Homeಅಂತರಾಷ್ಟ್ರೀಯಭಾರತದ ಮೇಲೆ ಚೀನಾದ ಆಕ್ರಮಣ ಸಲ್ಲದು: ಅಮೆರಿಕಾ ವಿದೇಶಾಂಗ ಸಮಿತಿ ಸದಸ್ಯನ ವಿರೋಧ

ಭಾರತದ ಮೇಲೆ ಚೀನಾದ ಆಕ್ರಮಣ ಸಲ್ಲದು: ಅಮೆರಿಕಾ ವಿದೇಶಾಂಗ ಸಮಿತಿ ಸದಸ್ಯನ ವಿರೋಧ

- Advertisement -
- Advertisement -

ಲಡಾಕ್‌ನಲ್ಲಿನ ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತದ ವಿರುದ್ಧದ ಚೀನಾದ ಆಕ್ರಮಣದಿಂದ “ಅತ್ಯಂತ ಕಳವಳಗೊಂಡಿದ್ದೇನೆ” ಎಂದು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಫಾರಿನ್ ಅಫೇರ್ಸ್ ಕಮಿಟಿಯ ಮುಖ್ಯಸ್ಥ ಎಲಿಯಟ್ ಎಂಗಲ್ ಹೇಳಿದ್ದಾರೆ. ರಾಜತಾಂತ್ರಿಕತೆ ಮತ್ತು ಅಸ್ತಿತ್ವದಲ್ಲಿರುವ ಗಡಿ ಪ್ರಶ್ನೆಗಳನ್ನು ಪರಿಹರಿಸುವ ಕಾರ್ಯವಿಧಾನಗಳು ಮತ್ತು ಮಾನದಂಡಗಳನ್ನು ಗೌರವಿಸಿ ಎಂದು ಚೀನಾಕ್ಕೆ ಒತ್ತಾಯಿಸಿದ್ದಾರೆ.

“ಭಾರತ-ಚೀನಾ ಗಡಿಯಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಚೀನಾದ ಆಕ್ರಮಣದಿಂದ ನಾನು ತುಂಬಾ ಕಳವಳಗೊಂಡಿದ್ದೇನೆ. ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ಸಂಘರ್ಷಗಳನ್ನು ಪರಿಹರಿಸುವ ಬದಲು ತನ್ನ ನೆರೆಹೊರೆಯವರನ್ನು ಪೀಡಿಸಲು ಚೀನಾ ಸಿದ್ಧವಾಗಿದೆ ಎಂದು ಮತ್ತೊಮ್ಮೆ ತೋರಿಸುತ್ತಿದೆ” ಎಂದು ಡೆಮಾಕ್ರಟಿಕ್‌ ಪಕ್ಷದ ಎಂಗಲ್ ಹೇಳಿದ್ದಾರೆ.

“ಎಲ್ಲಾ ದೇಶಗಳು ಒಂದೇ ರೀತಿಯ ನಿಯಮಗಳಿಗೆ ಬದ್ಧರಾಗಿರಬೇಕು. ಇಲ್ಲಿದಿದ್ದಲ್ಲಿ ನಾವು ‘ಸರಿಹೊಂದುವಂತಹ’ ಜಗತ್ತಿನಲ್ಲಿ ವಾಸಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಚೀನಾದ ಸೈನ್ಯವು ಭಾರತೀಯ ಭೂಪ್ರದೇಶಕ್ಕೆ ನುಸುಳಿದ ನಂತರ ಮೇ ಆರಂಭದಿಂದಲೂ ಭಾರತೀಯ ಮತ್ತು ಚೀನಾದ ಸೈನಿಕರು ಲಡಾಖ್‌ನ ವಾಸ್ತವಿಕ ಗಡಿಯಲ್ಲಿ ಮುಖಾಮುಖಿಯಾಗಿದ್ದಾರೆ ಎಂದು ಭಾರತೀಯ ಮಿಲಿಟರಿ ಅಧಿಕಾರಿಗಳು ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಎರಡೂ ಕಡೆಯವರು ರಕ್ಷಣಾ ಕಾರ್ಯಗಳನ್ನು ಸಜ್ಜುಗೊಳಿಸಿದ್ದಾರೆ.

ಲಡಾಖ್ ಮತ್ತು ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಚೀನಾದ ಮಿಲಿಟರಿ ತನ್ನ ಸೈನಿಕರನ್ನು ಜಮಾಯಿಸಿದ್ದು, ಗಸ್ತು ತಿರುಗುತ್ತಿದ್ದಾರೆ ಎಂದು ಭಾರತ ಹೇಳಿದೆ. ಈ ವಾದವನ್ನು ನಿರಾಕರಿಸಿರುವ ಚೀನಾ, ನಮ್ಮ ಭೂಪ್ರದೇಶವನ್ನು ಭಾರತೀಯ ಪಡೆಗಳನ್ನು ಅತಿಕ್ರಮಣ ಮಾಡುವುದರಿಂದ ಎರಡು ಸೈನ್ಯಗಳ ನಡುವೆ ಉದ್ವಿಗ್ನತೆ ಉಂಟಾಗುತ್ತಿದೆ ಎಂದು ಹೇಳಿದೆ.

ಕಳೆದ ವಾರ ಈ ಕುರಿತು ತಾನು ಮಧ್ಯಸ್ಥಿಕೆ ವಹಿಸಲು ಸಮರ್ಥ ಮತ್ತು ಸಿದ್ದನಿರುವುದಾಗಿ ಅಮೆರಿಕಾ ಅಧ್ಯಕ್ಷ ಟ್ರಂಪ್‌ ಘೋಷಿಸಿದ್ದರು. ಈ ಕುರಿತು ಭಾರತದ ಪ್ರಧಾನಿ ಮೋದಿಯೊಡನೆ ಮಾತನಾಡಿದ್ದೇನೆ ಎಂದು ಸಹ ಹೇಳಿದ್ದರು. ಆದರೆ ಭಾರತವು ಟ್ರಂಪ್‌ ಪ್ರಸ್ತಾಪವನ್ನು ತಿರಸ್ಕರಿಸಿತ್ತು ಮತ್ತು ಮೋದಿಯೊಡನೆ ಈ ವಿಚಾರ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಸದ್ಯಕ್ಕೆ ಟ್ರಂಪ್ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ಬದಿಗೊತ್ತಿ ಭಾರತವು ಮಿಲಿಟರಿ ನಿಲುವನ್ನು ಎದುರಿಸಲು ಚೀನಾದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದೆ.


ಇದನ್ನೂ ಓದಿ: ಕ್ಯಾಮರ ಎದುರೆ ಇಸ್ಲಾಮೋಫೋಬಿಯ ಹರಡಿದ ಪ್ರಾಂಶುಪಾಲೆ: ತೀವ್ರ ವಿರೋಧ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಡಿ ವಿವಾದಗಳನ್ನು ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಬೇಕು. ಯುದ್ಧ ವಿನಾಶಕಾರಿ.

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...