Homeಅಂತರಾಷ್ಟ್ರೀಯಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

ಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

- Advertisement -
- Advertisement -

ಚೀನಾದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರತಿಭಟಿಸಿ ಮುಂಬರುವ ‘ಚಳಿಗಾಲದ ಬೀಜಿಂಗ್‌‌‌ ಒಲಿಂಪಿಕ್ಸ್‌’ ಅನ್ನು ರಾಜತಾಂತ್ರಿಕ ಬಹಿಷ್ಕಾರ ನಡೆಸಲಿದ್ದೇವೆ ಎಂದು ಅಮೆರಿಕಾ ಸೋಮವಾರ ದೃಢಪಡಿಸಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಚೀನಾ ಒಲಿಂಪಿಕ್ಸ್‌ನ ರಾಜತಾಂತ್ರಿಕ ಬಹಿಷ್ಕಾರಕ್ಕೆ ಅಮೆರಿಕಾ ಬೆಲೆ ತೆರಬೇಕಾಗುತ್ತದೆ ಎಂದು ಮಂಗಳವಾರ ಎಚ್ಚರಿಸಿದೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ಪ್ರಾರಂಭವಾಗುವ ಗೇಮ್ಸ್‌ ಬಗ್ಗೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಅಮೆರಿಕಾ ಹಲವು ತಿಂಗಳಿನಿಂದ ಜಗಳವಾಡುತ್ತಿದೆ. ಉಯಿಘರ್ ಅಲ್ಪಸಂಖ್ಯಾತರ ಮೇಲೆ ಚೀನಾ “ಜನಾಂಗೀಯ ಹತ್ಯೆ” ನಡೆಸುತ್ತಿದೆ ಎಂದು ಅಮೆರಿಕ ಇದೀಗ ರಾಜತಾಂತ್ರಿಕ ಬಹಿಷ್ಕಾರ ಕ್ರಮವನ್ನು ತೆಗೆದುಕೊಂಡಿದೆ.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಅಮೆರಿಕಾದ ಈ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಚೀನಾ, “ಅಮೆರಿಕಾ ತನ್ನ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ” ಎಂದು ಹೇಳಿದೆ. “ಇದಕ್ಕೆ ಕಾಯುತ್ತಿರಿ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸುಳ್ಳು ಮತ್ತು ವದಂತಿಗಳ ಆಧಾರದ ಮೇಲೆ ಸೈದ್ಧಾಂತಿಕ ಪೂರ್ವಾಗ್ರಹದಿಂದ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮಾಡುವ ಅಮೆರಿಕಾದ ಪ್ರಯತ್ನವು ಅದರ ಕೆಟ್ಟ ಉದ್ದೇಶಗಳನ್ನು ಮಾತ್ರ ಬಹಿರಂಗಪಡಿಸುತ್ತದೆ” ಎಂದು ಝಾವೊ ಹೇಳಿದ್ದಾರೆ.

“ಚಳಿಗಾಲದ ಒಲಿಂಪಿಕ್ಸ್ ಎಂದರೆ ರಾಜಕೀಯ ಪ್ರದರ್ಶನಗಳು ಮತ್ತು ರಾಜಕೀಯ ಕುಶಲತೆಯ ವೇದಿಕೆಯಲ್ಲ. ಅಮೆರಿಕಾವು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮತ್ತು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಆದರೆ ಅಮೆರಿಕಾದ ನಿರ್ಧಾರವನ್ನು ಅಮೆರಿಕಾದ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ರಾಜಕಾರಣಿಗಳು ವ್ಯಾಪಕವಾಗಿ ಸ್ವಾಗತಿಸಿದ್ದಾರೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ, “ಚೀನಾದ ಶಿನ್‌ಜಿಯಾಂಗ್‌ನಲ್ಲಿ ನಡೆಯುತ್ತಿರುವ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಇತರ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪರಿಗಣಿಸಿ ಆಡಳಿತವು ಯಾವುದೇ ರಾಜತಾಂತ್ರಿಕ ಅಥವಾ ಅಧಿಕೃತ ಪ್ರಾತಿನಿಧ್ಯವನ್ನು ಗೇಮ್ಸ್‌ಗೆ ಕಳುಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ(IOC)ಯು ಇದನ್ನು, “ಇದು ಸಂಪೂರ್ಣವಾಗಿ ಎರಡೂ ಸರ್ಕಾರಗಳ ರಾಜಕೀಯ ನಿರ್ಧಾರ. IOC ತನ್ನ ರಾಜಕೀಯ ತಟಸ್ಥತೆಯಲ್ಲಿ ಸಂಪೂರ್ಣವಾಗಿ ಗೌರವಿಸುತ್ತದೆ. ಒಲಂಪಿಕ್ ಕ್ರೀಡಾಕೂಟಗಳು ಮತ್ತು ಕ್ರೀಡಾಪಟುಗಳ ಭಾಗವಹಿಸುವಿಕೆಯು ರಾಜಕೀಯವನ್ನು ಮೀರಿದೆ ಎಂದು ಸ್ಪಷ್ಟಪಡಿಸುತ್ತದೆ ಮತ್ತು ನಾವು ಇದನ್ನು ಸ್ವಾಗತಿಸುತ್ತೇವೆ” ಎಂದು ತಿಳಿದೆ.

ಇದನ್ನೂ ಓದಿ:‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೂಜಾರಿ ಇಲ್ಲದೆ ಸೂರ್ಯ ಉದಯಿಸೋದಿಲ್ಲಾ ಅನ್ನೋ ಮೂರ್ಖತನ ಚೀನಾದ್ದು ,ಚೀನಾ ಇಲ್ಲದೆ ಅಮೇರಿಕಾ ಆರ್ಥಿಕ ವ್ಯವಹಾರವನ್ನು ಮಾಡಬಹುದು ,ಆದರೆ ಚೀನಾದ ನಕಲಿ ತಂತ್ರಜ್ಞಾನದ ಪರವಾಗಿ ಯಾರು ಚೀನಾ ನ ನಂಬಲ್ಲಾ ,ಅಮೇರಿಕ ಹಸ್ತಕ್ಷೇಪ ಇಲ್ಲದೆ ಚೈನಾ ಇಂಗು ತಿಂದ ಮಂಗನಂತೆ ಆಗೋದು ಕಂಡಿತ.

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...