Homeಅಂತರಾಷ್ಟ್ರೀಯಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ-ಭಾರತ ಗಡಿ ಸಮಸ್ಯೆ: ಮಧ್ಯಸ್ಥಿಕೆ ವಹಿಸುವ ಆಶಯ ವ್ಯಕ್ತಪಡಿಸಿದ ಟ್ರಂಪ್!

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ, "ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲವಾಗಿದ್ದಾರೆ” ಎಂದು ಟ್ರಂಪ್ ಹೇಳಿದರು.

- Advertisement -
- Advertisement -

ಭಾರತ-ಚೀನಾ ಗಡಿ ಸಮಸ್ಯೆಯು ತುಂಬಾ ಕೆಟ್ಟ ಪರಿಸ್ಥಿತಿಯಿಂದ ಕೂಡಿದೆ. ಹಾಗಾಗಿ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸಕ್ತಿ ವ್ಯಕ್ತಪಡಿಸಿದ್ದಾರೆ.

“ಗಡಿ ಸಮಸ್ಯೆಯ ಬಗ್ಗೆ ಭಾರತ ಮತ್ತು ಚೀನಾ ದೇಶಗಳೊಂದಿಗೆ ಮಾತನಾಡುತ್ತಿದ್ದೇವೆ. ನಾವು ಚೀನಾ ಮತ್ತು ಭಾರತದ ಸಮಸ್ಯೆಗೆ ಸಂಬಂಧಿಸಿದಂತೆ ಸಹಾಯ ಮಾಡಲು ಸಿದ್ಧರಾಗಿದ್ದೇವೆ” ಎಂದು ಟ್ರಂಪ್ ಶುಕ್ರವಾರ (ಸೆಪ್ಟೆಂಬರ್ 4) ಸಂಜೆ ಶ್ವೇತಭವನದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಎಂದು ದಿ ಫೆಡರಲ್ ವರದಿ ಮಾಡಿದೆ.

ಚೀನಾ ಭಾರತವನ್ನು ಬೆದರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅದು ನಿಜವಲ್ಲ. ಆದರೆ ಚೀನಾ ಖಂಡಿತವಾಗಿಯೂ ಅದರತ್ತ ಸಾಗುತ್ತಿದೆ. ಬಹಳಷ್ಟು ಜನರು ತಿಳಿದುಕೊಂಡಿರುವುದಕ್ಕಿಂತ ಅವರು ಹೆಚ್ಚು ಬಲಗೊಂಡಿದ್ದಾರೆ” ಎಂದು ಟ್ರಂಪ್ ಹೇಳಿದರು.

ಇದನ್ನೂ ಓದಿ: IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ಭಾರತ ಮತ್ತು ಇತರ ದೇಶಗಳ ನಡುವಿನ ದ್ವಿಪಕ್ಷೀಯ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಮುಂದಾಗಿರುವುದು ಇದೇ ಮೊದಲಲ್ಲ. ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದಲ್ಲಿ ಮಧ್ಯಪ್ರವೇಶಿಸಲು ಅಮೇರಿಕಾ ಅಧ್ಯಕ್ಷರು ಏಪ್ರಿಲ್‌ನಲ್ಲಿಯೇ ಪ್ರಸ್ತಾಪಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಉಲ್ಬಣಗೊಂಡ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ನಿವಾರಿಸಲು ಮಧ್ಯಸ್ಥಿಕೆ ವಹಿಸಲು ಮತ್ತು ಸಹಾಯ ಮಾಡಲು ಟ್ರಂಪ್ ಹಲವು ಬಾರಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದೊಂದಿಗಿನ ವಿಷಯವು ಆಂತರಿಕ ವಿಷಯ ಎಂದು ಭಾರತವು ಪ್ರತಿ ಬಾರಿಯೂ ನಯವಾಗಿ ನಿರಾಕರಿಸಿತ್ತು.

ನಿನ್ನೆಯ ವರದಿಯಂತೆ, ಪೂರ್ವ ಲಡಾಖ್‍‌ ಸಮೀಪದ ದಕ್ಷಿಣ ಪ್ಯಾಂಗ್ಯೊಂಗ್ ಪ್ರದೇಶದಲ್ಲಿ ಚೀನಿ ಯುದ್ಧ ಟ್ಯಾಂಕ್‍ಗಳು ಹಾಗೂ ಸೇನಾ ಪಡೆಗಳು ದೊಡ್ಡ ಮಟ್ಟದಲ್ಲಿ ಜಮಾವಣೆಗೊಂಡಿದ್ದು, ಪಿರಂಗಿದಳವು ವಾಸ್ತವಿಕ ನಿಯಂತ್ರಣ ರೇಖೆಯಿಂದ 20 ಕಿಲೋ ಮೀಟರ್‌‌ ದೂರದಲ್ಲಿದೆ ಎಂದು ತಿಳಿದುಬಂದಿತ್ತು. ಆಗಸ್ಟ್ 30 ರಂದು ಚೀನಾ ಅತಿಕ್ರಮಣ ಯತ್ನವನ್ನು ಹಿಮ್ಮೆಟ್ಟಿಸಿ ಈ ಪ್ರದೇಶದ ಕೆಲವೊಂದು ಪ್ರಮುಖ ಸ್ಥಳಗಳ ಮೇಲೆ ಭಾರತ ನಿಯಂತ್ರಣ ಸಾಧಿಸಿದ ನಂತರದ ಬೆಳವಣಿಗೆ ಇದಾಗಿದೆ.


ಇದನ್ನೂ ಓದಿ: ಭಾರತ-ಚೀನಾ: ಗಡಿಯಲ್ಲಿ ಜಮಾವಣೆಗೊಂಡ ಚೀನಿ ಯುದ್ಧ ಟ್ಯಾಂಕ್‌‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...