Homeಅಂತರಾಷ್ಟ್ರೀಯಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ, "ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲವಾಗಿದ್ದಾರೆ” ಎಂದು ಟ್ರಂಪ್ ಹೇಳಿದರು.

- Advertisement -
- Advertisement -

ಭಾರತ-ಚೀನಾ ಗಡಿ ಸಮಸ್ಯೆಯು ತುಂಬಾ ಕೆಟ್ಟ ಪರಿಸ್ಥಿತಿಯಿಂದ ಕೂಡಿದೆ. ಹಾಗಾಗಿ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸಕ್ತಿ ವ್ಯಕ್ತಪಡಿಸಿದ್ದಾರೆ.

“ಗಡಿ ಸಮಸ್ಯೆಯ ಬಗ್ಗೆ ಭಾರತ ಮತ್ತು ಚೀನಾ ದೇಶಗಳೊಂದಿಗೆ ಮಾತನಾಡುತ್ತಿದ್ದೇವೆ. ನಾವು ಚೀನಾ ಮತ್ತು ಭಾರತದ ಸಮಸ್ಯೆಗೆ ಸಂಬಂಧಿಸಿದಂತೆ ಸಹಾಯ ಮಾಡಲು ಸಿದ್ಧರಾಗಿದ್ದೇವೆ” ಎಂದು ಟ್ರಂಪ್ ಶುಕ್ರವಾರ (ಸೆಪ್ಟೆಂಬರ್ 4) ಸಂಜೆ ಶ್ವೇತಭವನದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಎಂದು ದಿ ಫೆಡರಲ್ ವರದಿ ಮಾಡಿದೆ.

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲಗೊಂಡಿದ್ದಾರೆ” ಎಂದು ಟ್ರಂಪ್ ಹೇಳಿದರು.

ಇದನ್ನೂ ಓದಿ: IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ಭಾರತ ಮತ್ತು ಇತರ ದೇಶಗಳ ನಡುವಿನ ದ್ವಿಪಕ್ಷೀಯ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಮುಂದಾಗಿರುವುದು ಇದೇ ಮೊದಲಲ್ಲ. ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದಲ್ಲಿ ಮಧ್ಯಪ್ರವೇಶಿಸಲು ಅಮೇರಿಕಾ ಅಧ್ಯಕ್ಷರು ಏಪ್ರಿಲ್‌ನಲ್ಲಿಯೇ ಪ್ರಸ್ತಾಪಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಉಲ್ಬಣಗೊಂಡ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ನಿವಾರಿಸಲು ಮಧ್ಯಸ್ಥಿಕೆ ವಹಿಸಲು ಮತ್ತು ಸಹಾಯ ಮಾಡಲು ಟ್ರಂಪ್ ಹಲವು ಬಾರಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದೊಂದಿಗಿನ ವಿಷಯವು ಆಂತರಿಕ ವಿಷಯ ಎಂದು ಭಾರತವು ಪ್ರತಿ ಬಾರಿಯೂ ನಯವಾಗಿ ನಿರಾಕರಿಸಿತ್ತು.

ನಿನ್ನೆಯ ವರದಿಯಂತೆ, ಪೂರ್ವ ಲಡಾಖ್‍‌ ಸಮೀಪದ ದಕ್ಷಿಣ ಪ್ಯಾಂಗ್ಯೊಂಗ್ ಪ್ರದೇಶದಲ್ಲಿ ಚೀನಿ ಯುದ್ಧ ಟ್ಯಾಂಕ್‍ಗಳು ಹಾಗೂ ಸೇನಾ ಪಡೆಗಳು ದೊಡ್ಡ ಮಟ್ಟದಲ್ಲಿ ಜಮಾವಣೆಗೊಂಡಿದ್ದು, ಪಿರಂಗಿದಳವು ವಾಸ್ತವಿಕ ನಿಯಂತ್ರಣ ರೇಖೆಯಿಂದ 20 ಕಿಲೋ ಮೀಟರ್‌‌ ದೂರದಲ್ಲಿದೆ ಎಂದು ತಿಳಿದುಬಂದಿತ್ತು. ಆಗಸ್ಟ್ 30 ರಂದು ಚೀನಾ ಅತಿಕ್ರಮಣ ಯತ್ನವನ್ನು ಹಿಮ್ಮೆಟ್ಟಿಸಿ ಈ ಪ್ರದೇಶದ ಕೆಲವೊಂದು ಪ್ರಮುಖ ಸ್ಥಳಗಳ ಮೇಲೆ ಭಾರತ ನಿಯಂತ್ರಣ ಸಾಧಿಸಿದ ನಂತರದ ಬೆಳವಣಿಗೆ ಇದಾಗಿದೆ.


ಇದನ್ನೂ ಓದಿ: ಭಾರತ-ಚೀನಾ: ಗಡಿಯಲ್ಲಿ ಜಮಾವಣೆಗೊಂಡ ಚೀನಿ ಯುದ್ಧ ಟ್ಯಾಂಕ್‌‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...