಚೀನಾ ಸೈನಿಕರು ಹಿಂದೆ ಸರಿಯುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳಾದ ಅಜಿತ್ ದೋವಲ್ ಹಾಗು ವಾಂಗ್ ಯೀ ಟೆಲಿಫೋನ್ ಮಾತುಕತೆ ನಡೆಸಿದ ನಂತರ ಈ ಬೆಳವಣಿಗೆಯಾಗಿವೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಎರಡು ಹೆಜ್ಜೆ ಮುಂದಿಟ್ಟಿದ್ದ ಚೀನಾ ಒಂದು ಹೆಜ್ಜೆ ಹಿಂದೆ ಸರಿದರೆ, ಅದು ಹಿನ್ನೆಡೆಯೋ? ಮುನ್ನೆಡೆಯೋ? ಎಂದು ಅವಲೋಕಿಸಬೇಕಾಗಿದೆ.

ಆದರೆ ಎರಡು ದೇಶಗಳ ಸರ್ಕಾರಗಳು ಈವರೆಗೆ ಯಾವ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ. ಬದಲಿಗೆ ಭಾರತೀಯ ಮಾಧ್ಯಮಗಳು ಸೇನೆಯಲ್ಲಿನ ಅನಾಮಿಕ ಸರ್ಕಾರಿ “ಮೂಲಗಳನ್ನು” ಆಧರಿಸಿ ವರದಿ ಮಾಡಿವೆ. ಎಲ್ಲಾ ಮಾಧ್ಯಮಗಳಲ್ಲೂ ಈ ಸುದ್ದಿ ಏಕಕಾಲದಲ್ಲಿ ಪ್ರಕಟವಾಗಿರುವುದು ನೋಡಿದರೆ ಕೇಂದ್ರ ಸರ್ಕಾರ ಮತ್ತು ಸೇನೆಯು ಈ ಮೂಲಗಳಿಗೆ ಅನಾಮಿಕವಾಗಿ ಹೇಳಿಕೆ ನೀಡಲು ಅಧಿಕೃತ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಆದರೆ ಅಧಿಕೃತವಾದ ಹೇಳಿಕೆ ಏಕಿಲ್ಲ ಎಂಬ ಪ್ರಶ್ನೆ ಸಹಜವಾಗಿ ಹುಟ್ಟುತ್ತದೆ.

ಆದ್ದರಿಂದಲೇ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅಜಯ್ ಶುಕ್ಲಾ ಅವರು ಈ ಸುದ್ದಿಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ :

ಈ ಸುದ್ದಿಯು ನಿಜವೇ ಆಗಿದ್ದಲ್ಲಿ ನಾನು
ಅ) ಸರ್ಕಾರದ ಅಧಿಕೃತ ಹೇಳಿಕೆಯನ್ನು ನೋಡಬಯಸುತ್ತೇನೆ. ಅನಾಮಿಕ ಮೂಲದ ಸುದ್ದಿಯನ್ನಲ್ಲ.
ಆ) ಚೀನಿಯರು ಹಿಂದಿರುಗುತ್ತಿರುವುದನ್ನು ಧೃಡಪಡಿಸುವ ಉಪಗ್ರಹ ಚಿತ್ರ ಹಾಗು
ಇ ) ಭಾರತೀಯ ಸೈನಿಕರು ಹಿಂದೆ ಸರಿದಿದ್ದು ಎಲ್ಲಿಗೆ ಎಂಬ ಪ್ರಶ್ನೆಗಳಿಗೆ ಉತ್ತರ ಬಯಸುತ್ತೇನೆ ಎಂದು ಕರ್ನಲ್ ಕೇಳಿದ್ದಾರೆ.

ಇದರ ಜೊತೆಗೆ ದೇಶ ಭಕ್ತಿಗೂ ಮೋದಿ ಭಕ್ತಿಗೂ ವ್ಯತ್ಯಾಸ ಗೊತ್ತಿರುವವರಿಗೂ ಹಾಗು ತಮ್ಮ ಬುದ್ಧಿಯನ್ನು ಮತ್ತು ಕಾಮನ್ ಸೆನ್ಸನ್ನು ಇತರರಿಗೆ ಒಪ್ಪಿಸದವರಿಗೂ ಇನ್ನು ಕೆಲವು ಪ್ರಶ್ನೆಗಳು ಮೂಡುವುದು ಸಹಜ.

ಅನಾಮಿಕ ಮೂಲದ ಹೇಳಿಕೆಯ ಪ್ರಕಾರ ಭಾರತ ಸೇನೆಯು ಕೂಡಾ ಗಾಲ್ವಾನ್ ಘರ್ಷಣೆ ನಡೆದ PP 14 ಪ್ರದೇಶದಿಂದ 1.8 ಕಿ.ಮೀ ಯಷ್ಟು ಹಿಂದೆ ಸರಿದಿದೆ.

ಇದರ ಅರ್ಥವೇನು?

ಈವರೆಗೆ ಮೋದಿ ಸರ್ಕಾರವು ಗಾಲ್ವಾನ್ ಘರ್ಷಣೆ ನಡೆದ ಪ್ರದೇಶವು ( PP 14 ) ವಿವಾದಾತೀತವಾಗಿ ಭಾರತ ಪ್ರದೇಶವಾಗಿದೆಯೆಂದು, ಚೀನಾ ಭಾರತದ ಸರಹದ್ದಿನೊಳಗೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಅಲ್ಲಿ ಘರ್ಷಣೆಯುಂಟಾಯಿತೆಂದು ಹೇಳಿಕೊಂಡು ಬಂದಿದೆ.

ಹಾಗಿದ್ದಲ್ಲಿ PP 14 ಪ್ರದೇಶದಿಂದ 1.8 ಕಿಮಿ ಭಾರತ ಮತ್ತು ಚೀನಾ ಎರಡು ಹಿಂದೆ ಸರಿದಿದೆ ಎಂದರೆ ಭಾರತವು ಕೂಡಾ ವಿವಾದೀತವಾಗಿ ತನ್ನ ಸುಪರ್ದಿನಲ್ಲಿದ್ದ ಪ್ರದೇಶವನ್ನು ಬಿಟ್ಟು ಹಿಂದೆ ಸರಿದಿದೆ ಎಂದಾಗಲಿಲ್ಲವೇ?

ಹಾಗಿದ್ದ ಮೇಲೆ ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

ಗಾಲ್ವಾನ್ ಪ್ರದೇಶಕ್ಕಿಂತ ಇನ್ನು ತೀವ್ರವಾದ ಗಡಿ ವಿವಾದವಿರುವ ಪ್ರದೇಶ ಪಾಂಗಾಂಗ್ ಸರೋವರ ಪ್ರದೇಶ.

ಅಲ್ಲಿ ಸರೋವರದ ಪೂರ್ವಭಾಗದ ಚೀನಾದ ಕಡೆ ಇರುವ ಫಿಂಗರ್ 8 ಎಂಬಲ್ಲಿಯವರೆಗೆ ಭಾರತ ತನ್ನ ಪ್ರದೇಶವೆಂದು ವಾದಿಸಿದರೆ, ಸರೋವರದ ಪಶ್ಚಿಮಕ್ಕೆ ಭಾರತದ ಕಡೆ ಇರುವ ಫಿಂಗರ್ 4 ರ ವರೆಗೆ ತನ್ನ ಪ್ರದೇಶವೆಂದು ಚೀನಾ ವಾದಿಸುತ್ತದೆ.

ಫಿಂಗರ್ 4 ಹಾಗೂ ಫಿಂಗರ್ 8 ರ ನಡುವೆ 8 ಕಿಮಿ ವ್ಯಾಪ್ತಿಯ ಪ್ರದೇಶವಿದ್ದು ಚೀನಾವು ಫಿಂಗರ್ 4 ರಿಂದ ಒಂದು ಕಿಮಿ ದೂರ ಮಾತ್ರ ಹಿಂದೆ ಸರಿದಿದೆ ಎಂದು ಭಾರತೀಯ ‌ಸೇನಾ ಮೂಲವು ತಿಳಿಸುತ್ತದೆ .

ಅಂದರೆ ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ…..

ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?

ಒಂದು ದೀರ್ಘಕಾಲೀನ ಶಾಂತಿ ಮಾತುಕತೆಯ ಭಾಗವಾಗಿ ಈ ಬಗೆಯ ತಾತ್ಕಾಲಿಕ ಹಿಂದೆ ಸರಿಕೆಯಲ್ಲಿ ತಪ್ಪಿಲ್ಲ.

ಅದರಲ್ಲೂ ಭಾರತ ಮತ್ತು ಚೀನಾ ನಡುವೆ ಗಡಿ ಭಾಗಗಳು ನಿಖರವಾಗಿ ಗುರುತುಪಡಿಸಿಲ್ಲವಾದ್ದರಿಂದ ಇಂಥಾ ರಾಜತಾಂತ್ರಿಕ-ಸೈನಿಕ ಕ್ರಮಗಳಿಗೆ ಸರ್ಕಾರ ಮುಂದಾಗಬೇಕಾಗುತ್ತದೆ.

ಆದರೆ ಸತ್ಯಕ್ಕೆ ತದ್ವಿರುದ್ಧವಾದ ಹೇಳಿಕೆಯನ್ನು ಕೊಟ್ಟು ಜನರಲ್ಲಿ ರಾಜಕೀಯ ದುರುದ್ದೇಶಗಳಿಗೆ ಹುಸಿ ಗೆಲುವಿನ ಉನ್ಮಾದವನ್ನು ಸೃಷ್ಟಿಸುವುದು ತಪ್ಪು. ಅಷ್ಟೇ…

ಎಲ್ಲಕ್ಕಿಂತ ಹೆಚ್ಚಾಗಿ ಈ ಗಾಲ್ವಾನ್ ಮತ್ತು ಹಿಂದಿನ ದೋಕ್ಲಾಮ್ ಘರ್ಷಣೆಗಳಿಂದ ಮೋದಿ ಸರ್ಕಾರ ಸಾಕಷ್ಟು ಪಾಠಗಳನ್ನು ಕಲಿಯಬೇಕಿದೆ.

ಈ ಭೂಭಾಗದಲ್ಲಿ ಅಮೇರಿಕ ಸಾಮ್ರಾಟನ ಸಾಮಂತನಾಗಿ ಕೆಲಸ ಮಾಡುವುದು ಅಮೇರಿಕಾದ ಹಿತಾಸಕ್ತಿಗಳಿಗೆ ಪೂರಕವೇ ಹೊರತು ಭಾರತದ ಹಿತಾಸಕ್ತಿಗೆ ಮಾರಕವೆಂಬುದನ್ನು ಈಗಲಾದರೂ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಅಲ್ಲವೇ?; ಜಸ್ಟ್ ಆಸ್ಕಿಂಗ್


ಓದಿ: ಅರುಣಾಚಲದ ಮೇಲೆ ಚೀನಾ ಕಣ್ಣು?; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...