Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...