Homeಮುಖಪುಟಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೀನಾ- ಭಾರತದ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ “ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಏಪ್ರಿಲ್‌ 6ಕ್ಕೆ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಹಮ್ಮಿಕೊಂಡಿರುವ ಮೂರು ದಿನಗಳ ಪ್ರವಾಸಕ್ಕೆ ಇಂದು (ಫೆ.27) ಚಾಲನೆ ನೀಡಿದ ನಂತರ ವಕೀಲರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಪ್ಯಾಂಗಾಂಗ್‌ ಸರೋವರ ಪ್ರದೇಶಗಳ ಉತ್ತರ ಮತ್ತು ದಕ್ಷಿಣ ದಂಡೆಗಳಿಂದ ಸೇನಾಪಡೆಗಳು, ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಯಂತ್ರೋಪಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯು ಪೂರ್ಣಗೊಳ್ಳುವ ಮೂಲಕ ಮತ್ತು ಪೂರ್ವ ಲಡಾಖ್‌ನಲ್ಲಿ ಗಡಿ ಸಂಘರ್ಷ ನಿಷ್ಕ್ರಿಯಗೊಳಿಸುವ ಮೊದಲು, ಚೀನಿಯರು ಅತಿಕ್ರಮಣ ಆಲೋಚನೆಯನ್ನು 2017ರಲ್ಲಿ ದೋಕಲಾದಲ್ಲಿ ಪರೀಕ್ಷೆಗೆ ಒಳಪಡಿಸಿದ್ದರು” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

“ಚೀನೀಯರು ನಮ್ಮ ದೇಶದ ಪ್ರಮುಖ ಕಾರ್ಯತಂತ್ರದ ಪ್ರದೇಶಗಳನ್ನು ಅತಿಕ್ರಮಿಸಿಕೊಂಡಿದ್ದಾರೆ. ಭಾರತದ ಪ್ರತಿಕ್ರಿಯೆ ಏನಿರುತ್ತದೆ ಎಂಬುದನ್ನು ನೋಡಲು ತಮ್ಮ ಅತಿಕ್ರಮಣದ ಆಲೋಚನೆಯನ್ನು ಅವರು ಮೊದಲು ದೋಕಲಾದಲ್ಲಿ ಪರೀಕ್ಷಿಸಿದ್ದರು. ಭಾರತ ಪ್ರತಿಕ್ರಿಯಿಸುವುದಿಲ್ಲ ಎನ್ನುವುದನ್ನು ಅರಿತ ಅವರು, ನಂತರ ಅದನ್ನು ಲಡಾಖ್‌ನಲ್ಲಿ ಮತ್ತೊಮ್ಮೆ ಪರೀಕ್ಷಿಸಿದ್ದಾರೆ. ಮುಂದೆ ಅವರು ಅದನ್ನು ಅರುಣಾಚಲಪ್ರದೇಶದ ಮೇಲೂ ಪರೀಕ್ಷಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಚೀನಾ ಅತಿಕ್ರಮಣ ನಡೆಸಿದಾಗ ಪ್ರಧಾನಿ ಮೋದಿಯವರ ಮೊದಲ ಪ್ರತಿಕ್ರಿಯೆ ‘ಭಾರತದೊಳಕ್ಕೆ ಯಾರೂ ಬಂದಿಲ್ಲ’ ಎನ್ನುವುದಾಗಿತ್ತು. ಇದರಿಂದಾಗಿ ಭಾರತದ ಪ್ರಧಾನಿ ನಮಗೆ ಹೆದರಿಕೊಂಡಿದ್ದಾರೆ ಎನ್ನುವ ಸೂಚನೆ ಚೀನಾದವರಿಗೆ ಸಿಕ್ಕಿತು. ಭಾರತದ ಪ್ರಧಾನಿ ನಮ್ಮ ಎದುರು ನಿಲ್ಲಲು ಹೆದರುತ್ತಾರೆ ಎನ್ನುವುದನ್ನು ಅವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅದೇ ಆಧಾರದ ಮೇಲೆ ಚೀನಾದವರು ಈಗಲೂ ಮಾತುಕತೆ ನಡೆಸಿದ್ದಾರೆ” ಎಂದು ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

“ನನ್ನ ಮಾತನ್ನು ಚೆನ್ನಾಗಿ ನೆನಪಿಟ್ಟುಕೊಳ್ಳಿ, ಡೆಪ್ಸಾಂಗ್‌ನಲ್ಲಿರುವ ನಮ್ಮ ನೆಲ ಅತ್ಯಂತ ಮುಖ್ಯವಾದುದು. ಇದನ್ನು ಚೀನಾದವರು ಆಕ್ರಮಿಸಿಕೊಂಡಾಗಿದೆ. ಇದು ನಮಗೆ ಮರಳಿ ಸಿಗದು, ನಮ್ಮ ಪ್ರಧಾನಿ ಕೂಡ ಆ ಭೂಮಿಯನ್ನು ಮರಳಿ ಪಡೆಯುವುದಿಲ್ಲ. ಎಲ್ಲ ಸಮಸ್ಯೆಗಳನ್ನೂ ಸರಿಪಡಿಸಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಅಷ್ಟೇ. ಆದರೆ, ನಮ್ಮ ದೇಶ ಆ ಪ್ರದೇಶವನ್ನು ಕಳೆದುಕೊಳ್ಳಲಿದೆ” ಎಂದು ವಿವರಿಸಿದರು.

“ದೇಶದೊಳಕ್ಕೆ ಯಾರೂ ಬಂದಿಲ್ಲ” ಎಂದು ಪ್ರಧಾನಿ ನೀಡಿರುವ ಹೇಳಿಕೆ ಭವಿಷ್ಯದಲ್ಲಿ ಭಾರತಕ್ಕೆ ಅಪಾಯವನ್ನು ತಂದೊಡ್ಡಲಿದೆ. ಇದರಿಂದಾಗಿ ಚೀನಾದವರು ಲಡಾಖ್‌ನಲ್ಲಿ ನಡೆಸುತ್ತಿರುವ ಸಂಘರ್ಷವನ್ನು ಇಷ್ಟಕ್ಕೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

“ಕಾಂಗ್ರೆಸ್‌ ನೇತೃತ್ವದ ಸರ್ಕಾರ ಇದ್ದಾಗ ಯಾವುದೇ ಹಿಂಜರಿಕೆ ಇಲ್ಲದೇ ಚೀನಾದೊಂದಿಗೆ ವ್ಯವಹರಿಸಿದೆ. ಭಾರತವನ್ನು ಸುತ್ತುವರಿಯಲು ನಮ್ಮಿಂದ ಸಾಧ್ಯವಿಲ್ಲವೆಂದು ಚೀನಾದವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದರು. 2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು. ಈಗಿನ ಪ್ರಧಾನಿಗೆ ಆ ಧೈರ್ಯವಿಲ್ಲ, ಪ್ರಧಾನಿಯೇ ರಾಜಿ ಮಾಡಿಕೊಳ್ಳಲಿದ್ದಾರೆ ಎನ್ನುವುದು ಚೀನಾದವರಿಗೆ ತಿಳಿದಿದೆ” ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.


ಇದನ್ನೂ ಓದಿ: ಆಘಾತಕಾರಿ ಸುದ್ದಿ: ವಸತಿ ಶಾಲೆಯೊಂದರಲ್ಲಿನ 317 ಹೆಣ್ಣುಮಕ್ಕಳ ಸಾಮೂಹಿಕ ಅಪಹರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...