Homeಮುಖಪುಟಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ: ರಾಹುಲ್ ಗಾಂಧಿ

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಿ ಸೈನಿಕರ ಒಳನುಗ್ಗಿವಿಕೆ ವಿಚಾರವು ಆತಂಕಕಾರಿಯಾಗಿದೆ. ಆದರೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ಮೋದಿ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಜೈಪುರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, “ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ. ಅವರು ನಮ್ಮ ಸೈನಿಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆ ಮೂಲಕ ಚೀನಾದ ಬೆದರಿಕೆ ಸ್ಪಷ್ಟವಾಗಿದೆ. ಆದರೆ ನಮ್ಮ ಸರ್ಕಾರ ಅದನ್ನು ಮರೆಮಾಡುತ್ತಿದೆ, ಅದನ್ನು ನಿರ್ಲಕ್ಷಿಸುತ್ತಿದೆ. ಚೀನಾ ಲಡಾಖ್ ಮತ್ತು ಅರುಣಾಚಲದಲ್ಲಿ ಆಕ್ರಮಣಕ್ಕೆ ತಯಾರಿ ನಡೆಸುತ್ತಿದೆ ಮತ್ತು ಭಾರತ ಸರ್ಕಾರ ನಿದ್ರಿಸುತ್ತಿದೆ” ಎಂದು ಹೇಳಿದ್ದಾರೆ.

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆಯೇ ಹೊರತು ಕೇವಲ ಅತಿಕ್ರಮಣ ಮಾತ್ರವಲ್ಲ. ಇದನ್ನು ಎರಡು-ಮೂರು ವರ್ಷಗಳಿಂದಲೂ ನಾನು ಹೇಳುತ್ತಾ ಬಂದಿದ್ದೇನೆ. ಅವರ ಆಯುಧಗಳ ಮಾದರಿಯನ್ನು ನೋಡಿ. ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ. ಅದನ್ನು ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಭಾರತ ಸರ್ಕಾರವು ಈವೆಂಟ್‌ಗಳ ಮೇಲೆ ಕೆಲಸ ಮಾಡುತ್ತಿದೆಯೆ ಹೊರತು ಚೀನಾದ ತಂತ್ರಕ್ಕೆ ಪ್ರತಿತಂತ್ರ ಹೆಣೆಯುತ್ತಿಲ್ಲ ಎಂದಿದ್ದಾರೆ.

“ಭಾರತ ಸರ್ಕಾರವು ಈವೆಂಟ್ ಆಧಾರಿತ ಕೆಲಸವನ್ನು ನಿರ್ವಹಿಸುತ್ತದೆಯೆ ಹೊರತು ಕಾರ್ಯತಂತ್ರ ಹೆಣೆಯುತ್ತಿಲ್ಲ. ಆಗೊಂದು, ಹೀಗೊಂದು ಸಭೆ ಮಾಡುತ್ತಾರೆ. ಆದರೆ ಭೌಗೋಳಿಕ ಕಾರ್ಯತಂತ್ರದಲ್ಲಿ ಈವೆಂಟ್-ಆಧಾರಿತ ವಿಧಾನವು ಕಾರ್ಯನಿರ್ವಹಿಸುವುದಿಲ್ಲ. ಅದಕ್ಕೆ ಶಕ್ತಿ ಬೇಕು, ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ” ಎಂದು ರಾಹುಲ್ ಹೇಳಿದ್ದಾರೆ.

“ಮೋದಿಯವರ ಭಾಷಣಗಳು ಬರುತ್ತವೆ. ವಿದೇಶಾಂಗ ವ್ಯವಹಾರಗಳ ಸಚಿವರು ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಾರೆ. ನಾನು ಇದನ್ನು ಹೇಳಬಾರದು ಆದರೆ ಬಹುಶಃ ಅವರು ತಮ್ಮ ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ.

ಇದನ್ನೂ ಓದಿ; ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...