Homeಮುಖಪುಟಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ: ರಾಹುಲ್ ಗಾಂಧಿ

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಿ ಸೈನಿಕರ ಒಳನುಗ್ಗಿವಿಕೆ ವಿಚಾರವು ಆತಂಕಕಾರಿಯಾಗಿದೆ. ಆದರೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ಮೋದಿ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಜೈಪುರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, “ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ. ಅವರು ನಮ್ಮ ಸೈನಿಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆ ಮೂಲಕ ಚೀನಾದ ಬೆದರಿಕೆ ಸ್ಪಷ್ಟವಾಗಿದೆ. ಆದರೆ ನಮ್ಮ ಸರ್ಕಾರ ಅದನ್ನು ಮರೆಮಾಡುತ್ತಿದೆ, ಅದನ್ನು ನಿರ್ಲಕ್ಷಿಸುತ್ತಿದೆ. ಚೀನಾ ಲಡಾಖ್ ಮತ್ತು ಅರುಣಾಚಲದಲ್ಲಿ ಆಕ್ರಮಣಕ್ಕೆ ತಯಾರಿ ನಡೆಸುತ್ತಿದೆ ಮತ್ತು ಭಾರತ ಸರ್ಕಾರ ನಿದ್ರಿಸುತ್ತಿದೆ” ಎಂದು ಹೇಳಿದ್ದಾರೆ.

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆಯೇ ಹೊರತು ಕೇವಲ ಅತಿಕ್ರಮಣ ಮಾತ್ರವಲ್ಲ. ಇದನ್ನು ಎರಡು-ಮೂರು ವರ್ಷಗಳಿಂದಲೂ ನಾನು ಹೇಳುತ್ತಾ ಬಂದಿದ್ದೇನೆ. ಅವರ ಆಯುಧಗಳ ಮಾದರಿಯನ್ನು ನೋಡಿ. ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ. ಅದನ್ನು ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಭಾರತ ಸರ್ಕಾರವು ಈವೆಂಟ್‌ಗಳ ಮೇಲೆ ಕೆಲಸ ಮಾಡುತ್ತಿದೆಯೆ ಹೊರತು ಚೀನಾದ ತಂತ್ರಕ್ಕೆ ಪ್ರತಿತಂತ್ರ ಹೆಣೆಯುತ್ತಿಲ್ಲ ಎಂದಿದ್ದಾರೆ.

“ಭಾರತ ಸರ್ಕಾರವು ಈವೆಂಟ್ ಆಧಾರಿತ ಕೆಲಸವನ್ನು ನಿರ್ವಹಿಸುತ್ತದೆಯೆ ಹೊರತು ಕಾರ್ಯತಂತ್ರ ಹೆಣೆಯುತ್ತಿಲ್ಲ. ಆಗೊಂದು, ಹೀಗೊಂದು ಸಭೆ ಮಾಡುತ್ತಾರೆ. ಆದರೆ ಭೌಗೋಳಿಕ ಕಾರ್ಯತಂತ್ರದಲ್ಲಿ ಈವೆಂಟ್-ಆಧಾರಿತ ವಿಧಾನವು ಕಾರ್ಯನಿರ್ವಹಿಸುವುದಿಲ್ಲ. ಅದಕ್ಕೆ ಶಕ್ತಿ ಬೇಕು, ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ” ಎಂದು ರಾಹುಲ್ ಹೇಳಿದ್ದಾರೆ.

“ಮೋದಿಯವರ ಭಾಷಣಗಳು ಬರುತ್ತವೆ. ವಿದೇಶಾಂಗ ವ್ಯವಹಾರಗಳ ಸಚಿವರು ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಾರೆ. ನಾನು ಇದನ್ನು ಹೇಳಬಾರದು ಆದರೆ ಬಹುಶಃ ಅವರು ತಮ್ಮ ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ.

ಇದನ್ನೂ ಓದಿ; ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...