Homeಅಂತರಾಷ್ಟ್ರೀಯಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ, "ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲವಾಗಿದ್ದಾರೆ” ಎಂದು ಟ್ರಂಪ್ ಹೇಳಿದರು.

- Advertisement -
- Advertisement -

ಭಾರತ-ಚೀನಾ ಗಡಿ ಸಮಸ್ಯೆಯು ತುಂಬಾ ಕೆಟ್ಟ ಪರಿಸ್ಥಿತಿಯಿಂದ ಕೂಡಿದೆ. ಹಾಗಾಗಿ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸಕ್ತಿ ವ್ಯಕ್ತಪಡಿಸಿದ್ದಾರೆ.

“ಗಡಿ ಸಮಸ್ಯೆಯ ಬಗ್ಗೆ ಭಾರತ ಮತ್ತು ಚೀನಾ ದೇಶಗಳೊಂದಿಗೆ ಮಾತನಾಡುತ್ತಿದ್ದೇವೆ. ನಾವು ಚೀನಾ ಮತ್ತು ಭಾರತದ ಸಮಸ್ಯೆಗೆ ಸಂಬಂಧಿಸಿದಂತೆ ಸಹಾಯ ಮಾಡಲು ಸಿದ್ಧರಾಗಿದ್ದೇವೆ” ಎಂದು ಟ್ರಂಪ್ ಶುಕ್ರವಾರ (ಸೆಪ್ಟೆಂಬರ್ 4) ಸಂಜೆ ಶ್ವೇತಭವನದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಎಂದು ದಿ ಫೆಡರಲ್ ವರದಿ ಮಾಡಿದೆ.

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲಗೊಂಡಿದ್ದಾರೆ” ಎಂದು ಟ್ರಂಪ್ ಹೇಳಿದರು.

ಇದನ್ನೂ ಓದಿ: IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ಭಾರತ ಮತ್ತು ಇತರ ದೇಶಗಳ ನಡುವಿನ ದ್ವಿಪಕ್ಷೀಯ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಮುಂದಾಗಿರುವುದು ಇದೇ ಮೊದಲಲ್ಲ. ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದಲ್ಲಿ ಮಧ್ಯಪ್ರವೇಶಿಸಲು ಅಮೇರಿಕಾ ಅಧ್ಯಕ್ಷರು ಏಪ್ರಿಲ್‌ನಲ್ಲಿಯೇ ಪ್ರಸ್ತಾಪಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಉಲ್ಬಣಗೊಂಡ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ನಿವಾರಿಸಲು ಮಧ್ಯಸ್ಥಿಕೆ ವಹಿಸಲು ಮತ್ತು ಸಹಾಯ ಮಾಡಲು ಟ್ರಂಪ್ ಹಲವು ಬಾರಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದೊಂದಿಗಿನ ವಿಷಯವು ಆಂತರಿಕ ವಿಷಯ ಎಂದು ಭಾರತವು ಪ್ರತಿ ಬಾರಿಯೂ ನಯವಾಗಿ ನಿರಾಕರಿಸಿತ್ತು.

ನಿನ್ನೆಯ ವರದಿಯಂತೆ, ಪೂರ್ವ ಲಡಾಖ್‍‌ ಸಮೀಪದ ದಕ್ಷಿಣ ಪ್ಯಾಂಗ್ಯೊಂಗ್ ಪ್ರದೇಶದಲ್ಲಿ ಚೀನಿ ಯುದ್ಧ ಟ್ಯಾಂಕ್‍ಗಳು ಹಾಗೂ ಸೇನಾ ಪಡೆಗಳು ದೊಡ್ಡ ಮಟ್ಟದಲ್ಲಿ ಜಮಾವಣೆಗೊಂಡಿದ್ದು, ಪಿರಂಗಿದಳವು ವಾಸ್ತವಿಕ ನಿಯಂತ್ರಣ ರೇಖೆಯಿಂದ 20 ಕಿಲೋ ಮೀಟರ್‌‌ ದೂರದಲ್ಲಿದೆ ಎಂದು ತಿಳಿದುಬಂದಿತ್ತು. ಆಗಸ್ಟ್ 30 ರಂದು ಚೀನಾ ಅತಿಕ್ರಮಣ ಯತ್ನವನ್ನು ಹಿಮ್ಮೆಟ್ಟಿಸಿ ಈ ಪ್ರದೇಶದ ಕೆಲವೊಂದು ಪ್ರಮುಖ ಸ್ಥಳಗಳ ಮೇಲೆ ಭಾರತ ನಿಯಂತ್ರಣ ಸಾಧಿಸಿದ ನಂತರದ ಬೆಳವಣಿಗೆ ಇದಾಗಿದೆ.


ಇದನ್ನೂ ಓದಿ: ಭಾರತ-ಚೀನಾ: ಗಡಿಯಲ್ಲಿ ಜಮಾವಣೆಗೊಂಡ ಚೀನಿ ಯುದ್ಧ ಟ್ಯಾಂಕ್‌‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....