Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...