Homeಮುಖಪುಟ'ಭಾರತ ಮಾತೆ' ರಕ್ಷಿಸಲು ಮಾತನಾಡುವುದನ್ನು ಬಿಟ್ಟು ಬೇರೆ ಏನು ಮಾಡಿದ್ದೀರಿ?; ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ

‘ಭಾರತ ಮಾತೆ’ ರಕ್ಷಿಸಲು ಮಾತನಾಡುವುದನ್ನು ಬಿಟ್ಟು ಬೇರೆ ಏನು ಮಾಡಿದ್ದೀರಿ?; ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಚೀನಾದೊಂದಿಗಿನ ಗಡಿ ಪರಿಸ್ಥಿತಿಯ ಕುರಿತು ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು  ಕಾಂಗ್ರೆಸ್ ಬುಧವಾರ ವಾಗ್ದಾಳಿ ನಡೆಸಿದೆ. ‘ಭಾರತ ಮಾತೆಯನ್ನು’ ರಕ್ಷಿಸುವ ವಿಚಾರದಲ್ಲಿ ಮಾತನಾಡುವುದನ್ನು ಬಿಟ್ಟು ಮೋದಿ ಸರ್ಕಾರ ಮಾಡಿದ್ದೇನು? ಗಡಿಯಲ್ಲಿ ಹಿಂದಿನ ಯಥಾಸ್ಥಿತಿಯನ್ನು ಯಾವಾಗ ಮರುಸ್ಥಾಪಿಸುತ್ತದೆ? ಎಂದು ಕೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ, ಅವರು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ”ಚೀನಾದೊಂದಿಗೆ 19 ಸುತ್ತಿನ ಮಾತುಕತೆ ವಿಫಲವಾಗಿದೆ, ಕಳೆದ 3 ವರ್ಷಗಳಿಂದ ಪ್ರತಿ ಬಾರಿಯೂ ಮಾತುಕತೆ ವಿಫಲವಾಗಿದೆ” ಎಂದು ಹೇಳಿದ್ದಾರೆ.

ಎರಡು ದಿನಗಳ ಮಿಲಿಟರಿ ಮಾತುಕತೆಯಲ್ಲಿ, ಭಾರತ ಮತ್ತು ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವುದರ ಜೊತೆಗೆ ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಉಳಿದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಒಪ್ಪಿಕೊಂಡಿವೆ ಎಂದು ಜಂಟಿ ಹೇಳಿಕೆ ಮಂಗಳವಾರ ಬಿಡುಗಡೆ ಮಾಡಿವೆ.

”2020ರ ಏಪ್ರಿಲ್‌ನಲ್ಲಿ ಇದ್ದ ಯಥಾಸ್ಥಿತಿಯನ್ನು ಮೂರು ವರ್ಷ ಮತ್ತು ಮೂರು ತಿಂಗಳವರೆಗೆ ಪುನಃಸ್ಥಾಪಿಸಲಾಗಿಲ್ಲ” ಎಂದು ಸುರ್ಜೆವಾಲಾ ಅವರು ಹೇಳಿದರು.

”ಭಾರತೀಯ ಪಡೆಗಳು ಆಯಕಟ್ಟಿನ DBO ಏರ್‌ಸ್ಟ್ರಿಪ್ ಬಳಿ ಇರುವ ಡೆಪ್ಸಾಂಗ್ ಬಯಲು ಪ್ರದೇಶದ 65 ಪೆಟ್ರೋಲಿಂಗ್ ಪಾಯಿಂಟ್‌ಗಳಲ್ಲಿ 26 ‘ಪೆಟ್ರೋಲ್’ ಹೊಂದಲು ಸಾಧ್ಯವಾಗಿಲ್ಲ! ನಮ್ಮ ಭೂಪ್ರದೇಶದ ಒಳಗೆ ‘ಬಾಟಲ್‌ನೆಕ್’ ಎಂದು ಕರೆಯಲ್ಪಡುವ Y ಜಂಕ್ಷನ್‌ನಲ್ಲಿ ಚೀನೀಯರು ಭಾರತೀಯ ಸೈನಿಕರನ್ನು ನಿರ್ಬಂಧಿಸುವುದನ್ನು ಮುಂದುವರೆಸಿದ್ದಾರೆ. 10, 11, 11A, 12, 13 ಪೆಟ್ರೋಲಿಂಗ್ ಪಾಯಿಂಟ್‌ಗಳಿಗೆ ಪ್ರವೇಶವನ್ನು ಚೀನಿಯರು ನಿರ್ಬಂಧಿಸಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಸುರ್ಜೆವಾಲಾ ಟ್ವಿಟರ್‌ನಲ್ಲಿ ಹೇಳಿದ್ದರು.

ಮೋದಿ ಸರ್ಕಾರವನ್ನು ಪ್ರಶ್ನಿಸಿದ ಸುರ್ಜೆವಾಲಾ, ”ಚೀನೀಯರು ನಿರ್ಲಜ್ಜವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ಯಾವಾಗ ತೆರವು ಮಾಡಲಾಗುತ್ತದೆ? ಚೀನಾದ ಸೇನೆಯನ್ನು ಯಾವಾಗ ಹಿಂದಕ್ಕೆ ತಳ್ಳಲಾಗುತ್ತದೆ? ಚೀನೀಯರು ಆಕ್ರಮಿಸಿಕೊಂಡಿರುವ ಸುಮಾರು 1,000 ಚದರ ಕಿಲೋಮೀಟರ್ ಭಾರತೀಯ ಪ್ರದೇಶವನ್ನು ಬಿಟ್ಟುಕೊಡಲು ಮೋದಿ ಸರ್ಕಾರವು ರಾಜಿ ಮಾಡಿಕೊಂಡಿದೆಯೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಯಾರೂ ಭಾರತೀಯ ಪ್ರದೇಶವನ್ನು ಪ್ರವೇಶಿಸದಿದ್ದರೆ, ಚೀನಿಯರೊಂದಿಗೆ ಏಕೆ ಮಾತುಕತೆ ನಡೆಸಲಾಗುತ್ತಿದೆ? ಎಂದು ಕೇಳಿದ್ದಾರೆ.

”’ಭಾರತ ಮಾತೆಯನ್ನು’ ರಕ್ಷಿಸುವ ವಿಚಾರದಲ್ಲಿ ಮಾತನಾಡುವುದನ್ನು ಬಿಟ್ಟು ಮೋದಿ ಸರ್ಕಾರ ಮಾಡಿದ್ದೇನು?” ಎಂದು ಚೀನಾದೊಂದಿಗಿನ ಗಡಿ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...