Homeಮುಖಪುಟಚೀನಾ ದ್ವೇಷ: ಡ್ಯ್ರಾಗನ್ ಹಣ್ಣಿಗೆ ಬಿಜೆಪಿ ಕಚೇರಿಯ ಹೆಸರಿಟ್ಟ ಗುಜರಾತ್ ಸರ್ಕಾರ!

ಚೀನಾ ದ್ವೇಷ: ಡ್ಯ್ರಾಗನ್ ಹಣ್ಣಿಗೆ ಬಿಜೆಪಿ ಕಚೇರಿಯ ಹೆಸರಿಟ್ಟ ಗುಜರಾತ್ ಸರ್ಕಾರ!

ಆದರೆ ಡ್ರ್ಯಾಗನ್ ಹಣ್ಣನ್ನು ಹೆಚ್ಚಾಗಿ ದಕ್ಷಿಣ ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುತ್ತದೆ.

- Advertisement -
- Advertisement -

ಚೀನಾ ದೇಶಕ್ಕೆ ಸಂಬಂಧಿಸಿದೆ ಎಂದು ಡ್ಯ್ರಾಗನ್ ಹಣ್ಣಿನ ಹೆಸರನ್ನು ಗುಜರಾತ್‌ ಸರ್ಕಾರ ಬದಲಾಯಿಸಿದೆ. ಹಣ್ಣಿನ ಹೆಸರನ್ನು ’ಕಮಲಂ’ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಗುಜರಾತ್‌ ಮುಖ್ಯಮಂತ್ರಿ ವಿಜಯ್ ರೂಪಾನಿ ಮಂಗಳವಾರ ಹೇಳಿದ್ದಾರೆ.

“ಡ್ರ್ಯಾಗನ್ ಹಣ್ಣಿನ ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಣ್ಣಿನ ಹೊರ ಆಕಾರವು ಕಮಲವನ್ನು ಹೋಲುತ್ತದೆ, ಆದ್ದರಿಂದ ಡ್ರ್ಯಾಗನ್ ಹಣ್ಣನ್ನು ಕಮಲಂ ಎಂದು ಮರುನಾಮಕರಣ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಹಡಗು ಸಚಿವಾಲಯ: ಹೆಸರು ಮರುನಾಮಕರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

“ಡ್ರ್ಯಾಗನ್ ಹಣ್ಣಿನ ಹೆಸರು ಚೀನಾಕ್ಕೆ ಸಂಬಂಧಿಸಿದೆ, ಆದ್ದರಿಂದ ಅದರ ಹೆಸರನ್ನು ಬದಲಾಯಿಸಿದ್ದೇವೆ” ಎಂದು ಅವರು ಹೇಳಿದ್ದಾರೆ. ಕಮಲಕ್ಕೆ ಸಂಸ್ಕೃತದಲ್ಲಿ “ಕಮಲಂ” ಎಂದು ಕರೆಯುತ್ತಾರೆ. ಇದು ಗುಜರಾತ್ ಬಿಜೆಪಿ ಕಚೇರಿಯ ಹೆಸರು ಕೂಡಾ ಆಗಿದೆ.

ಕಳೆದ ಕೆಲವು ವರ್ಷಗಳಿಂದ ಡ್ರ್ಯಾಗನ್ ಹಣ್ಣು ಗುಜರಾತ್‌ನಲ್ಲಿ ಜನಪ್ರಿಯ ಹಣ್ಣುಗಳಲ್ಲಿ ಒಂದಾಗಿ ಸೇರ್ಪಡೆಯಾಗಿದೆ. ಇದನ್ನು ರಾಜ್ಯದ ಭುಜ್, ಗಾಂಧಿಧಾಮ್ ಮತ್ತು ಮಾಂಡ್ವಿಗಳಲ್ಲಿ ಬೆಳೆಯಲಾಗುತ್ತದೆ.

ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ “ಮನ್ ಕಿ ಬಾತ್” ನಲ್ಲಿ ಈ ಹಣ್ಣನ್ನು ಪ್ರಸ್ತಾಪಿಸಿದ್ದರು. ಭಾರತವು ಸ್ವಾವಲಂಬಿಯಾಗಲು ಸಾಧ್ಯವಾಗುವಂತೆ ಆಮದು ಮಾಡಿದ ಹಣ್ಣುಗಳನ್ನು ಬೆಳೆಸಿದ್ದಕ್ಕಾಗಿ ಅವರು ಕಚ್‌ನ ರೈತರನ್ನು ಶ್ಲಾಘಿಸಿದ್ದರು. ಡ್ರ್ಯಾಗನ್ ಹಣ್ಣನ್ನು ಹೆಚ್ಚಾಗಿ ದಕ್ಷಿಣ ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ತನ್ನ ಮರುನಾಮಕರಣದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...