Homeಅಂತರಾಷ್ಟ್ರೀಯಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

- Advertisement -
- Advertisement -

ಟಿಬೆಟ್‌‌‌ ಸ್ವಾಯತ್ತ ಪ್ರದೇಶದ ರಾಜಧಾನಿ ಲಾಸಾ ಮತ್ತು ಗಡಿ ಪಟ್ಟಣ ನಿಯಿಂಗ್ಚಿಯನ್ನು ಸಂಪರ್ಕಿಸುವ, ಮೊಟ್ಟ ಮೊದಲ ಸಂಪೂರ್ಣ ವಿದ್ಯುತ್‌ ಚಾಲಿತ ಬುಲೆಟ್ ಟ್ರೈನನ್ನು ಚೀನಾ ಲೋಕಾರ್ಪಣೆ ಮಾಡಿದೆ. ರೈಲಿನ ಮಾರ್ಗವು 435.5 ಕಿ.ಮೀ. ಇದ್ದು, ರೈಲು ಅರುಣಾಚಲ ಪ್ರದೇಶಕ್ಕೆ ಸಮೀಪದಲ್ಲಿರುವ ಟಿಬೆಟ್‌ನ ಹಿಮಾಲಯ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತದೆ.

ಗಡಿ ಸ್ಥಿರತೆಯನ್ನು ಕಾಪಾಡುವಲ್ಲಿ ಹೊಸ ರೈಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಘೋಷಿಸಿದ್ದಾರೆ ಎಂದು ಸರ್ಕಾರಿ ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಚೀನಾವು ಅರುಣಾಚಲವನ್ನು ದಕ್ಷಿಣ ಟಿಬೆಟ್‌ ಭಾಗವೆಂದು ಭಾರತದೊಂದಿಗೆ ತಕರಾರು ಮಾಡುತ್ತಲೆ ಇದೆ. ಪ್ರಸ್ತುತ ವಿವಾದವು 3,488 ಕಿ.ಮೀ ಉದ್ದದ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಗೆ ಸಂಬಂಧಿಸಿದೆ. ಆದರೆ ಚೀನಾದ ಪ್ರತಿಪಾದನೆಯನ್ನು ಭಾರತವು ನಿರಾಕರಿಸುತ್ತಲೆ ಬರುತ್ತಿದೆ.

ಇದನ್ನೂ ಓದಿ: 10 ಲಕ್ಷ ಹಣದ ಕಟ್ಟಿನೊಂದಿಗೆ ಪತ್ರಿಕಾಗೋಷ್ಠಿಗೆ ಆಗಮಿಸಿದ ಹೆಚ್‌.ಡಿ ರೇವಣ್ಣ ಆರೋಪ

ಚೀನಾ-ಭಾರತ ಗಡಿಯಲ್ಲಿ ಬಿಕ್ಕಟ್ಟು ಉಂಟಾದರೆ, ಹೊಸ ರೈಲು ಚೀನಾದ ಕಾರ್ಯಾಚರಣೆಗೆ ಸಹಾಯವಾಗುತ್ತದೆ ಎಂದು ಸಿಂಗ್ಹುವಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾರ್ಯತಂತ್ರ ಸಂಸ್ಥೆಯ ಸಂಶೋಧನಾ ವಿಭಾಗದ ನಿರ್ದೇಶಕ ಕಿಯಾನ್ ಫೆಂಗ್ ತಿಳಿಸಿದ್ದಾರೆಂದು ಗ್ಲೋಬಲ್ ಟೈಮ್ಸ್‌‌ ಉಲ್ಲೇಖಿಸಿದೆ.

ಸಿಚುವಾನ್-ಟಿಬೆಟ್ ರೈಲ್ವೆಯು ಕಿಂಗ್ಹೈ-ಟಿಬೆಟ್ ಪ್ರಸ್ಥಭೂಮಿಯ ಆಗ್ನೇಯ ದಿಕ್ಕಿನಲ್ಲಿ ಹಾದುಹೋಗುತ್ತದೆ. ಇದು ವಿಶ್ವದ ಅತ್ಯಂತ ಭೌಗೋಳಿಕವಾಗಿ ಸಕ್ರಿಯವಾಗಿರುವ ಪ್ರದೇಶಗಳಲ್ಲಿ ಒಂದಾಗಿದೆ. ಹೊಸ ರೈಲ್ವೆಯು ಪ್ರಯಾಣದ ಸಮಯವನ್ನು 48 ಗಂಟೆಗಳಿಂದ 13 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಇದು ಸಿಚುವಾನ್‌ನ ರಾಜಧಾನಿ ಚೆಂಗ್ಡುವಿನಿಂದ ಪ್ರಾರಂಭವಾಗಿ ಯಾನ್ ಮತ್ತು ಕಾಮ್ಡೋ ಮೂಲಕ ಮೂಲಕ ಟಿಬೆಟ್‌ಗೆ ಪ್ರವೇಶಿಸುತ್ತದೆ.

ನಿಯಿಂಗ್ಚಿ ಪಟ್ಟಣದಲ್ಲಿ ವಿಮಾನ ನಿಲ್ದಾಣವೂ ಇದೆ. ಚೀನಾವು ಹಿಮಾಲಯನ್ ಪ್ರದೇಶದಲ್ಲಿ ನಿರ್ಮಿಸಿದ ಐದು ವಿಮಾನ ನಿಲ್ದಾಣಗಳಲ್ಲಿ ಇದು ಕೂಡಾ ಒಂದು.

ಇದನ್ನೂ ಓದಿ: ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಹೊಸ ರೈಲ್ವೆ ಮಾರ್ಗವು ಟಿಬೆಟ್ ಅನ್ನು ಚೀನಾದ ಮುಖ್ಯ ಭೂಭಾಗದೊಂದಿಗೆ ಪ್ರಮುಖವಾಗಿ ಸಂಪರ್ಕ ಹೊಂದಲು ಅನುವು ಮಾಡಿಕೊಡುತ್ತದೆ ಎಂದು ಫುಡಾನ್ ವಿಶ್ವವಿದ್ಯಾಲಯದ ದಕ್ಷಿಣ ಏಷ್ಯಾ ಅಧ್ಯಯನ ಕೇಂದ್ರದ ಉಪನಿರ್ದೇಶಕ ಲಿನ್ ಮಿನ್ವಾಂಗ್ ಹೇಳಿದ್ದಾರೆ. ಈ ಪ್ರದೇಶವು ವಸ್ತು ಸಾಗಣೆ ಮತ್ತು ಲಾಜಿಸ್ಟಿಕ್ ಸರಬರಾಜಿನಲ್ಲಿ ಹೆಚ್ಚು ಸಾಮರ್ಥ್ಯಗಳನ್ನು ಹೊಂದಿರುತ್ತದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಹೊಸ ರೈಲ್ವೆ ಮಾರ್ಗವು ಟಿಬರ್ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಲಾಸಾದ ಟಿಬೆಟ್ ವಿಶ್ವವಿದ್ಯಾಲಯದ ಜನಾಂಗೀಯ ಅಧ್ಯಯನ ಪ್ರಾಧ್ಯಾಪಕ ಕ್ಸಿಯಾಂಗ್ ಕುನ್ಕ್ಸಿನ್ ಗ್ಲೋಬಲ್ ಟೈಮ್ಸ್ಗೆ ತಿಳಿಸಿದ್ದಾರೆ. ಟಿಬೆಟ್ ಖನಿಜ ನಿಕ್ಷೇಪಗಳು ಮತ್ತು ಔಷಧೀಯ ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ. ಸಿಚುವಾನ್-ಟಿಬೆಟ್ ರೈಲ್ವೆಯು ಸ್ಥಳೀಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಜುಲೈ 1 ರಂದು ನಡೆಯಲಿರುವ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ದ ನೂರನೇ ವಾರ್ಷಿಕೋತ್ಸವದ ಮುನ್ನ, ಸಿಚುವಾನ್-ಟಿಬೆಟ್ ರೈಲ್ವೆಯ ಲಾಸಾ-ನಿಯಿಂಗ್ಚಿ ರೈಲ್ವೇ ಮಾರ್ಗವನ್ನು ಇಂದು ಉದ್ಘಾಟಿಸಲಾಯಿತು.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ಎಮರ್ಜೆನ್ಸಿ ಬಗ್ಗೆ ಮಾತನಾಡುವುದು ಸೋಗಲಾಡಿತನದ ಪರಮಾವಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...