Homeಮುಖಪುಟಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

ಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

- Advertisement -
- Advertisement -

ಚೀನಾ ದೇಶವು ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ ಮಾಡಿ, ಚೈನೀಸ್, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ ಮೂರನೇ ಸೆಟ್ ಹೆಸರುಗಳನ್ನು ಬಿಡುಗಡೆ ಮಾಡಿ ವಿವಾದ ಸೃಷ್ಟಿಸಿದೆ.

ಅರುಣಾಚಲ ಪ್ರದೇಶದ ಕೆಲವು ಭಾಗಗಳು ದಕ್ಷಿಣ ಟಿಬೆಟ್‌ನಲ್ಲಿವೆ ಎಂದು ಪ್ರತಿಪಾದಿಸಿ ಈ 11 ಸ್ಥಳಗಳೊಂದಿಗೆ ಚೀನಾ ನಕ್ಷೆಯನ್ನು ಬಿಡುಗಡೆ ಮಾಡಿದೆ, ಇದನ್ನು ಚೀನಾ, ‘ಝಂಗ್ನಾನ್ ಪ್ರದೇಶ’ ಎಂದು ಉಲ್ಲೇಖಿಸಿದೆ. ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರಕ್ಕೆ ಸಮೀಪವಿರುವ ಪಟ್ಟಣವನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ವರದಿಗಳು ಹೇಳುತ್ತಿವೆ.

ಹೆಸರಿಸಲಾದ 11 ಸ್ಥಳಗಳಲ್ಲಿ ಐದು ಪರ್ವತ ಶಿಖರಗಳು, ಎರಡು ವಸತಿ ಪ್ರದೇಶಗಳು, ಎರಡು ಭೂ ಪ್ರದೇಶಗಳು ಮತ್ತು ಎರಡು ನದಿಗಳು ಸೇರಿವೆ. ಚೀನಾ ತನ್ನ ವ್ಯಾಪ್ತಿಗೆ ಸೇರಿಸಿಕೊಳ್ಳಲು ಯತ್ನಿಸಿರುವ ಈ ಭೌಗೋಳಿಕ ಪ್ರದೇಶವನ್ನು ಮೊದಲಿನಿಂದಲೂ ಭಾರತ ನಿಯಂತ್ರಿಸುತ್ತಿದೆ ಮತ್ತು ನಿರ್ವಹಿಸುತ್ತಿದೆ.

ಸ್ಥಳಗಳನ್ನು ಮರುಹೆಸರಿಸಲು ಪ್ರಯತ್ನಿಸುತ್ತಿರುವ ಚೀನಾವು ಅಂತಹ ಪಟ್ಟಿಯನ್ನು ಹೈಲೈಟ್ ಮಾಡಿದ್ದು, ಅವುಗಳನ್ನು ‘ಪ್ರಮಾಣೀಕೃತ ಭೌಗೋಳಿಕ ಹೆಸರುಗಳು’ ಎಂದು ಕರೆದುಕೊಂಡಿದೆ.

2017ರಲ್ಲಿ ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಇದೇ ರೀತಿಯ ಆರು ಸ್ಥಳಗಳ ಪಟ್ಟಿಯನ್ನು ಹೊರತಂದಿತ್ತು; 2021ರಲ್ಲಿ ಮರುಹೆಸರಿಸಿದ 15 ಸ್ಥಳಗಳ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿತ್ತು.

ಇತ್ತೀಚಿನ ನಾಮಕರಣವನ್ನು ಏಪ್ರಿಲ್ 2 ರಂದು ಅಧಿಸೂಚನೆಯ ಮೂಲಕ ಮಾಡಲಾಗಿದೆ. “ಭೌಗೋಳಿಕ ಹೆಸರುಗಳ ನಿರ್ವಹಣೆಯ ರಾಜ್ಯ ಕೌನ್ಸಿಲ್‌ನ ಸಂಬಂಧಿತ ನಿಬಂಧನೆಗಳ ಪ್ರಕಾರ, [ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ] ಸಂಬಂಧಿತ ಇಲಾಖೆಗಳೊಂದಿಗೆ ಸೇರಿ ದಕ್ಷಿಣ ಟಿಬೆಟ್‌ನ ಕೆಲವು ಭೌಗೋಳಿಕ ಹೆಸರುಗಳನ್ನು ಪ್ರಮಾಣೀಕರಿಸಲಾಗಿದೆ. ದಕ್ಷಿಣ ಟಿಬೆಟ್‌ನಲ್ಲಿ (ಒಟ್ಟು 11) ಸಾರ್ವಜನಿಕ ಬಳಕೆಗಾಗಿ ಪೂರಕವಾಗಿ ಸ್ಥಳನಾಮಗಳ ಮೂರನೇ ಪಟ್ಟಿಯನ್ನು ಈಗ ಅಧಿಕೃತವಾಗಿ ಘೋಷಿಸಲಾಗಿದೆ” ಎಂದು ಅಧಿಸೂಚನೆ ತಿಳಿಸಿದೆ.

“ಚೀನಾ ನೀಡಿರುವ ಪ್ರಕಟಣೆಯ ಕುರಿತು ಪ್ರತಿಕ್ರಿಯೆ ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ಸಂಪರ್ಕಿಸಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ಪಡೆದಿಲ್ಲ. ಆದರೆ ಹಿಂದೆ ಇದೇ ರೀತಿಯ ಮರುನಾಮಕರಣ ಮತ್ತು ಪ್ರಮಾಣೀಕರಣ ಪ್ರಯತ್ನಗಳು ನಡೆದಿರುವುದನ್ನು ಸಚಿವಾಲಯ ತಿರಸ್ಕರಿಸಿದೆ” ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

“ಅರುಣಾಚಲ ಪ್ರದೇಶವು ಎಂದಿಗೂ ಮತ್ತು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಹೊಸ ಹೆಸರುಗಳನ್ನು ನೀಡುವುದರಿಂದ ಈ ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ವಕ್ತಾರ ಅರಿಂದಮ್ ಬಾಗ್ಚಿ 2021 ರಲ್ಲಿ ಹೇಳಿದ್ದರು.

2017 ಮತ್ತು 2021 ರಲ್ಲಿ ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಪ್ರತಿಕ್ರಿಯೆಯನ್ನು ನೀಡಿತ್ತು. ‘“ಝಂಗ್ನಾನ್ ಪ್ರದೇಶ’ ಎಂದು ಕರೆಯಲ್ಪಡುವ ಪ್ರದೇಶ ಚೀನಾಕ್ಕೆ ಸೇರಿದೆ. ಇದು ಐತಿಹಾಸಿಕ ಮತ್ತು ಆಡಳಿತಾತ್ಮಕ ಆಧಾರ” ಎಂದಿತ್ತು.

ಇದನ್ನೂ ಓದಿರಿ: ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಡೋಕ್ಲಾಮ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದರು. ಅದೇ ವರ್ಷದಲ್ಲಿ ಮೊದಲ ಪಟ್ಟಿಯ ಪ್ರಕಟಣೆ ಹೊರಬಿದ್ದಿದ್ದು ಗಮನಿಸಬೇಕಾದ ಸಂಗತಿ. ಆದರೆ ಎರಡನೇ ಪಟ್ಟಿ ಮತ್ತು ಇತ್ತೀಚಿನದು ಭಾರತೀಯ ಸೇನೆ ಹಾಗೂ ಪಿಎಲ್‌ಎ ಪಡೆಗಳ ನಡುವಿನ ಎಲ್‌ಎಸಿ ಬಿಕ್ಕಟ್ಟು ಪ್ರಾರಂಭವಾದ ನಂತರ ಹೊರಬಂದಿದೆ. ಹಲವಾರು ಸುತ್ತಿನ ಅಧಿಕೃತ ಮಾತುಕತೆಗಳು ಮತ್ತು ಮಿಲಿಟರಿ ಕಮಾಂಡರ್-ಮಟ್ಟದ ಮಾತುಕತೆಗಳ ಹೊರತಾಗಿಯೂ, ಗಡಿಗಳನ್ನು ಚೀನಾ ಉಲ್ಲಂಘಿಸಿರುವ ವರದಿಗಳಾಗಿವೆ.

ಚೀನಾ ಮತ್ತು ಭಾರತದ ನಡುವೆ ಉಂಟಾಗಿರುವ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿದೇಶಾಂಗ ಸಚಿವ ಎಸ್ ಜೈಶಂಕರ್, “ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ” ಎಂದಿದ್ದರು.

“ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...