HomeಮುಖಪುಟG20 ಶೃಂಗಸಭೆ; 'ಹೆಸರು' ಬದಲಿಸುವ ಬದಲು, ಭಾರತ ಅಂತರಾಷ್ಟ್ರೀಯ ಪ್ರಭಾವ ಹೆಚ್ಚಿಸಲು ಅವಕಾಶವಾಗಿ ಬಳಸಬೇಕು: ಚೀನಾ...

G20 ಶೃಂಗಸಭೆ; ‘ಹೆಸರು’ ಬದಲಿಸುವ ಬದಲು, ಭಾರತ ಅಂತರಾಷ್ಟ್ರೀಯ ಪ್ರಭಾವ ಹೆಚ್ಚಿಸಲು ಅವಕಾಶವಾಗಿ ಬಳಸಬೇಕು: ಚೀನಾ  

- Advertisement -
- Advertisement -

G20 ಶೃಂಗಸಭೆಯನ್ನು ಭಾರತವು  ಅಂತರಾಷ್ಟ್ರೀಯ ಪ್ರಭಾವವನ್ನು ಹೆಚ್ಚಿಸಲು ಒಂದು ಅವಕಾಶವಾಗಿ ಬಳಸಬೇಕು ಎಂದು ಚೀನಾ ಹೇಳಿದೆ. ಇಂಡಿಯಾ-ಭಾರತ್‌ ಮರು ನಾಮಕರಣ ಚರ್ಚೆ ಮಧ್ಯೆ ನಡೆಯುತ್ತಿರುವ  G20 ಶೃಂಗಸಭೆ ಬಗ್ಗೆ ಈ ರೀತಿ ಚೀನಾ ಪ್ರತಿಕ್ರಿಯಿಸಿದೆ.

ಚೀನಾ, ತನ್ನ ಮುಖವಾಣಿ ಗ್ಲೋಬಲ್ ಟೈಮ್ಸ್ ಮೂಲಕ, ಹೆಸರು ಬದಲಾವಣೆಗಿಂತ ಭಾರತವು ತನ್ನ ಆರ್ಥಿಕ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸಬಹುದೇ ಎಂಬುವುದು ಮುಖ್ಯವಾದುದು ಎಂದು ಚೀನಾ ಹೇಳಿದೆ.

ಕ್ರಾಂತಿಕಾರಿ ಸುಧಾರಣೆ ಇಲ್ಲದೆ ಭಾರತ ಕ್ರಾಂತಿಕಾರಿಯಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಭಾರತವು ಹೆಚ್ಚುತ್ತಿರುವ ಜಾಗತಿಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಬಹುದು ಮತ್ತು ಇದನ್ನು ಬೆಳವಣಿಗೆಗೆ ಪ್ರೇರಕ ಶಕ್ತಿಯಾಗಿ ಪರಿವರ್ತಿಸಬಹುದು ಎಂದು ಚೀನಾ ಹೇಳಿದೆ.

ಜಿ20 ಶೃಂಗಸಭೆಯ ಔತಣಕೂಟಕ್ಕೆ ಸಂಬಂಧಿಸಿ  ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಟ್ ಆಫ್‌ ಭಾರತ್‌ ಎಂದು ಬರೆಯಲಾಗಿತ್ತು. ಇದು ದೇಶದ ಹೆಸರು ಬದಲಾವಣೆ ಮಾಡಲಾಗುತ್ತದೆ ಎಂಬ ಚರ್ಚೆಯನ್ನು ದೇಶದಲ್ಲಿ ಹುಟ್ಟು ಹಾಕಿತ್ತು.

ಇದರ ಬೆನ್ನಲ್ಲೇ ಮುಂಬರುವ G20 ಶೃಂಗಸಭೆಯ ಮೇಲೆ ಜಗತ್ತಿನ ಗಮನ ಕೇಂದ್ರೀಕೃತವಾಗಿರುವ ಸಮಯದಲ್ಲಿ  ದೆಹಲಿಯು ಜಗತ್ತಿಗೆ ಏನನ್ನು ಹೇಳಲು ಬಯಸುತ್ತದೆ? ಎಂದು ಚೀನಾ ಕೇಳಿದೆ.

ಇದಲ್ಲದೆ, ಇತ್ತೀಚೆಗೆ ಕೆಲವು ಚೀನೀ ಕಂಪನಿಗಳ ಮೇಲೆ  ಭಾರತ ನಿರ್ಬಂಧ ವಿಧಿಸಿರವ ಬಗ್ಗೆ ಪ್ರತಿಕ್ರಿಯಿಸಿದ ಚೀನಾ, ಭಾರತವು ತನ್ನ ಮಾರುಕಟ್ಟೆಯನ್ನು ಜಗತ್ತಿಗೆ ಸಂಪೂರ್ಣವಾಗಿ ತೆರೆಯುವಲ್ಲಿ ಹಿಂಜರಿಯುತ್ತಿದೆ. ಆದರೆ 1947ರ ನಂತರದ ಇತಿಹಾಸವು ಭಾರತವು ಪ್ರತಿ ಬಾರಿ ಸುಧಾರಣೆ ಮತ್ತು ಆರ್ಥಿಕ ಉದಾರೀಕರಣವನ್ನು ಉತ್ತೇಜಿಸುತ್ತದೆ ಎಂದು ಹೇಳುತ್ತದೆ. ಆರ್ಥಿಕ ಬೆಳವಣಿಗೆಗೆ ಬಲವಾದ ಪ್ರಚೋದನೆಯನ್ನು ನಿಡುತ್ತಿದೆ ಎಂದು ಹೇಳಿದೆ.

ಭಾರತವು ತನ್ನ ಆರ್ಥಿಕತೆಯನ್ನು ಸುಧಾರಿಸಲು, ವಿದೇಶಿ ಹೂಡಿಕೆಯನ್ನು ಆಕರ್ಷಿಸಲು ಮತ್ತು ವಿದೇಶಿ ಹೂಡಿಕೆದಾರರಿಗೆ ನ್ಯಾಯಯುತ ವ್ಯಾಪಾರ ವಾತಾವರಣವನ್ನು ಒದಗಿಸಲು G20 ಅಧ್ಯಕ್ಷ ಸ್ಥಾನವನ್ನು ಬಳಸಿಕೊಳ್ಳಬೇಕು  ಮತ್ತು ಕ್ರಮೇಣ ಈ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಚೀನಾ ಹೇಳಿದೆ.

ಇದನ್ನು ಓದಿ: ಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿ, ಅವರಿಗೆ ಮಾನವೀಯತೆ ಇಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...