Homeಅಂತರಾಷ್ಟ್ರೀಯಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

ಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

- Advertisement -
- Advertisement -

ಚೀನಾದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರತಿಭಟಿಸಿ ಮುಂಬರುವ ‘ಚಳಿಗಾಲದ ಬೀಜಿಂಗ್‌‌‌ ಒಲಿಂಪಿಕ್ಸ್‌’ ಅನ್ನು ರಾಜತಾಂತ್ರಿಕ ಬಹಿಷ್ಕಾರ ನಡೆಸಲಿದ್ದೇವೆ ಎಂದು ಅಮೆರಿಕಾ ಸೋಮವಾರ ದೃಢಪಡಿಸಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಚೀನಾ ಒಲಿಂಪಿಕ್ಸ್‌ನ ರಾಜತಾಂತ್ರಿಕ ಬಹಿಷ್ಕಾರಕ್ಕೆ ಅಮೆರಿಕಾ ಬೆಲೆ ತೆರಬೇಕಾಗುತ್ತದೆ ಎಂದು ಮಂಗಳವಾರ ಎಚ್ಚರಿಸಿದೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ಪ್ರಾರಂಭವಾಗುವ ಗೇಮ್ಸ್‌ ಬಗ್ಗೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಅಮೆರಿಕಾ ಹಲವು ತಿಂಗಳಿನಿಂದ ಜಗಳವಾಡುತ್ತಿದೆ. ಉಯಿಘರ್ ಅಲ್ಪಸಂಖ್ಯಾತರ ಮೇಲೆ ಚೀನಾ “ಜನಾಂಗೀಯ ಹತ್ಯೆ” ನಡೆಸುತ್ತಿದೆ ಎಂದು ಅಮೆರಿಕ ಇದೀಗ ರಾಜತಾಂತ್ರಿಕ ಬಹಿಷ್ಕಾರ ಕ್ರಮವನ್ನು ತೆಗೆದುಕೊಂಡಿದೆ.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಅಮೆರಿಕಾದ ಈ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಚೀನಾ, “ಅಮೆರಿಕಾ ತನ್ನ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ” ಎಂದು ಹೇಳಿದೆ. “ಇದಕ್ಕೆ ಕಾಯುತ್ತಿರಿ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸುಳ್ಳು ಮತ್ತು ವದಂತಿಗಳ ಆಧಾರದ ಮೇಲೆ ಸೈದ್ಧಾಂತಿಕ ಪೂರ್ವಾಗ್ರಹದಿಂದ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮಾಡುವ ಅಮೆರಿಕಾದ ಪ್ರಯತ್ನವು ಅದರ ಕೆಟ್ಟ ಉದ್ದೇಶಗಳನ್ನು ಮಾತ್ರ ಬಹಿರಂಗಪಡಿಸುತ್ತದೆ” ಎಂದು ಝಾವೊ ಹೇಳಿದ್ದಾರೆ.

“ಚಳಿಗಾಲದ ಒಲಿಂಪಿಕ್ಸ್ ಎಂದರೆ ರಾಜಕೀಯ ಪ್ರದರ್ಶನಗಳು ಮತ್ತು ರಾಜಕೀಯ ಕುಶಲತೆಯ ವೇದಿಕೆಯಲ್ಲ. ಅಮೆರಿಕಾವು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮತ್ತು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಆದರೆ ಅಮೆರಿಕಾದ ನಿರ್ಧಾರವನ್ನು ಅಮೆರಿಕಾದ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ರಾಜಕಾರಣಿಗಳು ವ್ಯಾಪಕವಾಗಿ ಸ್ವಾಗತಿಸಿದ್ದಾರೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ, “ಚೀನಾದ ಶಿನ್‌ಜಿಯಾಂಗ್‌ನಲ್ಲಿ ನಡೆಯುತ್ತಿರುವ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಇತರ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪರಿಗಣಿಸಿ ಆಡಳಿತವು ಯಾವುದೇ ರಾಜತಾಂತ್ರಿಕ ಅಥವಾ ಅಧಿಕೃತ ಪ್ರಾತಿನಿಧ್ಯವನ್ನು ಗೇಮ್ಸ್‌ಗೆ ಕಳುಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ(IOC)ಯು ಇದನ್ನು, “ಇದು ಸಂಪೂರ್ಣವಾಗಿ ಎರಡೂ ಸರ್ಕಾರಗಳ ರಾಜಕೀಯ ನಿರ್ಧಾರ. IOC ತನ್ನ ರಾಜಕೀಯ ತಟಸ್ಥತೆಯಲ್ಲಿ ಸಂಪೂರ್ಣವಾಗಿ ಗೌರವಿಸುತ್ತದೆ. ಒಲಂಪಿಕ್ ಕ್ರೀಡಾಕೂಟಗಳು ಮತ್ತು ಕ್ರೀಡಾಪಟುಗಳ ಭಾಗವಹಿಸುವಿಕೆಯು ರಾಜಕೀಯವನ್ನು ಮೀರಿದೆ ಎಂದು ಸ್ಪಷ್ಟಪಡಿಸುತ್ತದೆ ಮತ್ತು ನಾವು ಇದನ್ನು ಸ್ವಾಗತಿಸುತ್ತೇವೆ” ಎಂದು ತಿಳಿದೆ.

ಇದನ್ನೂ ಓದಿ:‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೂಜಾರಿ ಇಲ್ಲದೆ ಸೂರ್ಯ ಉದಯಿಸೋದಿಲ್ಲಾ ಅನ್ನೋ ಮೂರ್ಖತನ ಚೀನಾದ್ದು ,ಚೀನಾ ಇಲ್ಲದೆ ಅಮೇರಿಕಾ ಆರ್ಥಿಕ ವ್ಯವಹಾರವನ್ನು ಮಾಡಬಹುದು ,ಆದರೆ ಚೀನಾದ ನಕಲಿ ತಂತ್ರಜ್ಞಾನದ ಪರವಾಗಿ ಯಾರು ಚೀನಾ ನ ನಂಬಲ್ಲಾ ,ಅಮೇರಿಕ ಹಸ್ತಕ್ಷೇಪ ಇಲ್ಲದೆ ಚೈನಾ ಇಂಗು ತಿಂದ ಮಂಗನಂತೆ ಆಗೋದು ಕಂಡಿತ.

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...