Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...