Homeಅಂತರಾಷ್ಟ್ರೀಯಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

ಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

- Advertisement -
- Advertisement -

ಚೀನಾದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರತಿಭಟಿಸಿ ಮುಂಬರುವ ‘ಚಳಿಗಾಲದ ಬೀಜಿಂಗ್‌‌‌ ಒಲಿಂಪಿಕ್ಸ್‌’ ಅನ್ನು ರಾಜತಾಂತ್ರಿಕ ಬಹಿಷ್ಕಾರ ನಡೆಸಲಿದ್ದೇವೆ ಎಂದು ಅಮೆರಿಕಾ ಸೋಮವಾರ ದೃಢಪಡಿಸಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಚೀನಾ ಒಲಿಂಪಿಕ್ಸ್‌ನ ರಾಜತಾಂತ್ರಿಕ ಬಹಿಷ್ಕಾರಕ್ಕೆ ಅಮೆರಿಕಾ ಬೆಲೆ ತೆರಬೇಕಾಗುತ್ತದೆ ಎಂದು ಮಂಗಳವಾರ ಎಚ್ಚರಿಸಿದೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ಪ್ರಾರಂಭವಾಗುವ ಗೇಮ್ಸ್‌ ಬಗ್ಗೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಅಮೆರಿಕಾ ಹಲವು ತಿಂಗಳಿನಿಂದ ಜಗಳವಾಡುತ್ತಿದೆ. ಉಯಿಘರ್ ಅಲ್ಪಸಂಖ್ಯಾತರ ಮೇಲೆ ಚೀನಾ “ಜನಾಂಗೀಯ ಹತ್ಯೆ” ನಡೆಸುತ್ತಿದೆ ಎಂದು ಅಮೆರಿಕ ಇದೀಗ ರಾಜತಾಂತ್ರಿಕ ಬಹಿಷ್ಕಾರ ಕ್ರಮವನ್ನು ತೆಗೆದುಕೊಂಡಿದೆ.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಅಮೆರಿಕಾದ ಈ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಚೀನಾ, “ಅಮೆರಿಕಾ ತನ್ನ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ” ಎಂದು ಹೇಳಿದೆ. “ಇದಕ್ಕೆ ಕಾಯುತ್ತಿರಿ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸುಳ್ಳು ಮತ್ತು ವದಂತಿಗಳ ಆಧಾರದ ಮೇಲೆ ಸೈದ್ಧಾಂತಿಕ ಪೂರ್ವಾಗ್ರಹದಿಂದ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮಾಡುವ ಅಮೆರಿಕಾದ ಪ್ರಯತ್ನವು ಅದರ ಕೆಟ್ಟ ಉದ್ದೇಶಗಳನ್ನು ಮಾತ್ರ ಬಹಿರಂಗಪಡಿಸುತ್ತದೆ” ಎಂದು ಝಾವೊ ಹೇಳಿದ್ದಾರೆ.

“ಚಳಿಗಾಲದ ಒಲಿಂಪಿಕ್ಸ್ ಎಂದರೆ ರಾಜಕೀಯ ಪ್ರದರ್ಶನಗಳು ಮತ್ತು ರಾಜಕೀಯ ಕುಶಲತೆಯ ವೇದಿಕೆಯಲ್ಲ. ಅಮೆರಿಕಾವು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮತ್ತು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಆದರೆ ಅಮೆರಿಕಾದ ನಿರ್ಧಾರವನ್ನು ಅಮೆರಿಕಾದ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ರಾಜಕಾರಣಿಗಳು ವ್ಯಾಪಕವಾಗಿ ಸ್ವಾಗತಿಸಿದ್ದಾರೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ, “ಚೀನಾದ ಶಿನ್‌ಜಿಯಾಂಗ್‌ನಲ್ಲಿ ನಡೆಯುತ್ತಿರುವ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಇತರ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪರಿಗಣಿಸಿ ಆಡಳಿತವು ಯಾವುದೇ ರಾಜತಾಂತ್ರಿಕ ಅಥವಾ ಅಧಿಕೃತ ಪ್ರಾತಿನಿಧ್ಯವನ್ನು ಗೇಮ್ಸ್‌ಗೆ ಕಳುಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ(IOC)ಯು ಇದನ್ನು, “ಇದು ಸಂಪೂರ್ಣವಾಗಿ ಎರಡೂ ಸರ್ಕಾರಗಳ ರಾಜಕೀಯ ನಿರ್ಧಾರ. IOC ತನ್ನ ರಾಜಕೀಯ ತಟಸ್ಥತೆಯಲ್ಲಿ ಸಂಪೂರ್ಣವಾಗಿ ಗೌರವಿಸುತ್ತದೆ. ಒಲಂಪಿಕ್ ಕ್ರೀಡಾಕೂಟಗಳು ಮತ್ತು ಕ್ರೀಡಾಪಟುಗಳ ಭಾಗವಹಿಸುವಿಕೆಯು ರಾಜಕೀಯವನ್ನು ಮೀರಿದೆ ಎಂದು ಸ್ಪಷ್ಟಪಡಿಸುತ್ತದೆ ಮತ್ತು ನಾವು ಇದನ್ನು ಸ್ವಾಗತಿಸುತ್ತೇವೆ” ಎಂದು ತಿಳಿದೆ.

ಇದನ್ನೂ ಓದಿ:‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೂಜಾರಿ ಇಲ್ಲದೆ ಸೂರ್ಯ ಉದಯಿಸೋದಿಲ್ಲಾ ಅನ್ನೋ ಮೂರ್ಖತನ ಚೀನಾದ್ದು ,ಚೀನಾ ಇಲ್ಲದೆ ಅಮೇರಿಕಾ ಆರ್ಥಿಕ ವ್ಯವಹಾರವನ್ನು ಮಾಡಬಹುದು ,ಆದರೆ ಚೀನಾದ ನಕಲಿ ತಂತ್ರಜ್ಞಾನದ ಪರವಾಗಿ ಯಾರು ಚೀನಾ ನ ನಂಬಲ್ಲಾ ,ಅಮೇರಿಕ ಹಸ್ತಕ್ಷೇಪ ಇಲ್ಲದೆ ಚೈನಾ ಇಂಗು ತಿಂದ ಮಂಗನಂತೆ ಆಗೋದು ಕಂಡಿತ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...