Homeಮುಖಪುಟಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ: ರಾಹುಲ್ ಗಾಂಧಿ

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಿ ಸೈನಿಕರ ಒಳನುಗ್ಗಿವಿಕೆ ವಿಚಾರವು ಆತಂಕಕಾರಿಯಾಗಿದೆ. ಆದರೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ಮೋದಿ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಜೈಪುರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, “ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ. ಅವರು ನಮ್ಮ ಸೈನಿಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆ ಮೂಲಕ ಚೀನಾದ ಬೆದರಿಕೆ ಸ್ಪಷ್ಟವಾಗಿದೆ. ಆದರೆ ನಮ್ಮ ಸರ್ಕಾರ ಅದನ್ನು ಮರೆಮಾಡುತ್ತಿದೆ, ಅದನ್ನು ನಿರ್ಲಕ್ಷಿಸುತ್ತಿದೆ. ಚೀನಾ ಲಡಾಖ್ ಮತ್ತು ಅರುಣಾಚಲದಲ್ಲಿ ಆಕ್ರಮಣಕ್ಕೆ ತಯಾರಿ ನಡೆಸುತ್ತಿದೆ ಮತ್ತು ಭಾರತ ಸರ್ಕಾರ ನಿದ್ರಿಸುತ್ತಿದೆ” ಎಂದು ಹೇಳಿದ್ದಾರೆ.

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆಯೇ ಹೊರತು ಕೇವಲ ಅತಿಕ್ರಮಣ ಮಾತ್ರವಲ್ಲ. ಇದನ್ನು ಎರಡು-ಮೂರು ವರ್ಷಗಳಿಂದಲೂ ನಾನು ಹೇಳುತ್ತಾ ಬಂದಿದ್ದೇನೆ. ಅವರ ಆಯುಧಗಳ ಮಾದರಿಯನ್ನು ನೋಡಿ. ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ. ಅದನ್ನು ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಭಾರತ ಸರ್ಕಾರವು ಈವೆಂಟ್‌ಗಳ ಮೇಲೆ ಕೆಲಸ ಮಾಡುತ್ತಿದೆಯೆ ಹೊರತು ಚೀನಾದ ತಂತ್ರಕ್ಕೆ ಪ್ರತಿತಂತ್ರ ಹೆಣೆಯುತ್ತಿಲ್ಲ ಎಂದಿದ್ದಾರೆ.

“ಭಾರತ ಸರ್ಕಾರವು ಈವೆಂಟ್ ಆಧಾರಿತ ಕೆಲಸವನ್ನು ನಿರ್ವಹಿಸುತ್ತದೆಯೆ ಹೊರತು ಕಾರ್ಯತಂತ್ರ ಹೆಣೆಯುತ್ತಿಲ್ಲ. ಆಗೊಂದು, ಹೀಗೊಂದು ಸಭೆ ಮಾಡುತ್ತಾರೆ. ಆದರೆ ಭೌಗೋಳಿಕ ಕಾರ್ಯತಂತ್ರದಲ್ಲಿ ಈವೆಂಟ್-ಆಧಾರಿತ ವಿಧಾನವು ಕಾರ್ಯನಿರ್ವಹಿಸುವುದಿಲ್ಲ. ಅದಕ್ಕೆ ಶಕ್ತಿ ಬೇಕು, ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ” ಎಂದು ರಾಹುಲ್ ಹೇಳಿದ್ದಾರೆ.

“ಮೋದಿಯವರ ಭಾಷಣಗಳು ಬರುತ್ತವೆ. ವಿದೇಶಾಂಗ ವ್ಯವಹಾರಗಳ ಸಚಿವರು ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಾರೆ. ನಾನು ಇದನ್ನು ಹೇಳಬಾರದು ಆದರೆ ಬಹುಶಃ ಅವರು ತಮ್ಮ ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ.

ಇದನ್ನೂ ಓದಿ; ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...