Homeಅಂತರಾಷ್ಟ್ರೀಯತಾರಕಕ್ಕೇರಿದ ವ್ಯಾಪಾರ ಸಮರ: ಅಮೆರಿಕ ಮೇಲೆ ಶೇ.125 ಸುಂಕ ಹೇರಿದ ಚೀನಾ

ತಾರಕಕ್ಕೇರಿದ ವ್ಯಾಪಾರ ಸಮರ: ಅಮೆರಿಕ ಮೇಲೆ ಶೇ.125 ಸುಂಕ ಹೇರಿದ ಚೀನಾ

- Advertisement -
- Advertisement -

ಟ್ರಂಪ್ ಪ್ರತಿ ಸುಂಕದಿಂದ ಪ್ರಾರಂಭಗೊಂಡಿರುವ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧ ತಾರಕಕ್ಕೇರಿದ್ದು, ಅಮೆರಿಕ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ.84 ರಿಂದ 125ಕ್ಕೆ ಹೆಚ್ಚಿಸುವುದಾಗಿ ಚೀನಾ ಘೋಷಿಸಿದೆ. ಶನಿವಾರದಿಂದಲೇ (ಏ.12) ಹೆಚ್ಚುವರಿ ಸುಂಕ ಜಾರಿಗೆ ಬರಲಿದೆ ಎಂದಿದೆ.

ಅಮೆರಿಕದ ಏಕಪಕ್ಷೀಯ ಬೆದರಿಕೆಯನ್ನು ಎದುರಿಸಲು ಕೈ ಜೋಡಿಸುವಂತೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಅವರು ಶುಕ್ರವಾರ ಯುರೋಪಿಯನ್ ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ.

ವರದಿಗಳ ಪ್ರಕಾರ, ಗುರುವಾರ (ಏ.10) ಚೀನಾ ಮೇಲಿನ ಪ್ರತಿ ಸುಂಕವನ್ನು ಅಮೆರಿಕ ಶೇ.125ಕ್ಕೆ ಹೆಚ್ಚಿಸಿತ್ತು. ಶುಕ್ರವಾರ ಅದನ್ನು ಶೇ.145ಕ್ಕೆ ಹೆಚ್ಚಿಸಲಾಗಿದೆ. ಈ ಬೆನ್ನಲ್ಲೇ ಅಮೆರಿಕ ಮೇಲಿನ ಸುಂಕವನ್ನು ಶೇ.125ಕ್ಕೆ ಹೆಚ್ಚಿಸುವುದಾಗಿ ಚೀನಾ ಘೋಷಿಸಿದೆ.

“ನಾವು ಪ್ರತಿ ಸುಂಕ ವಿಧಿಸಿದ್ದಕ್ಕೆ ನಮ್ಮ ಮೇಲಿನ ಸುಂಕ ಹೆಚ್ಚಿಸಿ ಚೀನಾ ಪ್ರತೀಕಾರ ತೀರಿಸಿಕೊಂಡಿದೆ. ಅದಕ್ಕೆ ನಾವು ಅವರಿಗೆ ಹೆಚ್ಚುವರಿ ಸುಂಕ ವಿಧಿಸಿದ್ದೇವೆ. ನಮ್ಮೊಂದಿಗೆ ಪ್ರತೀಕಾರಕ್ಕೆ ಮುಂದಾಗದ 75 ದೇಶಗಳಿಗೆ 90 ದಿನಗಳ ಸುಂಕ ವಿನಾಯಿತಿ ಘೋಷಿಸಿದ್ದೇವೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದರು.

“ಅಮೆರಿಕ ಈಗ ವಿಧಿಸಿರುವ ಸುಂಕವನ್ನು ಒಪ್ಪಿಕೊಂಡು ಅವರು ರಪ್ತು ಮಾಡಿರುವ ಸರಕುಗಳನ್ನು ಸ್ಪೀಕರಿಸಲು ಸಾಧ್ಯವಿಲ್ಲ” ಎಂದು ಚೀನಾದ ಹಣಕಾಸು ಸಚಿವಾಲಯ ಹೇಳಿದೆ. ಅಮೆರಿಕದ ಮುಂದಿನ ಕ್ರಮವನ್ನು ನಿರ್ಲಕ್ಷಿಸಲಾಗುವುದು ಎಂದಿದೆ.

“ಚೀನಾದ ಮೇಲೆ ಅಮೆರಿಕ ಅಸಹಜವಾಗಿ ಹೆಚ್ಚಿನ ಸುಂಕಗಳನ್ನು ಹೇರುತ್ತಿರುವುದು ಅರ್ಥಶಾಸ್ತ್ರದಲ್ಲಿ ಪ್ರಾಯೋಗಿಕ ಮಹತ್ವವಿಲ್ಲದ ಸಂಖ್ಯಾ ಆಟವಾಗಿದೆ. ಅಮೆರಿಕ ಈ ಆಟವನ್ನು ಮುಂದುವರಿಸಿದರೆ, ಚೀನಾ ಅದನ್ನು ನಿರ್ಲಕ್ಷಿಸುತ್ತದೆ” ಎಂದು ಹಣಕಾಸು ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಟ್ರಂಪ್ ಅವರ ಸುಂಕ ಹೇರಿಕೆಯಿಂದ ಉಂಟಾದ ಜಾಗತಿಕ ಆರ್ಥಿಕ ಪ್ರಕ್ಷುಬ್ಧತೆಗೆ ಅಮೆರಿಕ ಸಂಪೂರ್ಣ ಹೊಣೆ ಹೊರಬೇಕು ಎಂದಿದೆ.

ಅಮೆರಿಕದ ಸುಂಕ ಹೇರಿಕೆಯಿಂದ ವಿಶ್ವ ಆರ್ಥಿಕತೆ, ಜಾಗತಿಕ ಮಾರುಕಟ್ಟೆಗಳು ಮತ್ತು ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಗಳ ಮೇಲೆ ಗಂಭೀರ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಚೀನಾ ವಾಣಿಜ್ಯ ಸಚಿವಾಲಯದ ವಕ್ತಾರರು ಆರೋಪಿಸಿದ್ದಾರೆ.

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...