Homeಅಂತರಾಷ್ಟ್ರೀಯಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

- Advertisement -
- Advertisement -

ಟಿಬೆಟ್‌‌‌ ಸ್ವಾಯತ್ತ ಪ್ರದೇಶದ ರಾಜಧಾನಿ ಲಾಸಾ ಮತ್ತು ಗಡಿ ಪಟ್ಟಣ ನಿಯಿಂಗ್ಚಿಯನ್ನು ಸಂಪರ್ಕಿಸುವ, ಮೊಟ್ಟ ಮೊದಲ ಸಂಪೂರ್ಣ ವಿದ್ಯುತ್‌ ಚಾಲಿತ ಬುಲೆಟ್ ಟ್ರೈನನ್ನು ಚೀನಾ ಲೋಕಾರ್ಪಣೆ ಮಾಡಿದೆ. ರೈಲಿನ ಮಾರ್ಗವು 435.5 ಕಿ.ಮೀ. ಇದ್ದು, ರೈಲು ಅರುಣಾಚಲ ಪ್ರದೇಶಕ್ಕೆ ಸಮೀಪದಲ್ಲಿರುವ ಟಿಬೆಟ್‌ನ ಹಿಮಾಲಯ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತದೆ.

ಗಡಿ ಸ್ಥಿರತೆಯನ್ನು ಕಾಪಾಡುವಲ್ಲಿ ಹೊಸ ರೈಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಘೋಷಿಸಿದ್ದಾರೆ ಎಂದು ಸರ್ಕಾರಿ ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಚೀನಾವು ಅರುಣಾಚಲವನ್ನು ದಕ್ಷಿಣ ಟಿಬೆಟ್‌ ಭಾಗವೆಂದು ಭಾರತದೊಂದಿಗೆ ತಕರಾರು ಮಾಡುತ್ತಲೆ ಇದೆ. ಪ್ರಸ್ತುತ ವಿವಾದವು 3,488 ಕಿ.ಮೀ ಉದ್ದದ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಗೆ ಸಂಬಂಧಿಸಿದೆ. ಆದರೆ ಚೀನಾದ ಪ್ರತಿಪಾದನೆಯನ್ನು ಭಾರತವು ನಿರಾಕರಿಸುತ್ತಲೆ ಬರುತ್ತಿದೆ.

ಇದನ್ನೂ ಓದಿ: 10 ಲಕ್ಷ ಹಣದ ಕಟ್ಟಿನೊಂದಿಗೆ ಪತ್ರಿಕಾಗೋಷ್ಠಿಗೆ ಆಗಮಿಸಿದ ಹೆಚ್‌.ಡಿ ರೇವಣ್ಣ ಆರೋಪ

ಚೀನಾ-ಭಾರತ ಗಡಿಯಲ್ಲಿ ಬಿಕ್ಕಟ್ಟು ಉಂಟಾದರೆ, ಹೊಸ ರೈಲು ಚೀನಾದ ಕಾರ್ಯಾಚರಣೆಗೆ ಸಹಾಯವಾಗುತ್ತದೆ ಎಂದು ಸಿಂಗ್ಹುವಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾರ್ಯತಂತ್ರ ಸಂಸ್ಥೆಯ ಸಂಶೋಧನಾ ವಿಭಾಗದ ನಿರ್ದೇಶಕ ಕಿಯಾನ್ ಫೆಂಗ್ ತಿಳಿಸಿದ್ದಾರೆಂದು ಗ್ಲೋಬಲ್ ಟೈಮ್ಸ್‌‌ ಉಲ್ಲೇಖಿಸಿದೆ.

ಸಿಚುವಾನ್-ಟಿಬೆಟ್ ರೈಲ್ವೆಯು ಕಿಂಗ್ಹೈ-ಟಿಬೆಟ್ ಪ್ರಸ್ಥಭೂಮಿಯ ಆಗ್ನೇಯ ದಿಕ್ಕಿನಲ್ಲಿ ಹಾದುಹೋಗುತ್ತದೆ. ಇದು ವಿಶ್ವದ ಅತ್ಯಂತ ಭೌಗೋಳಿಕವಾಗಿ ಸಕ್ರಿಯವಾಗಿರುವ ಪ್ರದೇಶಗಳಲ್ಲಿ ಒಂದಾಗಿದೆ. ಹೊಸ ರೈಲ್ವೆಯು ಪ್ರಯಾಣದ ಸಮಯವನ್ನು 48 ಗಂಟೆಗಳಿಂದ 13 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಇದು ಸಿಚುವಾನ್‌ನ ರಾಜಧಾನಿ ಚೆಂಗ್ಡುವಿನಿಂದ ಪ್ರಾರಂಭವಾಗಿ ಯಾನ್ ಮತ್ತು ಕಾಮ್ಡೋ ಮೂಲಕ ಮೂಲಕ ಟಿಬೆಟ್‌ಗೆ ಪ್ರವೇಶಿಸುತ್ತದೆ.

ನಿಯಿಂಗ್ಚಿ ಪಟ್ಟಣದಲ್ಲಿ ವಿಮಾನ ನಿಲ್ದಾಣವೂ ಇದೆ. ಚೀನಾವು ಹಿಮಾಲಯನ್ ಪ್ರದೇಶದಲ್ಲಿ ನಿರ್ಮಿಸಿದ ಐದು ವಿಮಾನ ನಿಲ್ದಾಣಗಳಲ್ಲಿ ಇದು ಕೂಡಾ ಒಂದು.

ಇದನ್ನೂ ಓದಿ: ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಹೊಸ ರೈಲ್ವೆ ಮಾರ್ಗವು ಟಿಬೆಟ್ ಅನ್ನು ಚೀನಾದ ಮುಖ್ಯ ಭೂಭಾಗದೊಂದಿಗೆ ಪ್ರಮುಖವಾಗಿ ಸಂಪರ್ಕ ಹೊಂದಲು ಅನುವು ಮಾಡಿಕೊಡುತ್ತದೆ ಎಂದು ಫುಡಾನ್ ವಿಶ್ವವಿದ್ಯಾಲಯದ ದಕ್ಷಿಣ ಏಷ್ಯಾ ಅಧ್ಯಯನ ಕೇಂದ್ರದ ಉಪನಿರ್ದೇಶಕ ಲಿನ್ ಮಿನ್ವಾಂಗ್ ಹೇಳಿದ್ದಾರೆ. ಈ ಪ್ರದೇಶವು ವಸ್ತು ಸಾಗಣೆ ಮತ್ತು ಲಾಜಿಸ್ಟಿಕ್ ಸರಬರಾಜಿನಲ್ಲಿ ಹೆಚ್ಚು ಸಾಮರ್ಥ್ಯಗಳನ್ನು ಹೊಂದಿರುತ್ತದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಹೊಸ ರೈಲ್ವೆ ಮಾರ್ಗವು ಟಿಬರ್ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಲಾಸಾದ ಟಿಬೆಟ್ ವಿಶ್ವವಿದ್ಯಾಲಯದ ಜನಾಂಗೀಯ ಅಧ್ಯಯನ ಪ್ರಾಧ್ಯಾಪಕ ಕ್ಸಿಯಾಂಗ್ ಕುನ್ಕ್ಸಿನ್ ಗ್ಲೋಬಲ್ ಟೈಮ್ಸ್ಗೆ ತಿಳಿಸಿದ್ದಾರೆ. ಟಿಬೆಟ್ ಖನಿಜ ನಿಕ್ಷೇಪಗಳು ಮತ್ತು ಔಷಧೀಯ ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ. ಸಿಚುವಾನ್-ಟಿಬೆಟ್ ರೈಲ್ವೆಯು ಸ್ಥಳೀಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಜುಲೈ 1 ರಂದು ನಡೆಯಲಿರುವ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ದ ನೂರನೇ ವಾರ್ಷಿಕೋತ್ಸವದ ಮುನ್ನ, ಸಿಚುವಾನ್-ಟಿಬೆಟ್ ರೈಲ್ವೆಯ ಲಾಸಾ-ನಿಯಿಂಗ್ಚಿ ರೈಲ್ವೇ ಮಾರ್ಗವನ್ನು ಇಂದು ಉದ್ಘಾಟಿಸಲಾಯಿತು.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ಎಮರ್ಜೆನ್ಸಿ ಬಗ್ಗೆ ಮಾತನಾಡುವುದು ಸೋಗಲಾಡಿತನದ ಪರಮಾವಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...