Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...