Homeಮುಖಪುಟಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೀನಾ- ಭಾರತದ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ “ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಏಪ್ರಿಲ್‌ 6ಕ್ಕೆ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಹಮ್ಮಿಕೊಂಡಿರುವ ಮೂರು ದಿನಗಳ ಪ್ರವಾಸಕ್ಕೆ ಇಂದು (ಫೆ.27) ಚಾಲನೆ ನೀಡಿದ ನಂತರ ವಕೀಲರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಪ್ಯಾಂಗಾಂಗ್‌ ಸರೋವರ ಪ್ರದೇಶಗಳ ಉತ್ತರ ಮತ್ತು ದಕ್ಷಿಣ ದಂಡೆಗಳಿಂದ ಸೇನಾಪಡೆಗಳು, ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಯಂತ್ರೋಪಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯು ಪೂರ್ಣಗೊಳ್ಳುವ ಮೂಲಕ ಮತ್ತು ಪೂರ್ವ ಲಡಾಖ್‌ನಲ್ಲಿ ಗಡಿ ಸಂಘರ್ಷ ನಿಷ್ಕ್ರಿಯಗೊಳಿಸುವ ಮೊದಲು, ಚೀನಿಯರು ಅತಿಕ್ರಮಣ ಆಲೋಚನೆಯನ್ನು 2017ರಲ್ಲಿ ದೋಕಲಾದಲ್ಲಿ ಪರೀಕ್ಷೆಗೆ ಒಳಪಡಿಸಿದ್ದರು” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

“ಚೀನೀಯರು ನಮ್ಮ ದೇಶದ ಪ್ರಮುಖ ಕಾರ್ಯತಂತ್ರದ ಪ್ರದೇಶಗಳನ್ನು ಅತಿಕ್ರಮಿಸಿಕೊಂಡಿದ್ದಾರೆ. ಭಾರತದ ಪ್ರತಿಕ್ರಿಯೆ ಏನಿರುತ್ತದೆ ಎಂಬುದನ್ನು ನೋಡಲು ತಮ್ಮ ಅತಿಕ್ರಮಣದ ಆಲೋಚನೆಯನ್ನು ಅವರು ಮೊದಲು ದೋಕಲಾದಲ್ಲಿ ಪರೀಕ್ಷಿಸಿದ್ದರು. ಭಾರತ ಪ್ರತಿಕ್ರಿಯಿಸುವುದಿಲ್ಲ ಎನ್ನುವುದನ್ನು ಅರಿತ ಅವರು, ನಂತರ ಅದನ್ನು ಲಡಾಖ್‌ನಲ್ಲಿ ಮತ್ತೊಮ್ಮೆ ಪರೀಕ್ಷಿಸಿದ್ದಾರೆ. ಮುಂದೆ ಅವರು ಅದನ್ನು ಅರುಣಾಚಲಪ್ರದೇಶದ ಮೇಲೂ ಪರೀಕ್ಷಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಚೀನಾ ಅತಿಕ್ರಮಣ ನಡೆಸಿದಾಗ ಪ್ರಧಾನಿ ಮೋದಿಯವರ ಮೊದಲ ಪ್ರತಿಕ್ರಿಯೆ ‘ಭಾರತದೊಳಕ್ಕೆ ಯಾರೂ ಬಂದಿಲ್ಲ’ ಎನ್ನುವುದಾಗಿತ್ತು. ಇದರಿಂದಾಗಿ ಭಾರತದ ಪ್ರಧಾನಿ ನಮಗೆ ಹೆದರಿಕೊಂಡಿದ್ದಾರೆ ಎನ್ನುವ ಸೂಚನೆ ಚೀನಾದವರಿಗೆ ಸಿಕ್ಕಿತು. ಭಾರತದ ಪ್ರಧಾನಿ ನಮ್ಮ ಎದುರು ನಿಲ್ಲಲು ಹೆದರುತ್ತಾರೆ ಎನ್ನುವುದನ್ನು ಅವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅದೇ ಆಧಾರದ ಮೇಲೆ ಚೀನಾದವರು ಈಗಲೂ ಮಾತುಕತೆ ನಡೆಸಿದ್ದಾರೆ” ಎಂದು ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

“ನನ್ನ ಮಾತನ್ನು ಚೆನ್ನಾಗಿ ನೆನಪಿಟ್ಟುಕೊಳ್ಳಿ, ಡೆಪ್ಸಾಂಗ್‌ನಲ್ಲಿರುವ ನಮ್ಮ ನೆಲ ಅತ್ಯಂತ ಮುಖ್ಯವಾದುದು. ಇದನ್ನು ಚೀನಾದವರು ಆಕ್ರಮಿಸಿಕೊಂಡಾಗಿದೆ. ಇದು ನಮಗೆ ಮರಳಿ ಸಿಗದು, ನಮ್ಮ ಪ್ರಧಾನಿ ಕೂಡ ಆ ಭೂಮಿಯನ್ನು ಮರಳಿ ಪಡೆಯುವುದಿಲ್ಲ. ಎಲ್ಲ ಸಮಸ್ಯೆಗಳನ್ನೂ ಸರಿಪಡಿಸಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಅಷ್ಟೇ. ಆದರೆ, ನಮ್ಮ ದೇಶ ಆ ಪ್ರದೇಶವನ್ನು ಕಳೆದುಕೊಳ್ಳಲಿದೆ” ಎಂದು ವಿವರಿಸಿದರು.

“ದೇಶದೊಳಕ್ಕೆ ಯಾರೂ ಬಂದಿಲ್ಲ” ಎಂದು ಪ್ರಧಾನಿ ನೀಡಿರುವ ಹೇಳಿಕೆ ಭವಿಷ್ಯದಲ್ಲಿ ಭಾರತಕ್ಕೆ ಅಪಾಯವನ್ನು ತಂದೊಡ್ಡಲಿದೆ. ಇದರಿಂದಾಗಿ ಚೀನಾದವರು ಲಡಾಖ್‌ನಲ್ಲಿ ನಡೆಸುತ್ತಿರುವ ಸಂಘರ್ಷವನ್ನು ಇಷ್ಟಕ್ಕೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

“ಕಾಂಗ್ರೆಸ್‌ ನೇತೃತ್ವದ ಸರ್ಕಾರ ಇದ್ದಾಗ ಯಾವುದೇ ಹಿಂಜರಿಕೆ ಇಲ್ಲದೇ ಚೀನಾದೊಂದಿಗೆ ವ್ಯವಹರಿಸಿದೆ. ಭಾರತವನ್ನು ಸುತ್ತುವರಿಯಲು ನಮ್ಮಿಂದ ಸಾಧ್ಯವಿಲ್ಲವೆಂದು ಚೀನಾದವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದರು. 2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು. ಈಗಿನ ಪ್ರಧಾನಿಗೆ ಆ ಧೈರ್ಯವಿಲ್ಲ, ಪ್ರಧಾನಿಯೇ ರಾಜಿ ಮಾಡಿಕೊಳ್ಳಲಿದ್ದಾರೆ ಎನ್ನುವುದು ಚೀನಾದವರಿಗೆ ತಿಳಿದಿದೆ” ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.


ಇದನ್ನೂ ಓದಿ: ಆಘಾತಕಾರಿ ಸುದ್ದಿ: ವಸತಿ ಶಾಲೆಯೊಂದರಲ್ಲಿನ 317 ಹೆಣ್ಣುಮಕ್ಕಳ ಸಾಮೂಹಿಕ ಅಪಹರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...