Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...