Homeಅಂತರಾಷ್ಟ್ರೀಯಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

- Advertisement -
- Advertisement -

ಟಿಬೆಟ್‌‌‌ ಸ್ವಾಯತ್ತ ಪ್ರದೇಶದ ರಾಜಧಾನಿ ಲಾಸಾ ಮತ್ತು ಗಡಿ ಪಟ್ಟಣ ನಿಯಿಂಗ್ಚಿಯನ್ನು ಸಂಪರ್ಕಿಸುವ, ಮೊಟ್ಟ ಮೊದಲ ಸಂಪೂರ್ಣ ವಿದ್ಯುತ್‌ ಚಾಲಿತ ಬುಲೆಟ್ ಟ್ರೈನನ್ನು ಚೀನಾ ಲೋಕಾರ್ಪಣೆ ಮಾಡಿದೆ. ರೈಲಿನ ಮಾರ್ಗವು 435.5 ಕಿ.ಮೀ. ಇದ್ದು, ರೈಲು ಅರುಣಾಚಲ ಪ್ರದೇಶಕ್ಕೆ ಸಮೀಪದಲ್ಲಿರುವ ಟಿಬೆಟ್‌ನ ಹಿಮಾಲಯ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತದೆ.

ಗಡಿ ಸ್ಥಿರತೆಯನ್ನು ಕಾಪಾಡುವಲ್ಲಿ ಹೊಸ ರೈಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಘೋಷಿಸಿದ್ದಾರೆ ಎಂದು ಸರ್ಕಾರಿ ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಚೀನಾವು ಅರುಣಾಚಲವನ್ನು ದಕ್ಷಿಣ ಟಿಬೆಟ್‌ ಭಾಗವೆಂದು ಭಾರತದೊಂದಿಗೆ ತಕರಾರು ಮಾಡುತ್ತಲೆ ಇದೆ. ಪ್ರಸ್ತುತ ವಿವಾದವು 3,488 ಕಿ.ಮೀ ಉದ್ದದ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಗೆ ಸಂಬಂಧಿಸಿದೆ. ಆದರೆ ಚೀನಾದ ಪ್ರತಿಪಾದನೆಯನ್ನು ಭಾರತವು ನಿರಾಕರಿಸುತ್ತಲೆ ಬರುತ್ತಿದೆ.

ಇದನ್ನೂ ಓದಿ: 10 ಲಕ್ಷ ಹಣದ ಕಟ್ಟಿನೊಂದಿಗೆ ಪತ್ರಿಕಾಗೋಷ್ಠಿಗೆ ಆಗಮಿಸಿದ ಹೆಚ್‌.ಡಿ ರೇವಣ್ಣ ಆರೋಪ

ಚೀನಾ-ಭಾರತ ಗಡಿಯಲ್ಲಿ ಬಿಕ್ಕಟ್ಟು ಉಂಟಾದರೆ, ಹೊಸ ರೈಲು ಚೀನಾದ ಕಾರ್ಯಾಚರಣೆಗೆ ಸಹಾಯವಾಗುತ್ತದೆ ಎಂದು ಸಿಂಗ್ಹುವಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾರ್ಯತಂತ್ರ ಸಂಸ್ಥೆಯ ಸಂಶೋಧನಾ ವಿಭಾಗದ ನಿರ್ದೇಶಕ ಕಿಯಾನ್ ಫೆಂಗ್ ತಿಳಿಸಿದ್ದಾರೆಂದು ಗ್ಲೋಬಲ್ ಟೈಮ್ಸ್‌‌ ಉಲ್ಲೇಖಿಸಿದೆ.

ಸಿಚುವಾನ್-ಟಿಬೆಟ್ ರೈಲ್ವೆಯು ಕಿಂಗ್ಹೈ-ಟಿಬೆಟ್ ಪ್ರಸ್ಥಭೂಮಿಯ ಆಗ್ನೇಯ ದಿಕ್ಕಿನಲ್ಲಿ ಹಾದುಹೋಗುತ್ತದೆ. ಇದು ವಿಶ್ವದ ಅತ್ಯಂತ ಭೌಗೋಳಿಕವಾಗಿ ಸಕ್ರಿಯವಾಗಿರುವ ಪ್ರದೇಶಗಳಲ್ಲಿ ಒಂದಾಗಿದೆ. ಹೊಸ ರೈಲ್ವೆಯು ಪ್ರಯಾಣದ ಸಮಯವನ್ನು 48 ಗಂಟೆಗಳಿಂದ 13 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಇದು ಸಿಚುವಾನ್‌ನ ರಾಜಧಾನಿ ಚೆಂಗ್ಡುವಿನಿಂದ ಪ್ರಾರಂಭವಾಗಿ ಯಾನ್ ಮತ್ತು ಕಾಮ್ಡೋ ಮೂಲಕ ಮೂಲಕ ಟಿಬೆಟ್‌ಗೆ ಪ್ರವೇಶಿಸುತ್ತದೆ.

ನಿಯಿಂಗ್ಚಿ ಪಟ್ಟಣದಲ್ಲಿ ವಿಮಾನ ನಿಲ್ದಾಣವೂ ಇದೆ. ಚೀನಾವು ಹಿಮಾಲಯನ್ ಪ್ರದೇಶದಲ್ಲಿ ನಿರ್ಮಿಸಿದ ಐದು ವಿಮಾನ ನಿಲ್ದಾಣಗಳಲ್ಲಿ ಇದು ಕೂಡಾ ಒಂದು.

ಇದನ್ನೂ ಓದಿ: ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಹೊಸ ರೈಲ್ವೆ ಮಾರ್ಗವು ಟಿಬೆಟ್ ಅನ್ನು ಚೀನಾದ ಮುಖ್ಯ ಭೂಭಾಗದೊಂದಿಗೆ ಪ್ರಮುಖವಾಗಿ ಸಂಪರ್ಕ ಹೊಂದಲು ಅನುವು ಮಾಡಿಕೊಡುತ್ತದೆ ಎಂದು ಫುಡಾನ್ ವಿಶ್ವವಿದ್ಯಾಲಯದ ದಕ್ಷಿಣ ಏಷ್ಯಾ ಅಧ್ಯಯನ ಕೇಂದ್ರದ ಉಪನಿರ್ದೇಶಕ ಲಿನ್ ಮಿನ್ವಾಂಗ್ ಹೇಳಿದ್ದಾರೆ. ಈ ಪ್ರದೇಶವು ವಸ್ತು ಸಾಗಣೆ ಮತ್ತು ಲಾಜಿಸ್ಟಿಕ್ ಸರಬರಾಜಿನಲ್ಲಿ ಹೆಚ್ಚು ಸಾಮರ್ಥ್ಯಗಳನ್ನು ಹೊಂದಿರುತ್ತದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಹೊಸ ರೈಲ್ವೆ ಮಾರ್ಗವು ಟಿಬರ್ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಲಾಸಾದ ಟಿಬೆಟ್ ವಿಶ್ವವಿದ್ಯಾಲಯದ ಜನಾಂಗೀಯ ಅಧ್ಯಯನ ಪ್ರಾಧ್ಯಾಪಕ ಕ್ಸಿಯಾಂಗ್ ಕುನ್ಕ್ಸಿನ್ ಗ್ಲೋಬಲ್ ಟೈಮ್ಸ್ಗೆ ತಿಳಿಸಿದ್ದಾರೆ. ಟಿಬೆಟ್ ಖನಿಜ ನಿಕ್ಷೇಪಗಳು ಮತ್ತು ಔಷಧೀಯ ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ. ಸಿಚುವಾನ್-ಟಿಬೆಟ್ ರೈಲ್ವೆಯು ಸ್ಥಳೀಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಜುಲೈ 1 ರಂದು ನಡೆಯಲಿರುವ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ದ ನೂರನೇ ವಾರ್ಷಿಕೋತ್ಸವದ ಮುನ್ನ, ಸಿಚುವಾನ್-ಟಿಬೆಟ್ ರೈಲ್ವೆಯ ಲಾಸಾ-ನಿಯಿಂಗ್ಚಿ ರೈಲ್ವೇ ಮಾರ್ಗವನ್ನು ಇಂದು ಉದ್ಘಾಟಿಸಲಾಯಿತು.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ಎಮರ್ಜೆನ್ಸಿ ಬಗ್ಗೆ ಮಾತನಾಡುವುದು ಸೋಗಲಾಡಿತನದ ಪರಮಾವಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...