Homeಅಂತರಾಷ್ಟ್ರೀಯಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

- Advertisement -
- Advertisement -

ಟಿಬೆಟ್‌‌‌ ಸ್ವಾಯತ್ತ ಪ್ರದೇಶದ ರಾಜಧಾನಿ ಲಾಸಾ ಮತ್ತು ಗಡಿ ಪಟ್ಟಣ ನಿಯಿಂಗ್ಚಿಯನ್ನು ಸಂಪರ್ಕಿಸುವ, ಮೊಟ್ಟ ಮೊದಲ ಸಂಪೂರ್ಣ ವಿದ್ಯುತ್‌ ಚಾಲಿತ ಬುಲೆಟ್ ಟ್ರೈನನ್ನು ಚೀನಾ ಲೋಕಾರ್ಪಣೆ ಮಾಡಿದೆ. ರೈಲಿನ ಮಾರ್ಗವು 435.5 ಕಿ.ಮೀ. ಇದ್ದು, ರೈಲು ಅರುಣಾಚಲ ಪ್ರದೇಶಕ್ಕೆ ಸಮೀಪದಲ್ಲಿರುವ ಟಿಬೆಟ್‌ನ ಹಿಮಾಲಯ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತದೆ.

ಗಡಿ ಸ್ಥಿರತೆಯನ್ನು ಕಾಪಾಡುವಲ್ಲಿ ಹೊಸ ರೈಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಘೋಷಿಸಿದ್ದಾರೆ ಎಂದು ಸರ್ಕಾರಿ ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಚೀನಾವು ಅರುಣಾಚಲವನ್ನು ದಕ್ಷಿಣ ಟಿಬೆಟ್‌ ಭಾಗವೆಂದು ಭಾರತದೊಂದಿಗೆ ತಕರಾರು ಮಾಡುತ್ತಲೆ ಇದೆ. ಪ್ರಸ್ತುತ ವಿವಾದವು 3,488 ಕಿ.ಮೀ ಉದ್ದದ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಗೆ ಸಂಬಂಧಿಸಿದೆ. ಆದರೆ ಚೀನಾದ ಪ್ರತಿಪಾದನೆಯನ್ನು ಭಾರತವು ನಿರಾಕರಿಸುತ್ತಲೆ ಬರುತ್ತಿದೆ.

ಇದನ್ನೂ ಓದಿ: 10 ಲಕ್ಷ ಹಣದ ಕಟ್ಟಿನೊಂದಿಗೆ ಪತ್ರಿಕಾಗೋಷ್ಠಿಗೆ ಆಗಮಿಸಿದ ಹೆಚ್‌.ಡಿ ರೇವಣ್ಣ ಆರೋಪ

ಚೀನಾ-ಭಾರತ ಗಡಿಯಲ್ಲಿ ಬಿಕ್ಕಟ್ಟು ಉಂಟಾದರೆ, ಹೊಸ ರೈಲು ಚೀನಾದ ಕಾರ್ಯಾಚರಣೆಗೆ ಸಹಾಯವಾಗುತ್ತದೆ ಎಂದು ಸಿಂಗ್ಹುವಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾರ್ಯತಂತ್ರ ಸಂಸ್ಥೆಯ ಸಂಶೋಧನಾ ವಿಭಾಗದ ನಿರ್ದೇಶಕ ಕಿಯಾನ್ ಫೆಂಗ್ ತಿಳಿಸಿದ್ದಾರೆಂದು ಗ್ಲೋಬಲ್ ಟೈಮ್ಸ್‌‌ ಉಲ್ಲೇಖಿಸಿದೆ.

ಸಿಚುವಾನ್-ಟಿಬೆಟ್ ರೈಲ್ವೆಯು ಕಿಂಗ್ಹೈ-ಟಿಬೆಟ್ ಪ್ರಸ್ಥಭೂಮಿಯ ಆಗ್ನೇಯ ದಿಕ್ಕಿನಲ್ಲಿ ಹಾದುಹೋಗುತ್ತದೆ. ಇದು ವಿಶ್ವದ ಅತ್ಯಂತ ಭೌಗೋಳಿಕವಾಗಿ ಸಕ್ರಿಯವಾಗಿರುವ ಪ್ರದೇಶಗಳಲ್ಲಿ ಒಂದಾಗಿದೆ. ಹೊಸ ರೈಲ್ವೆಯು ಪ್ರಯಾಣದ ಸಮಯವನ್ನು 48 ಗಂಟೆಗಳಿಂದ 13 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಇದು ಸಿಚುವಾನ್‌ನ ರಾಜಧಾನಿ ಚೆಂಗ್ಡುವಿನಿಂದ ಪ್ರಾರಂಭವಾಗಿ ಯಾನ್ ಮತ್ತು ಕಾಮ್ಡೋ ಮೂಲಕ ಮೂಲಕ ಟಿಬೆಟ್‌ಗೆ ಪ್ರವೇಶಿಸುತ್ತದೆ.

ನಿಯಿಂಗ್ಚಿ ಪಟ್ಟಣದಲ್ಲಿ ವಿಮಾನ ನಿಲ್ದಾಣವೂ ಇದೆ. ಚೀನಾವು ಹಿಮಾಲಯನ್ ಪ್ರದೇಶದಲ್ಲಿ ನಿರ್ಮಿಸಿದ ಐದು ವಿಮಾನ ನಿಲ್ದಾಣಗಳಲ್ಲಿ ಇದು ಕೂಡಾ ಒಂದು.

ಇದನ್ನೂ ಓದಿ: ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಹೊಸ ರೈಲ್ವೆ ಮಾರ್ಗವು ಟಿಬೆಟ್ ಅನ್ನು ಚೀನಾದ ಮುಖ್ಯ ಭೂಭಾಗದೊಂದಿಗೆ ಪ್ರಮುಖವಾಗಿ ಸಂಪರ್ಕ ಹೊಂದಲು ಅನುವು ಮಾಡಿಕೊಡುತ್ತದೆ ಎಂದು ಫುಡಾನ್ ವಿಶ್ವವಿದ್ಯಾಲಯದ ದಕ್ಷಿಣ ಏಷ್ಯಾ ಅಧ್ಯಯನ ಕೇಂದ್ರದ ಉಪನಿರ್ದೇಶಕ ಲಿನ್ ಮಿನ್ವಾಂಗ್ ಹೇಳಿದ್ದಾರೆ. ಈ ಪ್ರದೇಶವು ವಸ್ತು ಸಾಗಣೆ ಮತ್ತು ಲಾಜಿಸ್ಟಿಕ್ ಸರಬರಾಜಿನಲ್ಲಿ ಹೆಚ್ಚು ಸಾಮರ್ಥ್ಯಗಳನ್ನು ಹೊಂದಿರುತ್ತದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಹೊಸ ರೈಲ್ವೆ ಮಾರ್ಗವು ಟಿಬರ್ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಲಾಸಾದ ಟಿಬೆಟ್ ವಿಶ್ವವಿದ್ಯಾಲಯದ ಜನಾಂಗೀಯ ಅಧ್ಯಯನ ಪ್ರಾಧ್ಯಾಪಕ ಕ್ಸಿಯಾಂಗ್ ಕುನ್ಕ್ಸಿನ್ ಗ್ಲೋಬಲ್ ಟೈಮ್ಸ್ಗೆ ತಿಳಿಸಿದ್ದಾರೆ. ಟಿಬೆಟ್ ಖನಿಜ ನಿಕ್ಷೇಪಗಳು ಮತ್ತು ಔಷಧೀಯ ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ. ಸಿಚುವಾನ್-ಟಿಬೆಟ್ ರೈಲ್ವೆಯು ಸ್ಥಳೀಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಜುಲೈ 1 ರಂದು ನಡೆಯಲಿರುವ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ದ ನೂರನೇ ವಾರ್ಷಿಕೋತ್ಸವದ ಮುನ್ನ, ಸಿಚುವಾನ್-ಟಿಬೆಟ್ ರೈಲ್ವೆಯ ಲಾಸಾ-ನಿಯಿಂಗ್ಚಿ ರೈಲ್ವೇ ಮಾರ್ಗವನ್ನು ಇಂದು ಉದ್ಘಾಟಿಸಲಾಯಿತು.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ಎಮರ್ಜೆನ್ಸಿ ಬಗ್ಗೆ ಮಾತನಾಡುವುದು ಸೋಗಲಾಡಿತನದ ಪರಮಾವಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...