Homeಮುಖಪುಟಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

ಭಾರತದ 15 ಸ್ಥಳಗಳಿಗೆ ಚೀನಾ ಮರುನಾಮಕರಣ; ಮೋದಿ ಮೌನ: ಖರ್ಗೆ

- Advertisement -
- Advertisement -

ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ನಮ್ಮ ಪ್ರದೇಶದಲ್ಲಿ ಚೀನಾ ಎರಡು ಗ್ರಾಮಗಳನ್ನು ನಿರ್ಮಿಸಿದೆ ಎಂದು ಉಪಗ್ರಹ ಚಿತ್ರಗಳು ಇತ್ತೀಚೆಗೆ ಬಯಲು ಮಾಡಿವೆ ಎಂದು ಖರ್ಗೆ ಟ್ವೀಟ್‌ ಮಾಡಿದ್ದು, ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಬೀಜಿಂಗ್ ಜನತಾ ಪಕ್ಷದ (ಬಿಜೆಪಿ) ನಾಯಕರು ಚೀನಾದ ಹೆಸರು ಹೇಳಲೂ ಹಿಂಜರಿಯುತ್ತಾರೆ! ಚೀನಾ ಮಾಡಿರುವ ಭೂ ಕಬಳಿಕೆಯ ವಿಚಾರವನ್ನು ನಿರಾಕರಿಸುವ, ಆ ವಿಚಾರವನ್ನು ಚರ್ಚೆಯಿಂದ ದೂರ ಉಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ದಕ್ಷಿಣ ಟಿಬೆಟ್’ ಎಂದು ಕರೆಯಲ್ಪಡುವ ಅರುಣಾಚಲ ಪ್ರದೇಶ ರಾಜ್ಯದಲ್ಲಿ ಇರುವ ವಸತಿ ಪ್ರದೇಶಗಳು, ಪರ್ವತಗಳು, ನದಿಗಳು ಮತ್ತು ಮೌಂಟೇನ್ ಪಾಸ್ ಸೇರಿದಂತೆ 15 ಸ್ಥಳಗಳಿಗೆ ಚೀನಾ ಗುರುವಾರ ‘ಮರುನಾಮಕರಣ’ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭೂ ಗಡಿ ಕಾನೂನು’ ಜನವರಿ 1ರಿಂದ ಜಾರಿಗೆ ಬರಲಿದ್ದು, ಇದಕ್ಕೆ ಮುಂಚಿತವಾಗಿ ಈ ಬೆಳವಣಿಗೆ ಆಗಿರುವುದು ಆತಂಕ ತಂದಿದೆ. ಗಡಿ ನಿಯಂತ್ರಣವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಕಾನೂನು ಇದಾಗಿದ್ದು, ಚೀನಾದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಗೆ ಈ ಕಾನೂನು ನೇರವಾಗಿ ಸಂಬಂಧಿಸಿದೆ ಎಂದು ವರದಿಗಳಾಗಿವೆ.

ಭಾರತದ ಪ್ರದೇಶದೊಳಗೆ ಚೀನಾ ಅತಿಕ್ರಮಣ ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕರು ಮೊದಲಿನಿಂದಲೂ ಪ್ರಶ್ನಿಸುತ್ತಲೇ ಬಂದಿದ್ದಾರೆ. ನವೆಂಬರ್‌ನಲ್ಲಿ ರಾಹುಲ್ ಗಾಂಧಿಯವರು ಈ ಕುರಿತು ಪ್ರಶ್ನಿಸಿದ್ದರು. “ಒಕ್ಕೂಟ ಸರ್ಕಾರವು ಚೀನಾದ ವಿರುದ್ದ ಯಾವುದೇ ತಂತ್ರವನ್ನು ಹೊಂದಿಲ್ಲದಿರುವುದರಿಂದ, ಭಾರತದ ರಾಷ್ಟ್ರೀಯ ಭದ್ರತೆಯು ‘ಕ್ಷಮಿಸಲಾಗದಷ್ಟು ರಾಜಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದರು.

‘56 ಇಂಚಿನ ಎದೆ’ ಎಂಬ ಉಲ್ಲೇಖದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಮಿಸ್ಟರ್‌ 56 ಹೆದರುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದರು. ಸರ್ಕಾರ ಸುಳ್ಳುಗಳನ್ನೇ ಹೇಳುತ್ತಿರುವಾಗ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರ ಪರವಾಗಿ ತಾನು ನಿಲ್ಲುತ್ತೇನೆ ಎಂದು ಅವರು ತಿಳಿಸಿದ್ದರು.

ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚೀನಾ ಗಡಿ ಸಮಸ್ಯೆಯ ಬಗ್ಗೆ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದರು.

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿತ್ತು.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿತ್ತು. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿತ್ತು.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿತ್ತು. ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿತ್ತು ಎನ್ನಲಾಗಿದೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿದ ಚುನಾವಣಾ ಆಯೋಗ

0
ಬಿಜೆಪಿ ಸಂಸದೆಯ ವಿರುದ್ಧದ ಅವಹೇಳನಾಕಾರಿ ಹೇಳಿಕೆ ಆರೋಪದಲ್ಲಿ ಕಾಂಗ್ರೆಸ್‌ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಿ ಚುನಾವಣಾ ಆಯೋಗ ಆದೇಶವನ್ನು ಹೊರಡಿಸಿದೆ....