Homeಮುಖಪುಟಚೀನಾ: ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ, 6,300 ಜನರಿಗೆ ಶಿಕ್ಷೆ

ಚೀನಾ: ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ, 6,300 ಜನರಿಗೆ ಶಿಕ್ಷೆ

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡುವುದರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಚೀನಾದ ಭದ್ರತಾ ಅಧಿಕಾರಿಗಳು 34,000 ಆನ್‌ಲೈನ್‌ ಖಾತೆಗಳನ್ನು ಮುಚ್ಚಿಸಿದ್ದಾರೆ. ಕಳೆದ ಏಪ್ರಿಲ್‌ನಿಂದ ಇದುವರೆಗೆ 6,300 ಜನರಿಗೆ ಶಿಕ್ಷೆ ವಿಧಿಸಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಸಿಸಿಟಿವಿ ವರದಿ ಮಾಡಿದೆ.

4,800ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 6,300ಕ್ಕೂ ಹೆಚ್ಚು ಜನರಿಗೆ ಶಿಕ್ಷೆ ವಿಧಿಸಲಾಗಿದೆ. ದೇಶದಾದ್ಯಂತ ವದಂತಿಗಳನ್ನು ಹರಡಿದ 34,000 ಆನ್‌ಲೈನ್‌ ಖಾತೆಗಳನ್ನು ಬಂದ್ ಮಾಡಲಾಗಿದೆ ಎಂದು ಸಾರ್ವಜನಿಕ ಭದ್ರತಾ ಸಚಿವಾಲಯದ ಅಧಿಕಾರಿ ಲಿ ಟಾಂಗ್ ತಿಳಿಸಿದ್ದಾರೆ.

ಸಾಮಾಜಿ ಸ್ಥಿರತೆ ಕಾಪಾಡಲು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬುವವರ ವಿರುದ್ಧ ಮುಂದಿನ 2024ರಲ್ಲಿ ವರ್ಷಪೂರ್ತಿ ಕಾರ್ಯಾಚರಣೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಲಿ ಟಾಂಗ್ ಹೇಳಿದ್ದಾರೆ.

ಎಪ್ರಿಲ್ ನಲ್ಲಿ `ಕ್ಲೀನ್ನೆಟ್’ ಅಭಿಯಾನ ಆರಂಭವಾದಾಗಿನಿಂದ ಪೊಲೀಸರು ಸಾಮಾಜಿಕ ಮಾಧ್ಯಮಗಳಲ್ಲಿನ 27,000 ಮಾಹಿತಿಗಳನ್ನು ಅಳಿಸಿದ್ದಾರೆ ಮತ್ತು ಸೈಬರ್ ಕಿರುಕುಳದ ಕಾರಣಕ್ಕೆ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬ್ಲಾಕ್ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಚೀನಾದಲ್ಲಿ ಇಂಟರ್‌ನೆಟ್‌ ವ್ಯವಸ್ಥೆ ಆಢಳಿತರೂಡ ಕಮ್ಯುನಿಷ್ಟ್ ಸರ್ಕಾರದ ಹಿಡಿತದಲ್ಲಿದೆ. ಇಲ್ಲಿ ಸರ್ಕಾರವನ್ನು ಟೀಕಿಸಿ ಯಾವುದೇ ಪೋಸ್ಟ್‌ಗಳನ್ನು ಹಾಕಿದರೆ ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಕೋವಿಡ್ ಕುರಿತ ನಿಜವಾದ ಸುದ್ದಿಯನ್ನು ಬಿತ್ತರಿಸಿದ ಮಾಧ್ಯಮಗಳ ವಿರುದ್ಧವೂ ಸರ್ಕಾರ ಕ್ರಮ ಕೈಗೊಂಡಿದೆ.

ಕೋವಿಡ್ 19 ಕುರಿತಂತೆ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದ ಬಗ್ಗೆ 2020ರ ನವೆಂಬರ್ 16ರಂದು ದಿ ಗಾರ್ಡಿಯನ್ ವರದಿ ಮಾಡಿತ್ತು. ಸುಳ್ಳು ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಮಾಜಿ ವಕೀಲೆ, ಪತ್ರಕರ್ತೆ ಜಾಂಗ್ ಝಾನ್ ಅವರನ್ನು 6 ತಿಂಗಳಿನಿಂದ ಶಾಂಫೈ ಬಂಧಿಖಾನೆಯಲ್ಲಿ ಇರಿಸಲಾಗಿತ್ತು. ಬಳಿಕ ನವೆಂಬರ್ 16ರಂದು ಆಕೆಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು ಎಂದು ದಿ ಗಾರ್ಡಿಯನ್ ಹೇಳಿತ್ತು.

ಇದನ್ನೂ ಓದಿ: ಸಾರ್ವಜನಿಕವಾಗಿ ನಿಂದನೆ ಮಾಡದಿದ್ದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....