Homeಮುಖಪುಟಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

ಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

- Advertisement -
- Advertisement -

ಚೀನಾ ದೇಶವು ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ ಮಾಡಿ, ಚೈನೀಸ್, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ ಮೂರನೇ ಸೆಟ್ ಹೆಸರುಗಳನ್ನು ಬಿಡುಗಡೆ ಮಾಡಿ ವಿವಾದ ಸೃಷ್ಟಿಸಿದೆ.

ಅರುಣಾಚಲ ಪ್ರದೇಶದ ಕೆಲವು ಭಾಗಗಳು ದಕ್ಷಿಣ ಟಿಬೆಟ್‌ನಲ್ಲಿವೆ ಎಂದು ಪ್ರತಿಪಾದಿಸಿ ಈ 11 ಸ್ಥಳಗಳೊಂದಿಗೆ ಚೀನಾ ನಕ್ಷೆಯನ್ನು ಬಿಡುಗಡೆ ಮಾಡಿದೆ, ಇದನ್ನು ಚೀನಾ, ‘ಝಂಗ್ನಾನ್ ಪ್ರದೇಶ’ ಎಂದು ಉಲ್ಲೇಖಿಸಿದೆ. ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರಕ್ಕೆ ಸಮೀಪವಿರುವ ಪಟ್ಟಣವನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ವರದಿಗಳು ಹೇಳುತ್ತಿವೆ.

ಹೆಸರಿಸಲಾದ 11 ಸ್ಥಳಗಳಲ್ಲಿ ಐದು ಪರ್ವತ ಶಿಖರಗಳು, ಎರಡು ವಸತಿ ಪ್ರದೇಶಗಳು, ಎರಡು ಭೂ ಪ್ರದೇಶಗಳು ಮತ್ತು ಎರಡು ನದಿಗಳು ಸೇರಿವೆ. ಚೀನಾ ತನ್ನ ವ್ಯಾಪ್ತಿಗೆ ಸೇರಿಸಿಕೊಳ್ಳಲು ಯತ್ನಿಸಿರುವ ಈ ಭೌಗೋಳಿಕ ಪ್ರದೇಶವನ್ನು ಮೊದಲಿನಿಂದಲೂ ಭಾರತ ನಿಯಂತ್ರಿಸುತ್ತಿದೆ ಮತ್ತು ನಿರ್ವಹಿಸುತ್ತಿದೆ.

ಸ್ಥಳಗಳನ್ನು ಮರುಹೆಸರಿಸಲು ಪ್ರಯತ್ನಿಸುತ್ತಿರುವ ಚೀನಾವು ಅಂತಹ ಪಟ್ಟಿಯನ್ನು ಹೈಲೈಟ್ ಮಾಡಿದ್ದು, ಅವುಗಳನ್ನು ‘ಪ್ರಮಾಣೀಕೃತ ಭೌಗೋಳಿಕ ಹೆಸರುಗಳು’ ಎಂದು ಕರೆದುಕೊಂಡಿದೆ.

2017ರಲ್ಲಿ ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಇದೇ ರೀತಿಯ ಆರು ಸ್ಥಳಗಳ ಪಟ್ಟಿಯನ್ನು ಹೊರತಂದಿತ್ತು; 2021ರಲ್ಲಿ ಮರುಹೆಸರಿಸಿದ 15 ಸ್ಥಳಗಳ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿತ್ತು.

ಇತ್ತೀಚಿನ ನಾಮಕರಣವನ್ನು ಏಪ್ರಿಲ್ 2 ರಂದು ಅಧಿಸೂಚನೆಯ ಮೂಲಕ ಮಾಡಲಾಗಿದೆ. “ಭೌಗೋಳಿಕ ಹೆಸರುಗಳ ನಿರ್ವಹಣೆಯ ರಾಜ್ಯ ಕೌನ್ಸಿಲ್‌ನ ಸಂಬಂಧಿತ ನಿಬಂಧನೆಗಳ ಪ್ರಕಾರ, [ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ] ಸಂಬಂಧಿತ ಇಲಾಖೆಗಳೊಂದಿಗೆ ಸೇರಿ ದಕ್ಷಿಣ ಟಿಬೆಟ್‌ನ ಕೆಲವು ಭೌಗೋಳಿಕ ಹೆಸರುಗಳನ್ನು ಪ್ರಮಾಣೀಕರಿಸಲಾಗಿದೆ. ದಕ್ಷಿಣ ಟಿಬೆಟ್‌ನಲ್ಲಿ (ಒಟ್ಟು 11) ಸಾರ್ವಜನಿಕ ಬಳಕೆಗಾಗಿ ಪೂರಕವಾಗಿ ಸ್ಥಳನಾಮಗಳ ಮೂರನೇ ಪಟ್ಟಿಯನ್ನು ಈಗ ಅಧಿಕೃತವಾಗಿ ಘೋಷಿಸಲಾಗಿದೆ” ಎಂದು ಅಧಿಸೂಚನೆ ತಿಳಿಸಿದೆ.

“ಚೀನಾ ನೀಡಿರುವ ಪ್ರಕಟಣೆಯ ಕುರಿತು ಪ್ರತಿಕ್ರಿಯೆ ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ಸಂಪರ್ಕಿಸಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ಪಡೆದಿಲ್ಲ. ಆದರೆ ಹಿಂದೆ ಇದೇ ರೀತಿಯ ಮರುನಾಮಕರಣ ಮತ್ತು ಪ್ರಮಾಣೀಕರಣ ಪ್ರಯತ್ನಗಳು ನಡೆದಿರುವುದನ್ನು ಸಚಿವಾಲಯ ತಿರಸ್ಕರಿಸಿದೆ” ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

“ಅರುಣಾಚಲ ಪ್ರದೇಶವು ಎಂದಿಗೂ ಮತ್ತು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಹೊಸ ಹೆಸರುಗಳನ್ನು ನೀಡುವುದರಿಂದ ಈ ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ವಕ್ತಾರ ಅರಿಂದಮ್ ಬಾಗ್ಚಿ 2021 ರಲ್ಲಿ ಹೇಳಿದ್ದರು.

2017 ಮತ್ತು 2021 ರಲ್ಲಿ ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಪ್ರತಿಕ್ರಿಯೆಯನ್ನು ನೀಡಿತ್ತು. ‘“ಝಂಗ್ನಾನ್ ಪ್ರದೇಶ’ ಎಂದು ಕರೆಯಲ್ಪಡುವ ಪ್ರದೇಶ ಚೀನಾಕ್ಕೆ ಸೇರಿದೆ. ಇದು ಐತಿಹಾಸಿಕ ಮತ್ತು ಆಡಳಿತಾತ್ಮಕ ಆಧಾರ” ಎಂದಿತ್ತು.

ಇದನ್ನೂ ಓದಿರಿ: ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಡೋಕ್ಲಾಮ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದರು. ಅದೇ ವರ್ಷದಲ್ಲಿ ಮೊದಲ ಪಟ್ಟಿಯ ಪ್ರಕಟಣೆ ಹೊರಬಿದ್ದಿದ್ದು ಗಮನಿಸಬೇಕಾದ ಸಂಗತಿ. ಆದರೆ ಎರಡನೇ ಪಟ್ಟಿ ಮತ್ತು ಇತ್ತೀಚಿನದು ಭಾರತೀಯ ಸೇನೆ ಹಾಗೂ ಪಿಎಲ್‌ಎ ಪಡೆಗಳ ನಡುವಿನ ಎಲ್‌ಎಸಿ ಬಿಕ್ಕಟ್ಟು ಪ್ರಾರಂಭವಾದ ನಂತರ ಹೊರಬಂದಿದೆ. ಹಲವಾರು ಸುತ್ತಿನ ಅಧಿಕೃತ ಮಾತುಕತೆಗಳು ಮತ್ತು ಮಿಲಿಟರಿ ಕಮಾಂಡರ್-ಮಟ್ಟದ ಮಾತುಕತೆಗಳ ಹೊರತಾಗಿಯೂ, ಗಡಿಗಳನ್ನು ಚೀನಾ ಉಲ್ಲಂಘಿಸಿರುವ ವರದಿಗಳಾಗಿವೆ.

ಚೀನಾ ಮತ್ತು ಭಾರತದ ನಡುವೆ ಉಂಟಾಗಿರುವ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿದೇಶಾಂಗ ಸಚಿವ ಎಸ್ ಜೈಶಂಕರ್, “ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ” ಎಂದಿದ್ದರು.

“ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...