Homeಮುಖಪುಟಅರುಣಾಚಲ ಪ್ರದೇಶದ ಭೂಭಾಗಕ್ಕೆ ನಾಮಕರಣ ಮಾಡಿದ ಚೀನಾ: ಪಟ್ಟಿ ಬಿಡುಗಡೆ!

ಅರುಣಾಚಲ ಪ್ರದೇಶದ ಭೂಭಾಗಕ್ಕೆ ನಾಮಕರಣ ಮಾಡಿದ ಚೀನಾ: ಪಟ್ಟಿ ಬಿಡುಗಡೆ!

- Advertisement -
- Advertisement -

ಭಾರತದ ಭೂಭಾಗದ ಮೇಲೆ ಚೀನಾ ಹಕ್ಕು ಸಾಧಿಸುವುದನ್ನು ಮುಂದುವರಿಸಿದ್ದು,  ಅರುಣಾಚಲ ಪ್ರದೇಶದ ಭೂಭಾಗವನ್ನು ಒಳಗೊಂಡ 30 ಪ್ರದೇಶಗಳ ಚೀನಿ ಹೆಸರಿನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣವನ್ನು ಭಾರತ ತಿರಸ್ಕರಿಸುತ್ತಿದೆ. ರಾಜ್ಯವು ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಪ್ರತಿಪಾದಿಸಿದೆ.

ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್‌ನಲ್ಲಿ ಪ್ರಮಾಣೀಕೃತ ಭೌಗೋಳಿಕ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ನ ಭಾಗವೆಂದು ಚೀನಾ ಹೇಳುತ್ತಿದೆ ಎಂದು ಸರ್ಕಾರಿ ಗ್ಲೋಬಲ್ ಟೈಮ್ಸ್ ಭಾನುವಾರ ವರದಿ ಮಾಡಿದೆ.

ಸಚಿವಾಲಯದ ಅಧಿಕೃತ ವೆಬ್‌ಸೈಟ್ ಈ ಪ್ರದೇಶಕ್ಕೆ 30 ಹೆಚ್ಚುವರಿ ಹೆಸರುಗಳನ್ನು  ನೀಡಿದೆ. ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್‌ನಲ್ಲಿನ ಆರು ಸ್ಥಳಗಳ ಪ್ರಮಾಣಿತ ಹೆಸರುಗಳ ಮೊದಲ ಪಟ್ಟಿಯನ್ನು 2017ರಲ್ಲಿ ಬಿಡುಗಡೆ ಮಾಡಿತ್ತು, ಇದಾದ ಬಳಿಕ 15 ಸ್ಥಳಗಳ ಎರಡನೇ ಪಟ್ಟಿಯನ್ನು 2021ರಲ್ಲಿ ಬಿಡುಗಡೆ ಮಾಡಿದೆ ಮತ್ತು ನಂತರ 2023ರಲ್ಲಿ 11 ಸ್ಥಳಗಳಿಗೆ ಹೆಸರುಗಳೊಂದಿಗೆ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದಲ್ಲಿ 13,000 ಅಡಿ ಎತ್ತರದಲ್ಲಿ ನಿರ್ಮಿಸಲಾದ ಸೇಲಾ ಸುರಂಗದ ಉದ್ಘಾಟಣೆ, ಪ್ರಧಾನಿ ಭೇಟಿ ಬಳಿಕ ಚೀನಾ ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆಯನ್ನು ಮುಂದುವರಿಸಿದೆ.

ಚೀನಾದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು ಈ ಪ್ರದೇಶದ ಮೇಲೆ ಹಕ್ಕು ಪ್ರತಿಪಾದಿಸಿ ನೀಡುವ ಹೇಳಿಕೆಗಳು ಕೋಲಾಹಲಕ್ಕೆ ಕಾರಣವಾಗಿದೆ. ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ (ಎನ್‌ಯುಎಸ್) ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್ (ಐಎಸ್‌ಎಎಸ್) ನಲ್ಲಿ ಉಪನ್ಯಾಸದ ವೇಳೆ ಮಾತನಾಡಿದ ಎಸ್.ಜೈಶಂಕರ್, ಇದು ಹೊಸ ವಿಚಾರವಲ್ಲ. ಅರುಣಾಚಲ ಪ್ರದೇಶದ ಮೇಲೆ ಪುನಾರಾವರ್ತಿತವಾಗಿ ಹಕ್ಕು ಪ್ರತಿಪಾದಿಸುತ್ತಿರುವ ಚೀನಾದ ನಡೆ ಹಾಸ್ಯಾಸ್ಪದ. ನಮ್ಮ ಗಡಿ ರಾಜ್ಯ ಅರುಣಾಚಲ ಪ್ರದೇಶ ನೈಸರ್ಗಿಕವಾಗಿಯೇ ಭಾರತದ ಅವಿಭಾಜ್ಯ ಅಂಗ. ಆದ್ದರಿಂದ, ನಾವು ಈ ಬಗ್ಗೆ ಬಹಳ ಸ್ಪಷ್ಟವಾಗಿ, ಸ್ಥಿರವಾಗಿರುತ್ತೇವೆ ಎಂದು ನಾನು ಭಾವಿಸುತ್ತೇನೆ ಮತ್ತು ಇದು ನಡೆಯುತ್ತಿರುವ ಗಡಿ ಚರ್ಚೆಗಳ ಭಾಗವಾಗಿದೆ ಎಂದು ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದರು.

ಅರುಣಾಚಲ ಪ್ರದೇಶವನ್ನು ಭಾರತದ ಭೂ ಭಾಗವಾಗಿ ಗುರುತಿಸುವ ಅಮೆರಿಕದ ಹೇಳಿಕೆಯ ಬಗ್ಗೆ ಬೀಜಿಂಗ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಮಾರ್ಚ್ 9ರಂದು ಅರುಣಾಚಲ ಪ್ರದೇಶವನ್ನು ಯುಎಸ್ ಭಾರತದ ಭೂಪ್ರದೇಶವೆಂದು ಗುರುತಿಸುತ್ತದೆ. ಗಡಿ ನಿಯಂತ್ರಣ ರೇಖೆಯಾದ್ಯಂತ ಆಕ್ರಮಣ ಅಥವಾ ಮಿಲಿಟರಿಗಳ ಮೂಲಕ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಅಮೆರಿಕಾ ಹೇಳಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು, ಇದು ಚೀನಾ-ಭಾರತದ ಗಡಿ ಸಮಸ್ಯೆ, ಇದು ಉಭಯ ದೇಶಗಳ ನಡುವಿನ ವಿಷಯವಾಗಿದೆ ಮತ್ತು ಇದರಲ್ಲಿ ಅಮೆರಿಕ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಹೇಳಿದೆ.

ಇದನ್ನು ಓದಿ: ಉತ್ತರಪ್ರದೇಶ: ಮುಸ್ಲಿಂ ಯುವಕನಿಗೆ ಗುಂಪಿನಿಂದ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...