Homeಅಂತರಾಷ್ಟ್ರೀಯಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

ಬೀಜಿಂಗ್ ಒಲಿಂಪಿಕ್ಸ್‌ಗೆ ಅಮೆರಿಕ ರಾಜತಾಂತ್ರಿಕ ಬಹಿಷ್ಕಾರ: ‘ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ ಚೀನಾ!

- Advertisement -
- Advertisement -

ಚೀನಾದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರತಿಭಟಿಸಿ ಮುಂಬರುವ ‘ಚಳಿಗಾಲದ ಬೀಜಿಂಗ್‌‌‌ ಒಲಿಂಪಿಕ್ಸ್‌’ ಅನ್ನು ರಾಜತಾಂತ್ರಿಕ ಬಹಿಷ್ಕಾರ ನಡೆಸಲಿದ್ದೇವೆ ಎಂದು ಅಮೆರಿಕಾ ಸೋಮವಾರ ದೃಢಪಡಿಸಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಚೀನಾ ಒಲಿಂಪಿಕ್ಸ್‌ನ ರಾಜತಾಂತ್ರಿಕ ಬಹಿಷ್ಕಾರಕ್ಕೆ ಅಮೆರಿಕಾ ಬೆಲೆ ತೆರಬೇಕಾಗುತ್ತದೆ ಎಂದು ಮಂಗಳವಾರ ಎಚ್ಚರಿಸಿದೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ಪ್ರಾರಂಭವಾಗುವ ಗೇಮ್ಸ್‌ ಬಗ್ಗೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಅಮೆರಿಕಾ ಹಲವು ತಿಂಗಳಿನಿಂದ ಜಗಳವಾಡುತ್ತಿದೆ. ಉಯಿಘರ್ ಅಲ್ಪಸಂಖ್ಯಾತರ ಮೇಲೆ ಚೀನಾ “ಜನಾಂಗೀಯ ಹತ್ಯೆ” ನಡೆಸುತ್ತಿದೆ ಎಂದು ಅಮೆರಿಕ ಇದೀಗ ರಾಜತಾಂತ್ರಿಕ ಬಹಿಷ್ಕಾರ ಕ್ರಮವನ್ನು ತೆಗೆದುಕೊಂಡಿದೆ.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಅಮೆರಿಕಾದ ಈ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಚೀನಾ, “ಅಮೆರಿಕಾ ತನ್ನ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ” ಎಂದು ಹೇಳಿದೆ. “ಇದಕ್ಕೆ ಕಾಯುತ್ತಿರಿ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸುಳ್ಳು ಮತ್ತು ವದಂತಿಗಳ ಆಧಾರದ ಮೇಲೆ ಸೈದ್ಧಾಂತಿಕ ಪೂರ್ವಾಗ್ರಹದಿಂದ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮಾಡುವ ಅಮೆರಿಕಾದ ಪ್ರಯತ್ನವು ಅದರ ಕೆಟ್ಟ ಉದ್ದೇಶಗಳನ್ನು ಮಾತ್ರ ಬಹಿರಂಗಪಡಿಸುತ್ತದೆ” ಎಂದು ಝಾವೊ ಹೇಳಿದ್ದಾರೆ.

“ಚಳಿಗಾಲದ ಒಲಿಂಪಿಕ್ಸ್ ಎಂದರೆ ರಾಜಕೀಯ ಪ್ರದರ್ಶನಗಳು ಮತ್ತು ರಾಜಕೀಯ ಕುಶಲತೆಯ ವೇದಿಕೆಯಲ್ಲ. ಅಮೆರಿಕಾವು ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಹಸ್ತಕ್ಷೇಪ ಮತ್ತು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ಆದರೆ ಅಮೆರಿಕಾದ ನಿರ್ಧಾರವನ್ನು ಅಮೆರಿಕಾದ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ರಾಜಕಾರಣಿಗಳು ವ್ಯಾಪಕವಾಗಿ ಸ್ವಾಗತಿಸಿದ್ದಾರೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ, “ಚೀನಾದ ಶಿನ್‌ಜಿಯಾಂಗ್‌ನಲ್ಲಿ ನಡೆಯುತ್ತಿರುವ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಇತರ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ಪರಿಗಣಿಸಿ ಆಡಳಿತವು ಯಾವುದೇ ರಾಜತಾಂತ್ರಿಕ ಅಥವಾ ಅಧಿಕೃತ ಪ್ರಾತಿನಿಧ್ಯವನ್ನು ಗೇಮ್ಸ್‌ಗೆ ಕಳುಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ(IOC)ಯು ಇದನ್ನು, “ಇದು ಸಂಪೂರ್ಣವಾಗಿ ಎರಡೂ ಸರ್ಕಾರಗಳ ರಾಜಕೀಯ ನಿರ್ಧಾರ. IOC ತನ್ನ ರಾಜಕೀಯ ತಟಸ್ಥತೆಯಲ್ಲಿ ಸಂಪೂರ್ಣವಾಗಿ ಗೌರವಿಸುತ್ತದೆ. ಒಲಂಪಿಕ್ ಕ್ರೀಡಾಕೂಟಗಳು ಮತ್ತು ಕ್ರೀಡಾಪಟುಗಳ ಭಾಗವಹಿಸುವಿಕೆಯು ರಾಜಕೀಯವನ್ನು ಮೀರಿದೆ ಎಂದು ಸ್ಪಷ್ಟಪಡಿಸುತ್ತದೆ ಮತ್ತು ನಾವು ಇದನ್ನು ಸ್ವಾಗತಿಸುತ್ತೇವೆ” ಎಂದು ತಿಳಿದೆ.

ಇದನ್ನೂ ಓದಿ:‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೂಜಾರಿ ಇಲ್ಲದೆ ಸೂರ್ಯ ಉದಯಿಸೋದಿಲ್ಲಾ ಅನ್ನೋ ಮೂರ್ಖತನ ಚೀನಾದ್ದು ,ಚೀನಾ ಇಲ್ಲದೆ ಅಮೇರಿಕಾ ಆರ್ಥಿಕ ವ್ಯವಹಾರವನ್ನು ಮಾಡಬಹುದು ,ಆದರೆ ಚೀನಾದ ನಕಲಿ ತಂತ್ರಜ್ಞಾನದ ಪರವಾಗಿ ಯಾರು ಚೀನಾ ನ ನಂಬಲ್ಲಾ ,ಅಮೇರಿಕ ಹಸ್ತಕ್ಷೇಪ ಇಲ್ಲದೆ ಚೈನಾ ಇಂಗು ತಿಂದ ಮಂಗನಂತೆ ಆಗೋದು ಕಂಡಿತ.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...