Homeಮುಖಪುಟಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೀನಾ- ಭಾರತದ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ “ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಏಪ್ರಿಲ್‌ 6ಕ್ಕೆ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಹಮ್ಮಿಕೊಂಡಿರುವ ಮೂರು ದಿನಗಳ ಪ್ರವಾಸಕ್ಕೆ ಇಂದು (ಫೆ.27) ಚಾಲನೆ ನೀಡಿದ ನಂತರ ವಕೀಲರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಪ್ಯಾಂಗಾಂಗ್‌ ಸರೋವರ ಪ್ರದೇಶಗಳ ಉತ್ತರ ಮತ್ತು ದಕ್ಷಿಣ ದಂಡೆಗಳಿಂದ ಸೇನಾಪಡೆಗಳು, ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಯಂತ್ರೋಪಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯು ಪೂರ್ಣಗೊಳ್ಳುವ ಮೂಲಕ ಮತ್ತು ಪೂರ್ವ ಲಡಾಖ್‌ನಲ್ಲಿ ಗಡಿ ಸಂಘರ್ಷ ನಿಷ್ಕ್ರಿಯಗೊಳಿಸುವ ಮೊದಲು, ಚೀನಿಯರು ಅತಿಕ್ರಮಣ ಆಲೋಚನೆಯನ್ನು 2017ರಲ್ಲಿ ದೋಕಲಾದಲ್ಲಿ ಪರೀಕ್ಷೆಗೆ ಒಳಪಡಿಸಿದ್ದರು” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

“ಚೀನೀಯರು ನಮ್ಮ ದೇಶದ ಪ್ರಮುಖ ಕಾರ್ಯತಂತ್ರದ ಪ್ರದೇಶಗಳನ್ನು ಅತಿಕ್ರಮಿಸಿಕೊಂಡಿದ್ದಾರೆ. ಭಾರತದ ಪ್ರತಿಕ್ರಿಯೆ ಏನಿರುತ್ತದೆ ಎಂಬುದನ್ನು ನೋಡಲು ತಮ್ಮ ಅತಿಕ್ರಮಣದ ಆಲೋಚನೆಯನ್ನು ಅವರು ಮೊದಲು ದೋಕಲಾದಲ್ಲಿ ಪರೀಕ್ಷಿಸಿದ್ದರು. ಭಾರತ ಪ್ರತಿಕ್ರಿಯಿಸುವುದಿಲ್ಲ ಎನ್ನುವುದನ್ನು ಅರಿತ ಅವರು, ನಂತರ ಅದನ್ನು ಲಡಾಖ್‌ನಲ್ಲಿ ಮತ್ತೊಮ್ಮೆ ಪರೀಕ್ಷಿಸಿದ್ದಾರೆ. ಮುಂದೆ ಅವರು ಅದನ್ನು ಅರುಣಾಚಲಪ್ರದೇಶದ ಮೇಲೂ ಪರೀಕ್ಷಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಚೀನಾ ಅತಿಕ್ರಮಣ ನಡೆಸಿದಾಗ ಪ್ರಧಾನಿ ಮೋದಿಯವರ ಮೊದಲ ಪ್ರತಿಕ್ರಿಯೆ ‘ಭಾರತದೊಳಕ್ಕೆ ಯಾರೂ ಬಂದಿಲ್ಲ’ ಎನ್ನುವುದಾಗಿತ್ತು. ಇದರಿಂದಾಗಿ ಭಾರತದ ಪ್ರಧಾನಿ ನಮಗೆ ಹೆದರಿಕೊಂಡಿದ್ದಾರೆ ಎನ್ನುವ ಸೂಚನೆ ಚೀನಾದವರಿಗೆ ಸಿಕ್ಕಿತು. ಭಾರತದ ಪ್ರಧಾನಿ ನಮ್ಮ ಎದುರು ನಿಲ್ಲಲು ಹೆದರುತ್ತಾರೆ ಎನ್ನುವುದನ್ನು ಅವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅದೇ ಆಧಾರದ ಮೇಲೆ ಚೀನಾದವರು ಈಗಲೂ ಮಾತುಕತೆ ನಡೆಸಿದ್ದಾರೆ” ಎಂದು ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

“ನನ್ನ ಮಾತನ್ನು ಚೆನ್ನಾಗಿ ನೆನಪಿಟ್ಟುಕೊಳ್ಳಿ, ಡೆಪ್ಸಾಂಗ್‌ನಲ್ಲಿರುವ ನಮ್ಮ ನೆಲ ಅತ್ಯಂತ ಮುಖ್ಯವಾದುದು. ಇದನ್ನು ಚೀನಾದವರು ಆಕ್ರಮಿಸಿಕೊಂಡಾಗಿದೆ. ಇದು ನಮಗೆ ಮರಳಿ ಸಿಗದು, ನಮ್ಮ ಪ್ರಧಾನಿ ಕೂಡ ಆ ಭೂಮಿಯನ್ನು ಮರಳಿ ಪಡೆಯುವುದಿಲ್ಲ. ಎಲ್ಲ ಸಮಸ್ಯೆಗಳನ್ನೂ ಸರಿಪಡಿಸಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಅಷ್ಟೇ. ಆದರೆ, ನಮ್ಮ ದೇಶ ಆ ಪ್ರದೇಶವನ್ನು ಕಳೆದುಕೊಳ್ಳಲಿದೆ” ಎಂದು ವಿವರಿಸಿದರು.

“ದೇಶದೊಳಕ್ಕೆ ಯಾರೂ ಬಂದಿಲ್ಲ” ಎಂದು ಪ್ರಧಾನಿ ನೀಡಿರುವ ಹೇಳಿಕೆ ಭವಿಷ್ಯದಲ್ಲಿ ಭಾರತಕ್ಕೆ ಅಪಾಯವನ್ನು ತಂದೊಡ್ಡಲಿದೆ. ಇದರಿಂದಾಗಿ ಚೀನಾದವರು ಲಡಾಖ್‌ನಲ್ಲಿ ನಡೆಸುತ್ತಿರುವ ಸಂಘರ್ಷವನ್ನು ಇಷ್ಟಕ್ಕೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

“ಕಾಂಗ್ರೆಸ್‌ ನೇತೃತ್ವದ ಸರ್ಕಾರ ಇದ್ದಾಗ ಯಾವುದೇ ಹಿಂಜರಿಕೆ ಇಲ್ಲದೇ ಚೀನಾದೊಂದಿಗೆ ವ್ಯವಹರಿಸಿದೆ. ಭಾರತವನ್ನು ಸುತ್ತುವರಿಯಲು ನಮ್ಮಿಂದ ಸಾಧ್ಯವಿಲ್ಲವೆಂದು ಚೀನಾದವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದರು. 2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು. ಈಗಿನ ಪ್ರಧಾನಿಗೆ ಆ ಧೈರ್ಯವಿಲ್ಲ, ಪ್ರಧಾನಿಯೇ ರಾಜಿ ಮಾಡಿಕೊಳ್ಳಲಿದ್ದಾರೆ ಎನ್ನುವುದು ಚೀನಾದವರಿಗೆ ತಿಳಿದಿದೆ” ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.


ಇದನ್ನೂ ಓದಿ: ಆಘಾತಕಾರಿ ಸುದ್ದಿ: ವಸತಿ ಶಾಲೆಯೊಂದರಲ್ಲಿನ 317 ಹೆಣ್ಣುಮಕ್ಕಳ ಸಾಮೂಹಿಕ ಅಪಹರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...