Homeಮುಖಪುಟಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

ಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

- Advertisement -
- Advertisement -

ಚೀನಾ ದೇಶವು ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ ಮಾಡಿ, ಚೈನೀಸ್, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ ಮೂರನೇ ಸೆಟ್ ಹೆಸರುಗಳನ್ನು ಬಿಡುಗಡೆ ಮಾಡಿ ವಿವಾದ ಸೃಷ್ಟಿಸಿದೆ.

ಅರುಣಾಚಲ ಪ್ರದೇಶದ ಕೆಲವು ಭಾಗಗಳು ದಕ್ಷಿಣ ಟಿಬೆಟ್‌ನಲ್ಲಿವೆ ಎಂದು ಪ್ರತಿಪಾದಿಸಿ ಈ 11 ಸ್ಥಳಗಳೊಂದಿಗೆ ಚೀನಾ ನಕ್ಷೆಯನ್ನು ಬಿಡುಗಡೆ ಮಾಡಿದೆ, ಇದನ್ನು ಚೀನಾ, ‘ಝಂಗ್ನಾನ್ ಪ್ರದೇಶ’ ಎಂದು ಉಲ್ಲೇಖಿಸಿದೆ. ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರಕ್ಕೆ ಸಮೀಪವಿರುವ ಪಟ್ಟಣವನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ವರದಿಗಳು ಹೇಳುತ್ತಿವೆ.

ಹೆಸರಿಸಲಾದ 11 ಸ್ಥಳಗಳಲ್ಲಿ ಐದು ಪರ್ವತ ಶಿಖರಗಳು, ಎರಡು ವಸತಿ ಪ್ರದೇಶಗಳು, ಎರಡು ಭೂ ಪ್ರದೇಶಗಳು ಮತ್ತು ಎರಡು ನದಿಗಳು ಸೇರಿವೆ. ಚೀನಾ ತನ್ನ ವ್ಯಾಪ್ತಿಗೆ ಸೇರಿಸಿಕೊಳ್ಳಲು ಯತ್ನಿಸಿರುವ ಈ ಭೌಗೋಳಿಕ ಪ್ರದೇಶವನ್ನು ಮೊದಲಿನಿಂದಲೂ ಭಾರತ ನಿಯಂತ್ರಿಸುತ್ತಿದೆ ಮತ್ತು ನಿರ್ವಹಿಸುತ್ತಿದೆ.

ಸ್ಥಳಗಳನ್ನು ಮರುಹೆಸರಿಸಲು ಪ್ರಯತ್ನಿಸುತ್ತಿರುವ ಚೀನಾವು ಅಂತಹ ಪಟ್ಟಿಯನ್ನು ಹೈಲೈಟ್ ಮಾಡಿದ್ದು, ಅವುಗಳನ್ನು ‘ಪ್ರಮಾಣೀಕೃತ ಭೌಗೋಳಿಕ ಹೆಸರುಗಳು’ ಎಂದು ಕರೆದುಕೊಂಡಿದೆ.

2017ರಲ್ಲಿ ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಇದೇ ರೀತಿಯ ಆರು ಸ್ಥಳಗಳ ಪಟ್ಟಿಯನ್ನು ಹೊರತಂದಿತ್ತು; 2021ರಲ್ಲಿ ಮರುಹೆಸರಿಸಿದ 15 ಸ್ಥಳಗಳ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿತ್ತು.

ಇತ್ತೀಚಿನ ನಾಮಕರಣವನ್ನು ಏಪ್ರಿಲ್ 2 ರಂದು ಅಧಿಸೂಚನೆಯ ಮೂಲಕ ಮಾಡಲಾಗಿದೆ. “ಭೌಗೋಳಿಕ ಹೆಸರುಗಳ ನಿರ್ವಹಣೆಯ ರಾಜ್ಯ ಕೌನ್ಸಿಲ್‌ನ ಸಂಬಂಧಿತ ನಿಬಂಧನೆಗಳ ಪ್ರಕಾರ, [ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ] ಸಂಬಂಧಿತ ಇಲಾಖೆಗಳೊಂದಿಗೆ ಸೇರಿ ದಕ್ಷಿಣ ಟಿಬೆಟ್‌ನ ಕೆಲವು ಭೌಗೋಳಿಕ ಹೆಸರುಗಳನ್ನು ಪ್ರಮಾಣೀಕರಿಸಲಾಗಿದೆ. ದಕ್ಷಿಣ ಟಿಬೆಟ್‌ನಲ್ಲಿ (ಒಟ್ಟು 11) ಸಾರ್ವಜನಿಕ ಬಳಕೆಗಾಗಿ ಪೂರಕವಾಗಿ ಸ್ಥಳನಾಮಗಳ ಮೂರನೇ ಪಟ್ಟಿಯನ್ನು ಈಗ ಅಧಿಕೃತವಾಗಿ ಘೋಷಿಸಲಾಗಿದೆ” ಎಂದು ಅಧಿಸೂಚನೆ ತಿಳಿಸಿದೆ.

“ಚೀನಾ ನೀಡಿರುವ ಪ್ರಕಟಣೆಯ ಕುರಿತು ಪ್ರತಿಕ್ರಿಯೆ ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ಸಂಪರ್ಕಿಸಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ಪಡೆದಿಲ್ಲ. ಆದರೆ ಹಿಂದೆ ಇದೇ ರೀತಿಯ ಮರುನಾಮಕರಣ ಮತ್ತು ಪ್ರಮಾಣೀಕರಣ ಪ್ರಯತ್ನಗಳು ನಡೆದಿರುವುದನ್ನು ಸಚಿವಾಲಯ ತಿರಸ್ಕರಿಸಿದೆ” ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

“ಅರುಣಾಚಲ ಪ್ರದೇಶವು ಎಂದಿಗೂ ಮತ್ತು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಹೊಸ ಹೆಸರುಗಳನ್ನು ನೀಡುವುದರಿಂದ ಈ ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ವಕ್ತಾರ ಅರಿಂದಮ್ ಬಾಗ್ಚಿ 2021 ರಲ್ಲಿ ಹೇಳಿದ್ದರು.

2017 ಮತ್ತು 2021 ರಲ್ಲಿ ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಪ್ರತಿಕ್ರಿಯೆಯನ್ನು ನೀಡಿತ್ತು. ‘“ಝಂಗ್ನಾನ್ ಪ್ರದೇಶ’ ಎಂದು ಕರೆಯಲ್ಪಡುವ ಪ್ರದೇಶ ಚೀನಾಕ್ಕೆ ಸೇರಿದೆ. ಇದು ಐತಿಹಾಸಿಕ ಮತ್ತು ಆಡಳಿತಾತ್ಮಕ ಆಧಾರ” ಎಂದಿತ್ತು.

ಇದನ್ನೂ ಓದಿರಿ: ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಡೋಕ್ಲಾಮ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದರು. ಅದೇ ವರ್ಷದಲ್ಲಿ ಮೊದಲ ಪಟ್ಟಿಯ ಪ್ರಕಟಣೆ ಹೊರಬಿದ್ದಿದ್ದು ಗಮನಿಸಬೇಕಾದ ಸಂಗತಿ. ಆದರೆ ಎರಡನೇ ಪಟ್ಟಿ ಮತ್ತು ಇತ್ತೀಚಿನದು ಭಾರತೀಯ ಸೇನೆ ಹಾಗೂ ಪಿಎಲ್‌ಎ ಪಡೆಗಳ ನಡುವಿನ ಎಲ್‌ಎಸಿ ಬಿಕ್ಕಟ್ಟು ಪ್ರಾರಂಭವಾದ ನಂತರ ಹೊರಬಂದಿದೆ. ಹಲವಾರು ಸುತ್ತಿನ ಅಧಿಕೃತ ಮಾತುಕತೆಗಳು ಮತ್ತು ಮಿಲಿಟರಿ ಕಮಾಂಡರ್-ಮಟ್ಟದ ಮಾತುಕತೆಗಳ ಹೊರತಾಗಿಯೂ, ಗಡಿಗಳನ್ನು ಚೀನಾ ಉಲ್ಲಂಘಿಸಿರುವ ವರದಿಗಳಾಗಿವೆ.

ಚೀನಾ ಮತ್ತು ಭಾರತದ ನಡುವೆ ಉಂಟಾಗಿರುವ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿದೇಶಾಂಗ ಸಚಿವ ಎಸ್ ಜೈಶಂಕರ್, “ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ” ಎಂದಿದ್ದರು.

“ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...