Homeಅಂತರಾಷ್ಟ್ರೀಯಅಮೆರಿಕವನ್ನು ಹಿಂದಿಕ್ಕಲಿದೆ ಚೀನಾ ಆರ್ಥಿಕತೆ; ಯಾಕೆ ಗೊತ್ತೇ?

ಅಮೆರಿಕವನ್ನು ಹಿಂದಿಕ್ಕಲಿದೆ ಚೀನಾ ಆರ್ಥಿಕತೆ; ಯಾಕೆ ಗೊತ್ತೇ?

2028 ರಲ್ಲಿ ಅಮೇರಿಕಾವನ್ನು ಹಿಂದಿಕ್ಕಿ ಚೀನಾ ವಿಶ್ವದ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಲಿದೆ

- Advertisement -
- Advertisement -

ಕೊರೊನಾ ಸಾಂಕ್ರಮಿಕದಿಂದಾಗಿ ವಿಶ್ವದೆಲ್ಲೆಡೆ ಆರ್ಥಿಕ ಕುಸಿತ ಉಂಟಾಗಿದ್ದು, ವಿಶ್ವದ ದೊಡ್ಡಣ್ಣ ಎನಿಸಿಕೊಂಡಿದ್ದ ಅಮೆರಿಕ ಕೂಡಾ ಕೊರೊನಾ ಹೊಡೆತದಿಂದ ಹೊರತಾಗಿರಲಿಲ್ಲ. ಕೊರೊನಾ ಸಾಂಕ್ರಮಿಕದಿಂದಾಗಿ ಉಂಟಾದ ಆರ್ಥಿಕ ಏರುಪೇರಿನ ಕಾರಣಕ್ಕೆ, ಚೀನಾ ದೇಶವು ನಿರೀಕ್ಷೆಗಿಂತ ಐದು ವರ್ಷ ಮೊದಲೇ ವಿಶ್ವದ ಅತಿ ದೊಡ್ಡ ಆರ್ಥಿಕತೆಯ ದೇಶವಾಗಲಿದೆ ಎಂದು ಸೆಂಟರ್‌ ಫಾರ್‌ ಇಕನಾಮಿಕ್ಸ್‌ ಆಂಡ್ ಬ್ಯುಸಿನೆಸ್ ರಿಸರ್ಚ್ ಶನಿವಾರ ಪ್ರಕಟವಾದ ತನ್ನ ವಾರ್ಷಿಕ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ:ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಈ ಹಿಂದೆಯೆ ಚೀನಾವು ವಿಶ್ವದ ಅತೀ ದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಲಾಗಿತ್ತಾದರೂ, ಕೊರೊನಾ ಸಮಯದಲ್ಲಿ ತನ್ನ ಆರ್ಥಿಕತೆಯನ್ನು ಸರಿಯಾಗಿ ನಿರ್ವಹಿಸಿದ ಕಾರಣಕ್ಕೆ ಹಾಗೂ ದೇಶದ ಆರ್ಥಿಕತೆಯ ದೀರ್ಘಕಾಲಿಕ ಬೆಳವಣಿಗೆಯಿಂದ 2028 ರಲ್ಲಿ ಅಮೇರಿಕಾವನ್ನು ಹಿಂದಿಕ್ಕಿ ಚೀನಾ ವಿಶ್ವದ ಅತೀ ದೊಡ್ಡ ಆರ್ಥಿಕತೆಯಿರುವ ದೇಶವಾಗಲಿದೆ ಎಂದು ವರದಿ ಹೇಳಿದೆ.

ಚೀನಾ 2021-25 ರ ಆರ್ಥಿಕ ವರ್ಷಕ್ಕೆ ಸರಾಸರಿ 5.7 % ಆರ್ಥಿಕ ಬೆಳವಣಿಗೆಯನ್ನು ಹೊಂದಲಿದ್ದು, 2026-30 ರ ಅವಧಿಯಲ್ಲಿ 4.5% ಕ್ಕೆ ಆರ್ಥಿಕತೆ ಇಳಿಕೆಯಾಗಲಿದೆ ಎಂದು ವರದಿ ಹೇಳಿದೆ.

ಅಮೆರಿಕ ಆರ್ಥಿಕತೆ 2021 ರಲ್ಲಿ ಬೆಳವಣಿಗೆಯಾಗುವ ಸಾಧ್ಯತೆಯಿದೆ ಎಂದು ವರದಿ ಹೇಳಿದ್ದು, ಆದರೆ ಈ ಬೆಳವಣಿಗೆಯು 2022 ಮತ್ತು 2024 ರ ನಡುವೆ 1.9% ಇಳಿಕೆಯಾಗಲಿದೆ ಮತ್ತು ನಂತರದ ವರ್ಷಗಳಲ್ಲಿ 1.6% ಕ್ಕೆ ಇಳಿಯುತ್ತದೆ ಎಂದು ವರದಿಯು ಸೂಚಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...