Homeಅಂತರಾಷ್ಟ್ರೀಯಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ, "ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲವಾಗಿದ್ದಾರೆ” ಎಂದು ಟ್ರಂಪ್ ಹೇಳಿದರು.

- Advertisement -
- Advertisement -

ಭಾರತ-ಚೀನಾ ಗಡಿ ಸಮಸ್ಯೆಯು ತುಂಬಾ ಕೆಟ್ಟ ಪರಿಸ್ಥಿತಿಯಿಂದ ಕೂಡಿದೆ. ಹಾಗಾಗಿ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸಕ್ತಿ ವ್ಯಕ್ತಪಡಿಸಿದ್ದಾರೆ.

“ಗಡಿ ಸಮಸ್ಯೆಯ ಬಗ್ಗೆ ಭಾರತ ಮತ್ತು ಚೀನಾ ದೇಶಗಳೊಂದಿಗೆ ಮಾತನಾಡುತ್ತಿದ್ದೇವೆ. ನಾವು ಚೀನಾ ಮತ್ತು ಭಾರತದ ಸಮಸ್ಯೆಗೆ ಸಂಬಂಧಿಸಿದಂತೆ ಸಹಾಯ ಮಾಡಲು ಸಿದ್ಧರಾಗಿದ್ದೇವೆ” ಎಂದು ಟ್ರಂಪ್ ಶುಕ್ರವಾರ (ಸೆಪ್ಟೆಂಬರ್ 4) ಸಂಜೆ ಶ್ವೇತಭವನದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಎಂದು ದಿ ಫೆಡರಲ್ ವರದಿ ಮಾಡಿದೆ.

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲಗೊಂಡಿದ್ದಾರೆ” ಎಂದು ಟ್ರಂಪ್ ಹೇಳಿದರು.

ಇದನ್ನೂ ಓದಿ: IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ಭಾರತ ಮತ್ತು ಇತರ ದೇಶಗಳ ನಡುವಿನ ದ್ವಿಪಕ್ಷೀಯ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಮುಂದಾಗಿರುವುದು ಇದೇ ಮೊದಲಲ್ಲ. ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದಲ್ಲಿ ಮಧ್ಯಪ್ರವೇಶಿಸಲು ಅಮೇರಿಕಾ ಅಧ್ಯಕ್ಷರು ಏಪ್ರಿಲ್‌ನಲ್ಲಿಯೇ ಪ್ರಸ್ತಾಪಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಉಲ್ಬಣಗೊಂಡ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ನಿವಾರಿಸಲು ಮಧ್ಯಸ್ಥಿಕೆ ವಹಿಸಲು ಮತ್ತು ಸಹಾಯ ಮಾಡಲು ಟ್ರಂಪ್ ಹಲವು ಬಾರಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದೊಂದಿಗಿನ ವಿಷಯವು ಆಂತರಿಕ ವಿಷಯ ಎಂದು ಭಾರತವು ಪ್ರತಿ ಬಾರಿಯೂ ನಯವಾಗಿ ನಿರಾಕರಿಸಿತ್ತು.

ನಿನ್ನೆಯ ವರದಿಯಂತೆ, ಪೂರ್ವ ಲಡಾಖ್‍‌ ಸಮೀಪದ ದಕ್ಷಿಣ ಪ್ಯಾಂಗ್ಯೊಂಗ್ ಪ್ರದೇಶದಲ್ಲಿ ಚೀನಿ ಯುದ್ಧ ಟ್ಯಾಂಕ್‍ಗಳು ಹಾಗೂ ಸೇನಾ ಪಡೆಗಳು ದೊಡ್ಡ ಮಟ್ಟದಲ್ಲಿ ಜಮಾವಣೆಗೊಂಡಿದ್ದು, ಪಿರಂಗಿದಳವು ವಾಸ್ತವಿಕ ನಿಯಂತ್ರಣ ರೇಖೆಯಿಂದ 20 ಕಿಲೋ ಮೀಟರ್‌‌ ದೂರದಲ್ಲಿದೆ ಎಂದು ತಿಳಿದುಬಂದಿತ್ತು. ಆಗಸ್ಟ್ 30 ರಂದು ಚೀನಾ ಅತಿಕ್ರಮಣ ಯತ್ನವನ್ನು ಹಿಮ್ಮೆಟ್ಟಿಸಿ ಈ ಪ್ರದೇಶದ ಕೆಲವೊಂದು ಪ್ರಮುಖ ಸ್ಥಳಗಳ ಮೇಲೆ ಭಾರತ ನಿಯಂತ್ರಣ ಸಾಧಿಸಿದ ನಂತರದ ಬೆಳವಣಿಗೆ ಇದಾಗಿದೆ.


ಇದನ್ನೂ ಓದಿ: ಭಾರತ-ಚೀನಾ: ಗಡಿಯಲ್ಲಿ ಜಮಾವಣೆಗೊಂಡ ಚೀನಿ ಯುದ್ಧ ಟ್ಯಾಂಕ್‌‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...